ಎರಡು ವಾರಗಳ ಎರಡು ಶ್ರದ್ಧಾಂಜಲಿಗಳು….. ಛೇ ದೇವರು ಇಷ್ಟು ಕ್ರೂರಿಯಾಗಬಾರದಿತ್ತು!

ನಾಳೆ ಬಾ ಎನ್ನಬಹುದು ಅತಿಥಿಗಳಿಗೆ…. ಆದರೆ ಸಾವಿಗೆ ನಾಳೆ ಬಾ ಎನ್ನುವಂತಿಲ್ಲ…

ಒಬ್ಬ ಸಹೋದರನಂತಿದ್ದ ಸ್ನೇಹಿತ, ಸ್ನೇಹಿತನಂತಿದ್ದ ಸಹೋದರ ಎನ್ನಬಹುದು ಹೆಸರು ಶಿವಶಂಕರ್.‌ ನಮ್ಮ ನಡುವೆ ಓಡಾಡಿಕೊಂಡಿದ್ದ ಸ್ನೇಹಿತ. ಸ್ಕೂಟರ್‌, ಕಾರ್‌ ಮೇಲೆಲ್ಲಾ ಸ್ವಪ್ನದಂತೆ ಸಾಗಿ ಹೋಗುತಿದ್ದ ಈತ ನಮ್ಮೆಲ್ಲರ ಗೆಳೆಯ.

ನಮ್ಮ ಗೆಳೆಯ ಅಂದಮೇಲೆ ಬಡವನಾಗಿರಬೇಕು, ಕ್ರೀಯಾಶೀಲನಾಗಿರಬೇಕು, ಪರಿಶ್ರಮಿಯಾಗಿರಬೇಕು, ಕನಸುಗಾರನಾಗಿರಬೇಕು ಹೀಗೆ ಏನೇನೆಲ್ಲಾ… ಈತನಿಗೆ ಕೆಲವು ರಿಯಾಯತಿಗಳಿದ್ದವು.

ವಿನಾಯಿತಿಗಳನ್ನು ಪಡೆಯಲೆಂಬಂತೆಯೇ ಹಾಗಿದ್ದನೋ ಕಾಣೆ. ತುಸು ಆಳಸಿ, ಸ್ವಲ್ಫ ಸೋಮಾರಿ, ಎಲ್ಲರೊಳಗೊಂದಾಗುವ ಗುಡ್‌ ಫಾರ್‌ ನಂಥಿಂಗ್‌ ನಡವಳಿಕೆ ಜೊತೆಗೆ ಅಂತರ್ಗತವಾಗಿದ್ದ ಮಮತೆ!

ಈತ ನಮ್ಮನ್ನೆಲ್ಲಾ ಬಿಟ್ಟು ಹೋಗಿ ಒಂದುವಾರ ಕಳೆದು ಎರಡೂ ಕಳೆಯತೊಡಗಿದ್ದರೂ ಈತ ಇಲ್ಲೇ ಎಲ್ಲೋ ಇರುವಂತಿದೆ. ಯಾಕೆಂದರೆ ಆತ ಇದ್ದುದೇ ಹಾಗೇ.

ಆತ ಅಮಾಯಕನಾಗಿರದಿದ್ದರೆ ಕಾಲ ಅವನ ಮೇಲೆ ಮಾಡಿದ ದಾಳಿಗೆ ಆತ ಇಷ್ಟು ವರ್ಷವೂ ಇರುತಿದ್ದನೋ ಇಲ್ಲವೋ? ದೇವರನ್ನು ಅತಿಯಾಗಿ ನಂಬುತಿದ್ದ ಈತ ಹಬ್ಬಗಳಿಗಾಗಿ ಕನವರಿಸುತಿದ್ದ ಶಿಕ್ಷಕನಾಗಲು ಓದಿದ್ದ ಆತ ಅದಾಗದೇ ಮತ್ತೇನೇನೋ ಆಗಿದ್ದ. ಬ್ಯಾಂಕ್‌ ನೌಕರಿ, ಮಾಧ್ಯಮಕ್ಷೇತ್ರ ಅವನ ಹವ್ಯಾಸಗಳಂತಿದ್ದವು ಆದರೆ ಕಲಿಯಲು ಹಿಂಜರಿಯುವ ವ್ಯಕ್ತಿ ಯಾಗಿ ಎಲ್ಲವರಿಗೂ ಬೇಕಾದವನಾಗಿ ದೂರ ಸಾಗಿ ಬಿಟ್ಟ.

ಬಂಡಾಯವೇಳಲು ಹಿಂಜರಿಯುತಿದ್ದ ಆತನ ಮನಸ್ಸು ಸಾವನ್ನೇ ಒಪ್ಪಿಕೊಳ್ಳುವಂತಾಗಿದ್ದು ಆತನ ಮೇಲೆ ಆದ ದಾಳಿಗಳ ಪರಿಣಾಮ. ಸಕಾಲದಲ್ಲಿ ಸಿಗದ ಕೆಲಸ, ವೇತನ, ತೃಪ್ತಿ, ಆತನ ದೇಹವನ್ನೂ ಪೊಳ್ಳಾಗಿಸಿತ್ತೇ ಎನ್ನುವುದು ಈಗ ಸಿಗುವ ಸಕಾರಣ. ಸಾವಿನ ಹಿಂದೆ ಕುಟುಂಬ, ಆಹಾರ, ಬಡಿದಾಡದ ಸೋಲೊಪ್ಪುವ ಗುಣ ಮತ್ತೂ ಎನೇನೋ ಇರಬಹುದು ಆದರೆ ಅನಾಮಿಕನಂತಿದ್ದ ಅಮಾಯಕ ಅಕಾಲಿಕವಾಗಿ ಸತ್ತದ್ದು ದೌರ್ಭಾಗ್ಯ.

ಈತನ ಸಾವಿನ ಸೂತಕ ಕಳೆಯುವ ಮುನ್ನ ಸುಂದರ ಸಂಸಾರದ ನೆರೆಮನೆಯ ಹುಡುಗನಂತಿದ್ದ ‌ಶ್ಯಾಮಸನ್ ಸೆಬಾಸ್ಟಿನ್‌ ಮೀನು ಹಿಡಿಯಲು ತೆರಳಿ ಮಳಗಿಯಿಂದ ಹೆಣವಾಗಿ ಮರಳಿದ್ದಾನೆ. ‌ ಶ್ಯಾಮಸನ್ ಶಿರಸಿಯ ಪ್ರಸಿದ್ಧ ಹೋಳಿ ಬೇಡರವೇಷ ನೋಡಲು ಹೋದವನು ಸಂಬಂಧಿಗಳೊಂದಿಗೆ ಮಳಗಿ ಧರ್ಮಾ ಜಲಾಶಯಕ್ಕೆ ಮೀನು ಹಿಡಿಯಲು ತೆರಳಿ ಕಾಲು ಜಾರಿ ಬಿದ್ದು ಆಕಸ್ಮಿಕ ಸಾವನ್ನಪ್ಪಿ ದ್ದಾನೆ. ಒಂದು ವಾರದ ಹಿಂದೆ ಮೃತನಾದ ಶಿವಶಂಕರ್‌ ಮತ್ತು ‌ಶ್ಯಾಮಸನ್ ಸೆಬಾಸ್ಟಿನ್‌ ಸಂಪೂರ್ಣ ವೈರುಧ್ಯಮಯ ವ್ಯಕ್ತಿತ್ವದವರು. ಶಿವಶಂಕರ್‌ ನಂತೆ ಶ್ಯಾಮಸನ್‌ ಅಮಾಯಕ, ನತದೃಷ್ಟನಾಗಿರಲಿಲ್ಲ. ಆದರೆ ಸಾವಿಗೆ ರಿಯಾಯತಿ ಇಲ್ಲ. ನತದೃಷ್ಟರೂ ಉಳಿಯುವುದಿಲ್ಲ, ದೇವದೂತರೂ ಶಾಶ್ವತರಲ್ಲ… ನಿಜಕ್ಕೂ ನಿಮ್ಮ ದೇವರು ಕ್ರೂರಿ. ಈ ಕುಟುಂಬಗಳನ್ನು ದೇವರಂಥ ಮನುಷ್ಯರು ಸಂತೈಸಬೇಕಷ್ಟೇ… ಮತ್ತೆ ಹುಟ್ಟಿ ಬನ್ನಿ ಅದೃಷ್ಟವಂತರಾಗಿ ಸಕಾಲದಲ್ಲಿ ಎಂದು ನಾವು ಸಂತೈಸಿಕೊಳ್ಳಬಹುದಷ್ಟೆ… ಸಾವುಗಳಿಗೂ ಧಿಕ್ಕಾರವಿರಲಿ ದುಖಿ:ತರಿಗೆ ನೆಮ್ಮದಿ ಸಿಗಲಿ. ‌

– ಇಂತಿ ನಿಮ್ಮ ಕನ್ನೇಶ್.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *