ಕೇರಳ ಮಾಜಿ ಸಿಎಂ, ಎಲ್ಲರ ನೆಚ್ಚಿನ ಕಾಮ್ರೇಡ್ VS ಅಚ್ಯುತಾನಂದನ್ ನಿಧನ

ಕಳೆದ ಜೂನ್ 23 ರಂದು ಬೆಳಗ್ಗೆ ಹೃದಯಾಘಾತಕ್ಕೀಡಾಗಿದ್ದ 101 ವರ್ಷದ ಅಚ್ಯುತಾನಂದನ್ ಅವರನ್ನು ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

VS Achuthanandan

VS ಅಚ್ಯುತಾನಂದನ್

ತಿರುವನಂತಪುರಂ: ಕೇರಳ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಕ್ಷದ ಖ್ಯಾತ ನಾಯಕ ವಿ.ಎಸ್. ಅಚ್ಯುತಾನಂದನ್ ಅವರು ಸೋಮವಾರ ನಿಧನರಾಗಿದ್ದಾರೆ.

ಕಳೆದ ಜೂನ್ 23 ರಂದು ಬೆಳಗ್ಗೆ ಹೃದಯಾಘಾತಕ್ಕೀಡಾಗಿದ್ದ 101 ವರ್ಷದ ಅಚ್ಯುತಾನಂದನ್ ಅವರನ್ನು ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

2019 ರಲ್ಲಿ ಪಾರ್ಶ್ವವಾಯುವಿಗೆ ಒಳಗಾದ ನಂತರ ಹಾಸಿಗೆ ಹಿಡಿದಿದ್ದ ಅಚ್ಯುತಾನಂದನ್ ಅವರಿಗೆ ಇತ್ತೀಚಿಗೆ ಹೃದಯಾಘಾತ ಸಂಭವಿಸಿ ಉಸಿರಾಟದ ತೊಂದರೆ ಉಂಟಾಗಿತ್ತು. ಹೀಗಾಗಿ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.

VS Achuthanandan
Aritifical Inteligence uses
Aritifical Inteligence uses

ಭಾರತದ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಸ್ಥಾಪಕ ನಾಯಕ ವಿ.ಎಸ್. ಅಚ್ಯುತಾನಂದನ್ ಕಳೆದ ಅಕ್ಟೋಬರ್‌ನಲ್ಲಿ 101 ವರ್ಷ ಕಾಲಿಟ್ಟಿದ್ದರು. 1964 ರಲ್ಲಿ ನಡೆದ ಐತಿಹಾಸಿಕ ಸಿಪಿಐ ರಾಷ್ಟ್ರೀಯ ಮಂಡಳಿ ಸಭೆಯಿಂದ ಹೊರನಡೆದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸ್ಥಾಪಿಸಿದ್ದರು.

ಶತಾಯುಷಿಯಾದ ಅಚ್ಯುತಾನಂದನ್ (101), ಕೇರಳ ರಾಜಕಾರಣದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವ್ಯಕ್ತಿಯಾಗಿದ್ದಾರೆ. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅಚ್ಯುತಾನಂದನ್, 2006ರಿಂದ 2011ರರವರೆಗೆ ಕೇರಳ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅವರು ಒಟ್ಟು 10 ಚುನಾವಣೆಗಳನ್ನು ಎದುರಿಸಿದ್ದಾರೆ.

ಅಕ್ಟೋಬರ್ 20, 1923 ರಂದು ಶಂಕರನ್ ಮತ್ತು ಅಕ್ಕಮ್ಮ ದಂಪತಿಗಳ ಮಗನಾಗಿ ಜನಿಸಿದ ವಿಎಸ್, ನಾಲ್ಕನೇ ವಯಸ್ಸಿನಲ್ಲಿ ತಾಯಿಯನ್ನು ಕಳೆದುಕೊಂಡರು. ನಂತರ ಕಷ್ಟಕರವಾದ ಬಾಲ್ಯವನ್ನು ಕಳೆದ ವಿಎಸ್, ಟೈಲರಿಂಗ್ ಅಂಗಡಿಯಲ್ಲಿ ತಮ್ಮ ಸಹೋದರನಿಗೆ ಸಹಾಯ ಮಾಡಿದರು ಮತ್ತು ನಂತರ ತೆಂಗಿನಕಾಯಿ ಕಾರ್ಖಾನೆಯ ಕೆಲಸಗಾರರಾದರು. ಪಿ ಕೃಷ್ಣ ಪಿಳ್ಳೈ ಅವರಿಂದ ರಾಜ್ಯದ ರಾಜಕೀಯ ಚಳುವಳಿಗೆ ಪಾದಾರ್ಪಣೆ ಮಾಡಿದ ಅವರು, 1938 ರಲ್ಲಿ ಕುಟ್ಟನಾಡಿನಲ್ಲಿ ಕೃಷಿ ಕಾರ್ಮಿಕರನ್ನು ಸಂಘಟಿಸುವ ಮೂಲಕ ತಮ್ಮ ಆರಂಭಿಕ ರಾಜಕೀಯ ಜೀವನವನ್ನು ಆರಂಭಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *