


ಹಲವು ಶಿಕ್ಷಕ-ಶಿಕ್ಷಕಿಯರಿಗೆ ಸನ್ಮಾನ ಮತ್ತು ಶಿಕ್ಷಕ-ಶಿಕ್ಷಕಿಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸಿ ತನ್ನ ಸರ್ವಸಾಧಾರಣ ಸಭೆ ನಡೆಸಿದ ಸಿದ್ದಾಪುರದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೂತನ ಡಿ.ಡಿ.ಪಿ.ಐ ಡಿ.ಆರ್. ನಾಯ್ಕರನ್ನು ಸನ್ಮಾನಿಸಿ, ಸ್ವಾಗತಿಸಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಡಿ.ಆರ್. ನಾಯ್ಕ ಸಿದ್ಧಾಪುರ ಜಿಲ್ಲೆಯಷ್ಟೇ ಅಲ್ಲದೆ ರಾಜ್ಯದಲ್ಲಿ ಶೈಕ್ಷಣಿಕವಾಗಿ ಉತ್ತಮ ತಾಲೂಕೆಂದು ಗುರುತಿಸಿಕೊಂಡಿದೆ ಇದಕ್ಕೆ

ಇಲ್ಲಿಯ ಪ್ರಾಥಮಿಕ ಶಾಲಾ ಅಧ್ಯಾಪಕರ ಕೆಲಸ ಕಾರಣ ಎಂದು ಶ್ಲಾಘಿಸಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಸಿದ್ದಾಪುರ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ನಮ್ಮ ಬೋಧನೆಗಿಂತ ನಡವಳಿಕೆ ಮಾದರಿಯಾಗಿರಬೇಕು ಪರಿವರ್ತನೆಗೆ ನಡವಳಿಕೆಯ ಪಾತ್ರ ದೊಡ್ಡದು ಎಂದು ಮಾರ್ಮಿಕವಾಗಿ ನುಡಿದರು.


ನಿವೃತ್ತರು, ರಾಜ್ಯ,ಜಿಲ್ಲೆ, ರಾಷ್ಟ್ರಮಟ್ಟದ ಪ್ರತಿಭಾವಂತ ಶಿಕ್ಷಕರು , ಸಾಧನೆ ಮಾಡಿದ ಶಿಕ್ಷಕ-ಶಿಕ್ಷಕಿಯರ ಮಕ್ಕಳನ್ನು ಅಭಿನಂದಿಸಲಾಯಿತು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






