


ಶಾಸಕ ಭೀಮಣ್ಣ ಶಾಕ್…….


ಸಿದ್ದಾಪುರ: ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹಿರೋ ಡಾ.ಶಿವರಾಜಕುಮಾರ ಹಾಗೂ ಗೀತಾ ಶಿವರಾಜಕುಮಾರ ಮಂಗಳವಾರ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾಕ್ಕೆ ಆಗಮಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು.
ಶಿವರಾಜಕುಮಾರ ದಂಪತಿಗಳು ಬರುತ್ತಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಮಂಗಳವಾರ ಹಾರ್ಸಿಕಟ್ಟಾದಲ್ಲಿ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಹಾಗೂ ಮತ್ತಿತರರು ಕಾಯೋನ್ಮುಖರಾದಾಗ ಶಿವರಾಜಕುಮಾರ ದಂಪತಿಗಳು ಆಗಮಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಹಿಪ್ರಾ ಶಾಲಾ ಮಕ್ಕಳು, ಮಹಿಳೆಯರು, ಶಿವರಾಜಕುಮಾರ ಅವರ ಅಭಿಮಾನಿಗಳು ಅವರನ್ನು ಮುತ್ತಿಕೊಂಡು ಸೆಲ್ಪಿತೆಗೆದುಕೊಂಡು ಅವರೊಂದಿಗೆ ಮಾತುಕತೆ ನಡೆಸಿದರು. ಶಿವರಾಜಕುಮಾರ ಹಾಗೂ ಗೀತಾ ಅವರು ಎಲ್ಲರನ್ನು ಹಸನ್ಮುಖದಿಂದ ಮಾತನಾಡಿಸಿ ಸಂತಸಪಟ್ಟು ಗ್ರಾಮೀಣ ಜನತೆ ತಮ್ಮ ಮೇಲೆ ಇಟ್ಟ ವಿಶ್ವಾಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕ ಭೀಮಣ್ಣ ನಾಯ್ಕ, ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಗ್ರಾಪಂ ಅಧ್ಯಕ್ಷೆ ಹನುಮಕ್ಕ ಭೋವಿ. ಉಪಾಧ್ಯಕ್ಷ ಸಿದ್ದಾರ್ಥ ಗೌಡರ್, ಸದಸ್ಯ ಅಶೋಕ ನಾಯ್ಕ, ಅನಂತಹೆಗಡೆ, ಶ್ರೀನಿವಾಸ ಶಾನಭಾಗ, ಶಾಂತ ಗೌಡರ್ ಸೇರಿದಂತೆ ನೂರಾರು ಜನರು ಸೇರಿದ್ದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
