ಅಮೇರಿಕಾದ ಬೋಸ್ಟನ್‌ ಗೆ ಹಾರಿದ ಶಾಸಕ ಭೀಮಣ್ಣ

ಅಮೇರಿಕಾದ ಬೋಸ್ಟನ್‌ ನಲ್ಲಿ ಆ.೪ರಿಂದ ೬ ರ ವರೆಗೆ ನಡೆಯಲಿರುವ ಅಂತರಾಷ್ಟ್ರೀಯ ಶೃಂಗಸಭೆಗೆ ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಆಯ್ಕೆಯಾಗಿ ಇಂದು ಪ್ರಯಾಣ ಬೆಳೆಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಗಳನ್ನು ಬಲಪಡಿಸುವ ಮತ್ತು ಉತ್ತಮ ಆಡಳಿತ ಪದ್ಧತಿಗಳನ್ನು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಬೋಸ್ಟನ್‌ ನಲ್ಲಿ ನಡೆಯಲಿರುವ ೫೦ ನೇ ಅಂತರಾಷ್ಟ್ರೀಯ ರಾಜ್ಯ ಶಾಸಕಾಂಗಗಳ ಶೃಂಗ ಸಭೆಗೆ ಆಯ್ಕೆಯಾದ ರಾಜ್ಯದ ೧೨ ಶಾಸಕರಲ್ಲಿ ಭೀಮಣ್ಣ ನಾಯ್ಕ ಒಬ್ಬರು.

ಮೂರು ದಿವಸಗಳ ಕಾಲ ನಡೆಯಲಿರುವ ಈ ಶೃಂಗಸಭೆಯಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವುದು ಸೇರಿದಂತೆ ಪ್ರಮುಖ ಹತ್ತು ವಿಷಯಗಳ ಮೇಲೆ ಗೋಷ್ಠಿಗಳು, ವಿಚಾರ ಸಂಕಿರಣಗಳು ನಡೆಯಲಿವೆ.

ರಾಜ್ಯ ವಿಧಾನಸಭಾ ಅಧ್ಯಕ್ಷರ ನೇತೃತ್ವದಲ್ಲಿ ಹೊರಟ ೧೨ ಶಾಸಕರ ತಂಡ ದೇಶದ ಮತ್ತು ಕೆಲವು ಪ್ರಮುಖ ದೇಶಗಳ ಆಹ್ವಾನಿತ ಪ್ರಮುಖರ ಜೊತೆ ಬೋಸ್ಟನ್‌ ನಲ್ಲಿ ಸೇರಿಕೊಳ್ಳಲಿದೆ.

ಗ್ರಾಮೀಣ ಕೃಷಿ ಆಧಾರಿತ ಅವಿಭಕ್ತ ಕುಟುಂಬದಲ್ಲಿ ಹುಟ್ಟಿದ ಭೀಮಣ್ಣ ನಾಯ್ಕ ತಮ್ಮ ನಿರಂತರ ಶ್ರಮದಿಂದ ಕೃಷಿ-ಉದ್ಯಮ, ರಾಜಕಾರಣದಲ್ಲಿ ಹೆಸರು ಮಾಡಿದವರು. ವಿಧಾನಸಭೆಯ ಶಿಸ್ತು, ಸಮಯ ಪಾಲನೆ ಸೇರಿದಂತೆ ಕೆಲವು ವಿಶೇಶಗಳ ಕಾರಣಕ್ಕೆ ಮುಖ್ಯಮಂತ್ರಿಗಳು, ವಿಧಾನಸಭಾ ಅಧ್ಯಕ್ಷರ ಗಮನ ಸೆಳೆದ ಭೀಮಣ್ಣ ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದ ಕ್ರೀಯಾಶೀಲರು.

ಕಳೆದ ನಾಲ್ವತ್ತು ವರ್ಷಗಳಿಂದ ರಾಜಕಾರಣದಲ್ಲಿದ್ದು ಒಮ್ಮೆ ಜಿ.ಪಂ. ಸದಸ್ಯ, ಒಂದೇ ಬಾರಿ ಶಾಸಕ ನಾಗಿ ಹಲವು ಸೋಲುಗಳ ನಡುವೆ ಪಕ್ಷ ಸಂಘಟನೆ,ಕ್ಷೇತ್ರದಲ್ಲಿ ದಾನಧರ್ಮ ಕಾರ್ಯಗಳಿಂದಲೇ ಚಲಾವಣೆಯಲ್ಲಿದ್ದ ಇವರು ಮಾಜಿ ವಿಧಾನಸಭಾ ಅಧ್ಯಕ್ಷ ಬಿ.ಜೆ.ಪಿ. ಯ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆಯವರನ್ನು ಪರಾಭವಗೊಳಿಸಿ ವಿಧಾನಸಭೆಯ ಮೆಟ್ಟಿಲೇರಿದವರು.

ಬಂಗಾರಪ್ಪನವರ ಭಾಮೈದರಾದ ಭೀಮಣ್ಣ ರಾಜಕೀಯ ಅಧಿಕಾರವಿರಲಿ ಇಲ್ಲದಿರಲಿ ಬಂಗಾರಪ್ಪ ಕುಟುಂಬದ ಜೊತೆಗಿದ್ದವರು. ಶರಾವತಿ ದಂತವೈದ್ಯಕೀಯ ಸಂಸ್ಥೆ, ಶಕುಂತಲಾ ಬಂಗಾರಪ್ಪ ಶಿಕ್ಷಣ ಸಂಸ್ಥೆ ಸೇರಿದಂತೆ ಅನೇಕ ಶಿಕ್ಷಣ, ಸಾಮಾಜಿಕ ಸಂಸ್ಥೆಗಳ ಪ್ರಮುಖ ಪದಾಧಿಕಾರಿಯಾಗಿರುವ ಭೀಮಣ್ಣ ಕ್ಷೇತ್ರ ಪರ್ಯಟನೆ, ಅಭಿವೃದ್ಧಿ ವಿಷಯದಲ್ಲೂ ಹೆಸರು ಮಾಡಿದವರು. ಶಾಸಕ ಭೀಮಣ್ಣ ನಾಯ್ಕರ ವಿದೇಶ ಪ್ರಯಾಣ,ಅಧ್ಯಯನ ಪ್ರವಾಸಗಳಿಗೆ ಶುಭ ಕೋರಿರುವ ಕ್ಷೇತ್ರ, ಜಿಲ್ಲೆ ರಾಜ್ಯದ ಅನೇಕ ಪ್ರಮುಖರು ಭೀಮಣ್ಣ ನಾಯ್ಕರ ಶೃಂಗಸಭೆಯ ಅನುಭವ ಅವರ ಮುಂದಿನ ವೈಯಕ್ತಿಕ ರಾಜಕೀಯ ಜೀವನಕ್ಕೆ ಅನುಕೂಲಮಾಡಿಕೊಡಲಿ ಎಂದು ಹಾರೈಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *