

ಪ್ರತಿ ಬೇಸಿಗೆಗೆ ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ.


ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ ಬಾರಿಸುವತ್ತ ದಾಪುಗಾಲಿಟ್ಟಿದೆ. ಪ್ರತಿ ವರ್ಷ ಮಂಗನ ಕಾಯಿಲೆಯ ಸಾವು-ನೋವು ಗಳಲ್ಲಿ ಮೊದಲ ಸ್ಥಾನ ಕಾಯ್ದುಕೊಳ್ಳುವ ಶಿವಮೊಗ್ಗ ಜಿಲ್ಲೆಯಲ್ಲಿ ಫೆಬ್ರುವರಿ ತಿಂಗಳಲ್ಲೇ ೪೩ ಪ್ರಕರಣಗಳು ದಾಖಲಾಗಿರುವುದು ಎಚ್ಚರಿಕೆಯ ಗಂಟೆಯಂತಾಗಿದೆ.
ಮಲೆನಾಡಿನ ಇನ್ನೊಂದು ಜಿಲ್ಲೆ ಚಿಕ್ಕಮಗಳೂರು ಉತ್ತರ ಕನ್ನಡ ಶಿವಮೊಗ್ಗ ಗಳಂತೆ ಮಂಗನ ಕಾಯಿಲೆಗೆ ಹೆಸರು ಮಾಡಿದೆ ಈ ವರ್ಷ ಚಿಕ್ಕಮಗಳುರು ಜಿಲ್ಲೆಯಲ್ಲಿ ಈ ವರೆಗೆ ೮ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ೪ ಪ್ರಕರಣಗಳು ದಾಖಲಾಗಿವೆ ಅವುಗಳಲ್ಲಿ ಸಿದ್ಧಾಪುರದ ೨,ಶಿರಸಿ ಮತ್ತು ಹೊನ್ನಾವರ ತಾಲೂಕುಗಳ ತಲಾ ಒಂದು ಸೇರಿವೆ.


ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ಜಿಲ್ಲೆಯಲ್ಲಿ ಕೆ.ಎಫ್.ಡಿ. ಪ್ರಯೋಗಾಲಯ ಚಿಕಿತ್ಸಾ ಅನುಕೂಲಗಳಿದ್ದರೆ ಚಿಕ್ಕಮಗಳುರು ಉತ್ತರ ಕನ್ನಡ ಜಿಲ್ಲೆಗಳು ಕೊರತೆ ಅನುಭವಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಮಂಗನ ಕಾಯಿಲೆ ಪರೀಕ್ಷೆ ಪ್ರಯೋಗಾಲಯ ಸಿದ್ಧವಾದರೂ ಅಲ್ಲಿ ಅವಶ್ಯ ಸಿಬ್ಬಂದಿಗಳ ಕೊರತೆ ಇದೆ. ಆರೋಗ್ಯ ಚಿಕಿತ್ಸೆಯ ಅನುಕೂಲಗಳು ಕನಿಷ್ಟ ಸ್ಥಿತಿಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೇರಿದ ಇತರ ತುರ್ತು ಚಿಕಿತ್ಸಾ ವ್ಯವಸ್ಥೆಯ ಪ್ರಾರಂಭಕ್ಕೆ ಸಾರ್ವಜನಿಕ ಅಭಿಯಾನಗಳು ನಡೆದಿವೆ. ಆದರೆ ಫಲಿತಾಂಶ ಆಶಾದಾಯಕವಾಗಿಲ್ಲ.

ಈಗಿನ ಸರ್ಕಾರದ ಪ್ರಭಾವಿ ಸಚಿವ, ಶಾಸಕರಾದ ಮಂಕಾಳು ವೈದ್ಯ ಮತ್ತು ಭೀಮಣ್ಣ ನಾಯ್ಕ ಪ್ರತಿನಿಧಿಸುವ ಶಿರಸಿ ಮತ್ತು ಹೊನ್ನಾವರ ಗಳೂ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ತೊಂದರೆ ಇರುವುದರಿಂದ ಆರೋಗ್ಯ ಅನುಕೂಲ ಒದಗಿಸುವ ಸುಸಜ್ಜಿತ ಆಸ್ಫತ್ರೆಗಳ ಬಗ್ಗೆ ಇವರು ಆದ್ಯತೆ ನೀಡಬೇಕು ಎಂಬ ಬೇಡಿಕೆ ಬಲವಾಗಿದೆ. ರಾಜಕೀಯ ಕೆಸರೆರಚಾಟದಲ್ಲಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶಾಸಕ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಈ ಜಿಲ್ಲೆಯ ಶೈಕ್ಷಣಿಕ,ಆರೋಗ್ಯ ವ್ಯವಸ್ಥೆ ಕಡೆಗಣಿಸಿ ಜಿಲ್ಲೆಯ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ. ಹಿರಿಯರಾದ ಇವರು ಈಗಲೂ ಈ ಅನಾನುಕೂಲದ ಬಗ್ಗೆ ಗಮನ ಹರಿಸದಿರುವುದು ಜಿಲ್ಲೆಯ ಜನರ ಬೇಸರಕ್ಕೆ ಕಾರಣವಾಗಿದೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






