

ಸಿದ್ದಾಪುರ,ಫೆ,೨೬- ಮೂಢ ನಂಬಿಕೆಗಳಿಂದ ಮುಕ್ತರಾಗಿ ಶಿಕ್ಷಣ,ಸಾಂಸ್ಕೃತಿಕ, ರಾಜಕೀಯವಾಗಿ ಬೆಳೆಯದಿದ್ದರೆ ನಮಗೆ ಭವಿಷ್ಯವಿಲ್ಲ ಎಂದು ಇಂದು ತರಳಿಯಲ್ಲಿ ನಡೆದ ಧರ್ಮಸಭೆ ಪ್ರತಿಪಾದಿಸಿದೆ.

ತರಳಿ ಸಂಸ್ಥಾನ ಮಠದಲ್ಲಿ ನಡೆದ ಶಿವಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ನಡೆದ ಧರ್ಮಸಭೆಯನ್ನು ದೀವರ ಸಮಾಜದ ಹಿರಿಯ ಧುರೀಣ ಮಾಜಿ ಸಚಿವ ಕಾಗೋಡುತಿಮ್ಮಪ್ಪ ಉದ್ಘಾಟಿಸಿದರು. ಮಠದಿಂದ ನಡೆದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಸಮಾಜ ಮುನ್ನಡೆಯಬೇಕಾದರೆ ದೀವರು ಸೇರಿದಂತೆ ಹಿಂದುಳಿದ ವರ್ಗಗಳು ಶಿಕ್ಷಣ-ಸಂಸ್ಕಾರಕ್ಕೆ ಮಹತ್ವ ನೀಡಬೇಕು ಎಂದರು.
ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಭೀಮಣ್ಣ ನಾಯ್ಕ ಮಾತನಾಡಿ ಮಠ-ಸಮಾಜದ ಅಭಿವೃದ್ಧಿಗೆ ಅವಶ್ಯ ಸಹಕಾರ ನೀಡುವ ಭರವಸೆ ನೀಡಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಸಾರಂಗನ ಜೆಡ್ಡು ಕಾರ್ತಿಕೇಯ ಮಠದ ಸ್ವಾಮೀಜಿ ಅವಧೂತ ಯೋಗೇಂದ್ರ ಸ್ವಾಮೀಜಿ ಮಾತನಾಡಿ ಪ್ರಭಾವಿಗಳು, ಪಟ್ಟಭದ್ರರು ವೈಯಕ್ತಿಕವಾಗಿ, ಸಾರ್ವಜನಿಕವಾಗಿ ಸಮಾಜ, ಮಠ, ವ್ಯಕ್ತಿ ನೋಡದೆ ಅಡ್ಡಾಗುತ್ತಾರೆ.ಇದನ್ನು ಎದುರಿಸುವ ಛಾತಿ ಇಲ್ಲದಿದ್ದರೆ ಬದುಕುಳಿಯುವುದೇ ಕಷ್ಟ. ಆಗ ಸಾಧಕರು, ಅವರ ಜೀವನ ನಮಗೆ ಮಾರ್ಗದರ್ಶಿಯಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
