ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು.

ಒಕ್ಕಲಿಗರ ಸಂಘದ ನಾಯಕರು

ಒಕ್ಕಲಿಗರ ಸಂಘದ ನಾಯಕರು

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ವಿವಾದಾತ್ಮಕ ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು. ಒಂದು ವೇಳೆ ವರದಿ ಜಾರಿಗೊಳಿಸಿದರೆ ಸರ್ಕಾರ ಉಳಿಯುವುದಿಲ್ಲ ಮತ್ತು ಕರ್ನಾಟಕ ಬಂದ್​ ರೀತಿಯ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ಕಾಂತರಾಜು ಆಯೋಗದ ವರದಿ ಜಾರಿ ಮಾಡಲು ಹೊರಟಿದೆ. ಆದರೆ ಅದರ ವಿರುದ್ದ ಹೋರಾಟ ಮಾಡಲು ಒಕ್ಕಲಿಗ ಸಂಘದ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಮುಂದಿನ ಹಂತದಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದರು.

ಒಕ್ಕಲಿಗರ ಸಂಘದ ನಾಯಕರು

ಕಾಂತರಾಜು ಅವರ ವರದಿ ಆರೋಗ್ಯಕರವಾಗಿಲ್ಲ. 10 ವರ್ಷಗಳ ಹಿಂದೆ ಸಮೀಕ್ಷೆ ಮಾಡಿದ ವರದಿಯನ್ನ ಈಗ ಜಾರಿಗೊಳಿಸಲು ಮುಂದಾಗಿದೆ. ಈ ವರದಿಯಲ್ಲಿ ಒಕ್ಕಲಿಗ ಜನಾಂಗವನ್ನ ಕೇವಲ 61ಲಕ್ಷ ತೋರಿಸಲಾಗಿದೆ ಎಂದರು.

ರಾಜ್ಯದ 224 ಕ್ಷೇತ್ರದಲ್ಲಿ ಒಕ್ಕಲಿಗರು ಕೇವಲ 61ಲಕ್ಷ ಮಾತ್ರ ಇರಲು ಸಾಧ್ಯವೇ ಇಲ್ಲ. ಒಂದೊಂದು ತಾಲೂಕಲ್ಲೂ 60 ಸಾವಿರದಿಂದ 1ಲಕ್ಷಕ್ಕೂ ಹೆಚ್ಚು ಒಕ್ಕಲಿಗ ಸಮುದಾಯದ ಜನರಿದ್ದಾರೆ. ಆದರೆ ಈ ವರದಿಯಲ್ಲಿ ನಮ್ಮ ಜನಾಂಗವನ್ನ 6ನೇ ಸ್ಥಾನದಲ್ಲಿ ಇರಿಸಲಾಗಿದೆ. ಇದು ಬೇರೆ ಜನಾಂಗಕ್ಕೆ ಮೀಸಲಾತಿ ನೀಡುವ ಉದ್ದೇಶದಿಂದ ಮಾಡುವ ಹುನ್ನಾರ. ಹೀಗಾಗಿ ನಾವು ಕರ್ನಾಟಕ ಬಂದ್ ಮಾಡುವುದರ ಮೂಲಕ ಹೋರಾಟ ಮಾಡಬೇಕಾಗುತ್ತೆ. ಜಾತಿ ಗಣತಿ ವರದಿಯಲ್ಲಿ ಸಾಕಷ್ಟು ಜನಾಂಗಕ್ಕೆ ಅನ್ಯಾಯವಾಗಿದೆ. ಹೀಗಾಗಿ ಇದನ್ನು ಹಿಂಪಡೆಯಬೇಕು ಮತ್ತು ಮರುಪರಿಶೀಲನೆ ಮಾಡಬೇಕು ಎಂದರು. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *