ಕಾರ್ನಾಡ್ ಕೃತಿಗಳ ಕುರಿತು ಸಂವಾದ ಮತ್ತು ಓದು ಅಭಿಯಾನದ ಸಮಾರೋಪ

ಜುಲೈ 27, 28 : ಶಿರಸಿಯಲ್ಲಿ ಕೋಶ ಓದು ದೇಶ ನೋಡು ಬಳಗದಿಂದ
ಕಾರ್ನಾಡ್ ಕೃತಿಗಳ ಕುರಿತು ಸಂವಾದ ಮತ್ತು ಓದು ಅಭಿಯಾನದ ಸಮಾರೋಪ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ನಾಡಿನ ಹೆಮ್ಮೆಯ ನಾಟಕಕಾರ ಗಿರೀಶ್ ಕಾರ್ನಾಡ್ ಸ್ಮರಣೆಯಲ್ಲಿ ‘ಕೋಶ ಓದು, ದೇಶ ನೋಡು ಬಳಗ’ ಈ ಬಾರಿ ಕಾರ್ನಾಡ್ ಕೃತಿಗಳನ್ನು ಓದುವ, ಓದಿಸುವ ಅಭಿಯಾನ ಹಮ್ಮಿಕೊಂಡಿತ್ತು. ಕಳೆದ ಜೂನ್ ತಿಂಗಳ ಕೊನೆಯ ವಾರದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಚಾಲನೆ ಪಡೆದ ಅಭಿಯಾನ ಒಂದು ತಿಂಗಳು ಪೂರೈಸಿ, 27, 28 ಜುಲೈ 2019ರಂದು ‘ಕಾರ್ನಾಡರ ಕೃತಿಗಳೊಂದಿಗೆ ಸಮಕಾಲೀನ ಸಂವಾದ’ ಮತ್ತು ಸಮಾರೋಪಕ್ಕೆ ಸಿದ್ಧವಾಗಿದೆ.
ಈ ಅವಧಿಯಲ್ಲಿ ರಾಜ್ಯದಾದ್ಯಂತ ನೂರಾರು ಜನರು ಅಭಿಯಾನದ ಭಾಗವಾಗಿ ಕಾರ್ನಾಡ್ ಕೃತಿಗಳನ್ನು ಓದಿದ್ದಾರೆ ಮತ್ತು ಹಲವರು ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಗುಂಪುಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕೋಶ ಓದು, ದೇಶ ನೋಡು ಬಳಗವು ಕಳೆದ ಎರಡುವರ್ಷಗಳಿಂದ ಮಹತ್ವದ ಕೃತಿಗಳನ್ನು ಓದುವ, ಓದಿಸುವ ಮತ್ತು ಸಂವಾದ ನಡೆಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. 2017ರಲ್ಲಿ ನಿರಂಜನರ ಚಿರಸ್ಮರಣೆ ಕಾದಂಬರಿಯ ಓದು ಮತ್ತು ಕಯ್ಯೂರು ಭೇಟಿಯೊಡನೆ ಆರಂಭವಾದ ಅಭಿಯಾನ, ಆನಂತರ ಶಿವರಾಮ ಕಾರಂತರ ಚೋಮನ ದುಡಿ, ಖುಷ್ವಂತ್ ಸಿಂಗರ ಟ್ರೈನ್ ಟು ಪಾಕಿಸ್ತಾನ್, ಮಾಂಟೋ ಕಥೆಗಳು ಹಾಗೂ ಭೀಷ್ಮ ಸಹಾನಿಯವರ ತಮಸ್ ಕೃತಿಗಳ ಯಶಸ್ವಿ ಓದು? ಸಂವಾದ ನಡೆಸಿತ್ತು.
ಈ ಬಾರಿ ಕಾರ್ನಾಡ್ ನಿಧನರಾದ ಹಿನ್ನೆಲೆಯಲ್ಲಿ ಹಾಗೂ ಕಾರ್ನಾಡರ ಕೃತಿಗಳ ಸಮಕಾಲೀನತೆಯನ್ನು ಚರ್ಚಿಸುವ ನಿಟ್ಟಿನಲ್ಲಿ ಅವರ ಕೃತಿಗಳನ್ನು ಸಂವಾದಕ್ಕೆ ಆಯ್ದುಕೊಳ್ಳಲಾಗಿತ್ತು.
ಗಿರೀಶ್ ಕಾರ್ನಾಡರು ತನ್ನ ಬಾಲ್ಯ ಕಳೆದ ಶಿರಸಿಯಲ್ಲಿ ಈ ಬಾರಿಯ ಓದು ಅಭಿಯಾನದ ಭಾಗವಾಗಿ ಸಂವಾದ ನಡೆಯಲಿದ್ದು, ಜುಲೈ 27ರ ಶನಿವಾರ ಬೆಳಗ್ಗೆ 10 :30 ಕ್ಕೆ ಚಾಲನೆ ಪಡೆಯಲಿದೆ. ಕಾರ್ಯಕ್ರಮವು ಯಲ್ಲಾಪುರ ರಸ್ತೆಯಲ್ಲಿರುವ ದೇವನಿಲಯದ ನಿಸರ್ಗಧಾಮದಲ್ಲಿ ನಡೆಯಲಿದೆ.
ಶಾಂತಾರಾಮ ನಾಯಕ ಹಿಚ್ಕಡ ಅಧ್ಯಕ್ಷತೆಯಲ್ಲಿ, ಡಾ.ರಾಜೇಂದ್ರ ಚೆನ್ನಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಡಾ.ಹಸೀನಾ ಖಾದ್ರಿ ಹಾಗೂ ಮುನೀರ್ ಕಾಟಿಪಳ್ಳ ಅವರ ಉಪಸ್ಥಿತಿ ಇರಲಿದೆ. ಅನಂತರ ಶ್ರೀಪಾದ ಭಟ್ ನಿರ್ದೇಶನದಲ್ಲಿ ಕಾರ್ನಾಡರ ನಾಟಕಗಳ ವಾಚಿಕಾಭಿನಯ ನಡೆಯಲಿದೆ. ಎರಡೂ ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಿಂದ ಬರುವ 1ಂಂ ಕ್ಕೂ ಹೆಚ್ಚು ಓದುಗರು ಕಾರ್ನಾಡರ ಕೃತಿಗಳ ಕುರಿತು ವಿವಿಧ ಆಯಾಮಗಳ ಚರ್ಚೆ ನಡೆಸಲಿದ್ದಾರೆ.
ಜುಲೈ 28ರ ಇಳಿ ಮಧ್ಯಾಹ್ನ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಡಾ..ಎಂ.ಜಿ. ಹೆಗಡೆ ಸಮಾರೋಪ ಮಾತುಗಳನ್ನಾಡಲಿದ್ದಾರೆ ಹಾಗೂ ಡಾ.ಅನಸೂಯಾ ಕಾಂಬ್ಳೆ ಉಪಸ್ಥಿತಿ ಇರಲಿದೆ.
ಚಿಂತನ ರಂಗ ಅಧ್ಯಯನ ಕೇಂದ್ರ ಹಾಗೂ ಸಹಯಾನ, ಕೆರೆಕೋಣ ಸಹಯೋಗದಲ್ಲಿ ಕೋಶ ಓದು ದೇಶ ನೋಡು ಬಳಗವು ಈ ಕಾರ್ಯಕ್ರಮಗಳನ್ನು ಆಯೋಜಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *