ಬೀಳುವ ಮರಗಳಿವೆ ಎಚ್ಚರಿಕೆ!

ಸಿದ್ಧಾಪುರದಲ್ಲಿ
ಭಯಹುಟ್ಟಿಸುತ್ತಿರುವ ಮರಗಳು
ಸಿದ್ದಾಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೇ ಹಳೆ ಮರ ಬಿದ್ದು ಮೃತರಾದ ನಂತರ ತಾಲೂಕಿನೆಲ್ಲೆಡೆ ಅಪಾಯದ ಮರಗಳ ಬಗ್ಗೆ ಮಾತು, ಚರ್ಚೆ ಪ್ರಾರಂಭವಾಗಿದೆ. ಕಾಡು,ಜಮೀನು, ಮನೆಗಳ ಸಮೀಪದ ಮರಗಳ ಅಪಾಯಕ್ಕೆ ಆಯಾ ಪ್ರದೇಶ, ಜವಾಬ್ದಾರಿಯ ಜನರೇ ಕಾರಣ. ಆದರೆ, ರಸ್ತೆ ಅಕ್ಕಪಕ್ಕದ ಮರಗಳು, ಶಾಲಾ-ಕಾಲೇಜುಗಳು, ಸಾರ್ವಜನಿಕ ಪ್ರದೇಶ,ಸರ್ಕಾರಿ ಕಛೇರಿಗಳ ವ್ಯಾಪ್ತಿಯ ಮರಗಳ ಬಗ್ಗೆ ಸಂಬಂಧಿಸಿದವರೇ ಜವಾಬ್ಧಾರರಾಗಬೇಕಾಗುತ್ತದೆ.
ನಗರದ ನಿರ್ಮಾಣ ಹಂತದ ಮಿನಿವಿಧಾನ ಸೌಧದ ಆವರಣದ ಒಂದು ಮರ, ಹಾಳದಕಟ್ಟಾದ ಅಂಧರಶಾಲೆ ಬಳಿಯ ಹೆಸ್ಕಾಂ ಟಿ.ಸಿ. ಮೇಲೇ ಚಾಚಿರುವ ಮರ. ಹೀಗೆ ನಗರದಲ್ಲಿ ಅನೇಕ ಕಡೆ ಅಪಾಯದ ಮರಗಳಿವೆ ಎಂದು ಸಾರ್ವಜನಿಕ ಚರ್ಚೆ ನಡೆಯುತ್ತಿದೆ. ಆದರೆ ಅವುಗಳನ್ನು ತೆಗೆಯುವವರ್ಯಾರು? ಈ ಮಳೆಗಾಲದ ಮೊದಲು ಕಂದಾಯ ಇಲಾಖೆ ನೀಡಿದ ಪಟ್ಟಿಯಂತೆ ನಗರದ ಅಪಾಯದ ಮರಗಳನ್ನು ಅರಣ್ಯ ಇಲಾಖೆ ಕಡಿದು ತೆಗೆದಿದೆ. ಆದರೆ ಸರ್ಕಾರಿ ಇಲಾಖೆಗಳ ಆವರಣ, ಪ.ಪಂ. ವ್ಯಾಪ್ತಿಯ ಒಳಗಿರುವ ಅಪಾಯದ ಮರಗಳನ್ನು ತೆಗೆಯಲು ಅರಣ್ಯ ಇಲಾಖೆಗೆ ಅನುಮತಿ ಕೇಳಿದರೆ ಕೊಡಬಹುದು ಆದರೆ ಅರಣ್ಯ ಇಲಾಖೆಯೇ ಅವುಗಳನ್ನು ತೆಗೆಯುವುದು ಕಷ್ಟ ಎನ್ನುವುದು ಇಲಾಖೆಯ ಅಭಿಪ್ರಾಯ.
ಸೊರಬ ರಸ್ತೆಯಲ್ಲಿ ಟಿ.ಸಿ. ಮೇಲೆರಗಬಹುದಾದ ಅಂಧರ ಶಾಲೆಯ ಆವರಣದ ಮರ, ಅದಕ್ಕೆ ತಾಕಿಕೊಂಡಿರುವ ವಿದ್ಯುತ್ ಮಾರ್ಗ ಅಲ್ಲಿಯ ವಿದ್ಯಾರ್ಥಿಗಳು, ನೆರೆಹೊರೆಯವರಿಗೆ ಅಪಾಯ ತರುವ ಸಾಧ್ಯತೆ ಹೆಚು.್ಚ ಅದೇ ರಸ್ತೆಯಲ್ಲಿ ಕೆಲವು ಮರಗಳು ರಸ್ತೆಗೆ ವಾಲಿಕೊಂಡಿರುವುದರಿಂದ ಸಾಯಂಕಾಲ ಬೀದಿ ದೀಪ ಕಾಣದ ಸಮಸ್ಯೆ ಇದೆ ಎನ್ನುವುದು ಈ ಭಾಗದ ಸಾಮಾಜಿಕ ಕಾರ್ಯಕರ್ತ ಇಲಿಯಾಸ್ ಶೇಖ್ ಅಭಿಪ್ರಾಯ.
ಹೀಗೆ ನಗರದಲ್ಲಿ ಮತ್ತು ತಾಲೂಕಿನಾದ್ಯಂತ ಅರಣ್ಯ ಇಲಾಖೆ ಮತ್ತು ಹೆಸ್ಕಾಂ ನ ವ್ಯಾಪ್ತಿಯಲ್ಲಿ ಅನೇಕ ಮರಗಳು ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತರುವಂತಿವೆ ಎನ್ನುವ ಸಾರ್ವಜನಿಕರು ಅವುಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಹೇಳದೆ ಸಂಬಂಧಿಸಿದವರು ಪರವಾನಗಿ ಪಡೆದು ಮರಗಳನ್ನು ತೆರವು ಮಾಡುವ ಅಗತ್ಯವಂತೂ ಈಗ ಅನಿವಾರ್ಯತೆಯಾಗಿದೆ.
ಮಳೆಗಾಲಪೂರ್ವ ಕಂದಾಯ ಇಲಾಖೆಯ ಮನವಿಯಂತೆ ಅಪಾಯದ ಮರಗಳನ್ನು ಕತ್ತರಿಸಿ ತೆಗೆದಿದ್ದೇವೆ. ಈಗಲೂ ಇಲಾಖೆಯ ಹಿರಿಯ ಅಧಿಕಾರಿಗಳು ತಾಲೂಕಿನಲ್ಲಿರುವ ಅಪಾಯದ ಮರಗಳ ಬಗ್ಗೆ ವರದಿ ಕೇಳಿದ್ದಾರೆ. ನಾನಾ ಇಲಾಖೆಗಳು ತಮ್ಮ ವ್ಯಾಪ್ತಿಯ ಅಪಾಯದ ಮರಗಳ ತೆರವಿಗೆ ಅನುಮತಿ ಪಡೆದು ಅಪಾಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
– ಅಜೀಜ್ ಅಹಮದ್
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ಧಾಪುರ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *