ಮಳೆ+ಗಾಳಿ=ಹಾನಿ,ಶಾಲಾ-ಕಾಲೇಜುಗಳಿಗೆ ರಜೆ

ಶಾಲಾ-ಕಾಲೇಜುಗಳಿಗೆ ರಜೆ
(ಸಿದ್ಧಾಪುರ,ಆ.05-) ನಿರಂತರ ಮಳೆಯ ಹಿನ್ನೆಲೆಯಲ್ಲಿ ಸಿದ್ಧಾಪುರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.6 ರ ಮಂಗಳವಾರ ರಜೆ ಘೋಶಿಸಿರುವುದಾಗಿ ತಹಸಿಲ್ದಾರ ಕಛೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲೂ ನೀರು-
ಸಿದ್ಧಾಪುರ, ಹಾಳದಕಟ್ಟಾ, ಕೊಂಡ್ಲಿ ಭಾಗದಲ್ಲಿ ಅವೈಜ್ಞಾನಿಕ ನಿರ್ಮಾಣಗಳ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ನೀರು ತುಂಬಿ ಜನರು, ವಿದ್ಯಾರ್ಥಿಗಳು ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಈ ತೊಂದರೆ ಬಗ್ಗೆ ಪ.ಪಂ. ಆಡಳಿತ ಮತ್ತು ಶಾಸಕರು ಗಮನ(ಹರಿ) ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.
ಮಳೆ+ಗಾಳಿ=ಹಾನಿ
ಕಳೆದ ಎರಡ್ಮೂರು ದಿವಸಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಬೀಳುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಹಳ್ಳ-ಕೊಳ್ಳ ಗಳೆಲ್ಲಾ ತುಂಬಿ ಹರಿಯುತ್ತಿವೆ. ಜನರು ಕೃಷಿ ಕೆಲಸ ಮಾಡಲು ಹಿಂಜರಿಯುವಂತೆ ಮಳೆ,ಗಾಳಿ ರಭಸ ಹೆಚ್ಚಾಗಿದ್ದು ಜನಜಾನುವಾರುಗಳ ಓಡಾಟಕ್ಕೂ ತೊಂದರೆಯಾಗಿದೆ.
ಶುಕ್ರವಾರ ಶನಿವಾರದ ಅವಧಿಯ ಮಳೆ ಗಾಳಿಗೆ ಕೋಲಶಿರ್ಸಿ ಪಂಚಾಯತ್ ನ ಅವರಗುಪ್ಪಾದ ಈಶ್ವರ ದೇವಾಲಯದ ಕಲ್ಲುಗಳು ಕುಸಿದಿವೆ. ಈ ಈಶ್ವರ ದೇವಾಲಯ ಪುರಾತನ ದೇವಾಲಯವಾಗಿದ್ದು ಗ್ರಾಮಸ್ಥರು ಈ ದೇವಸ್ಥಾನದ ಪುನರ್ ನಿರ್ಮಾಣದ ಬಗ್ಗೆ ಯೋಚಿಸುತ್ತಿದ್ದ ಸಮಯದಲ್ಲೇ ಇದು ಉದುರಿಬೀಳುವಂತೆ ಕಟ್ಟಡದ ಕಲ್ಲು,ಮಣ್ಣು, ಮರಳು ಜರಿಯತೊಡಗಿದೆ.
ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಇಲ್ಲಿಯ ಗ್ರಾಮ ಸಮೀತಿ ಸ್ಥಳಿಯ ಆಡಳಿತವನ್ನು ಆಗ್ರಹಿಸಿದೆ. ರವಿವಾರ ಶಿರಸಿ ರಸ್ತೆಯ 16 ನೇ ಮೈಲ್‍ಕಲ್ ಬಳಿ ಬುಡಮೇಲಾಗಿ ಬಿದ್ದ ಬಿದಿರಿನ ಹಿಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಿತ್ತು. ಸೋಮವಾರ ಬೆಳಿಗ್ಗೆ ರಭಸದ ಮಳೆ-ಗಾಳಿ ಪರಿಣಾಮ ಸಿದ್ಧಾಪುರ ಸಿವಿಲ್ ಕೋರ್ಟ್ ಎದುರಿಗೆ ಮೇ ಫ್ಲವರ್ ಮರವೊಂದು ಬುಡಸಹಿತ ಧರೆಗುರುಳಿದ್ದು ಸಂಬಂಧಿಸಿದವರು ರಸ್ತೆ ತೆರವು ಮಾಡಿಕೊಟ್ಟಿದ್ದಾರೆ.

ಇದೊಂಥರಾ ವಿಶಿಷ್ಟ ನಾಗಪಂಚಮಿ
ವಿಶೇಶಚೇತನರಿಗೆ ಹಾಲು,ಸಿಹಿ ಹಂಚಿ ನಾಗರ ಪಂಚಮಿ ಆಚರಣೆ
ನಿರಂತರ ಮಳೆ, ಮಹಾಪೂರಗಳ ನಡುವೆ ನಾಡಿನಾದ್ಯಂತ ಇಂದು ನಾಗರ ಪಂಚಮಿ ಆಚರಿಸಲಾಯಿತು.
ಬಹುತೇಕ ಕಡೆ ಕಲ್ಲುನಾಗರ, ಮೂರ್ತಿನಾಗರ, ಜೀವಂತನಾಗರ ದೇವರ ಆರಾಧನೆ ನಡೆದರೆ, ಕಾರವಾರದಲ್ಲಿ ನಗರದ ಗಣ್ಯರು ವಿಭಿನ್ನವಾಗಿ ನಾಗರಪಂಚಮಿ ಆಚರಿಸಿದರು.
ಇಲ್ಲಿಯ ಖುರಸಾವಾಡಾ ದಲ್ಲಿರುವ ಆಶಾನಿಕೇತನ ವಿಶೇಶಚೇತನ ಮಕ್ಕಳ ಶಾಲೆಗೆ ತರಳಿ ನಾಗಪಂಚಮಿ ಆಚರಿಸಿದ ಜನಶಕ್ತಿ ಸಂಘಟನೆಯ ಮುಖ್ಯಸ್ಥ ಮಾಧನ ನಾಯ್ಕ ನೇತೃತ್ವದ ತಂಡ ಇಲ್ಲಿಯ ಮಕ್ಕಳಿಗೆ ಸಿಹಿ-ಹಾಲು ವಿತರಿಸಿ, ಊಟ ಬಡಿಸುವ ಮೂಲಕ ನಾಗರಪಂಚಮಿ ಆಚರಿಸಿತು.
ಈ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಕಲ್ಲು, ಕಲ್ಲಿನ ನಾಗರ ಮೂರ್ತಿಗೆ ಹಾಲು ಸುರಿದು ಹಾಳು ಮಾಡುವ ಬದಲು ಇಂಥ ಅಸಹಾಯಕ, ದುರ್ಬಲ ಮಕ್ಕಳು,ಹಿರಿಯರಿಗೆ ಹಾಲು,ಹಣ್ಣು- ಸಿಹಿ ವಿತರಿಸುವ ಮೂಲಕ ನಾಗರ ಪಂಚಮಿ ಆಚರಿಸಿದರೆ ಅದರಿಂದಲೂ ಫಲ ದೊರೆಯುತ್ತದೆ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *