ಸಂತೃಸ್ತರ ನಡುವೆ ಸಮಯಕೊಟ್ಟ ನಿಸ್ವಾರ್ಥಿಗಳು

ನೆರೆಪೀಡಿತ ಪ್ರದೇಶಗಳಲ್ಲಿ ಕೆಲಸಮಾಡುವ ಎಂ.ಎಲ್.ಎ. ಗಳು ಎಂ.ಪಿ., ಮಂತ್ರಿ, ಅಧಿಕಾರಿ,ಇತ್ಯಾದಿ ಸರ್ಕಾರಿ ವೇತನ, ಭತ್ಯೆ, ಅನುಕೂಲ ಪಡೆದು ಕೆಲಸ ಮಾಡುವವರಿಗೆ ಅದು ಕರ್ತವ್ಯ ಮತ್ತು ಜವಾಬ್ಧಾರಿ.
ಆದರೆ ಇಂಥ ಅನುಕೂಲಗಳಿಲ್ಲದೆ ನಿಸ್ವಾರ್ಥದಿಂದ ಸೇವೆ ಮಾಡುವವರು ಅನೇಕರಿದ್ದಾರೆ ಅವರು ಹೆಚ್ಚೆಂದರೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೋ ಹಾಕಿಕೊಳ್ಳಬಹುದು, ಅಥವಾ ಪತ್ರಿಕೆಗಳಿಗೆ ವರದಿ, ಚಿತ್ರ ನೀಡಬಹುದು. ಆದರೆ ಮನೆ, ಮಠ ಬಿಟ್ಟು ಸಂತೃಸ್ತರಿಗಾಗಿ ದುಡಿಯುವ ಈ ನಿಸ್ವಾರ್ಥ ಸೇವಕರಿದ್ದಾರಲ್ಲ ಅವರು ನಿಜಕ್ಕೂ ಸನ್ಮಾನ, ಪ್ರಶಂಸೆ, ಗೌರವಕ್ಕೆ ಅರ್ಹರು.
ಈ ವಾರದ ಉತ್ತರ ಕನ್ನಡದ ನೆರೆ ಹಾವಳಿಯಲ್ಲಿ ಹೀಗೆ ಕೆಲಸ ಮಾಡಿದ ಕೈ, ಮನಸ್ಸುಗಳು ಅನೇಕ.
ಸಿದ್ಧಾಪುರದಲ್ಲಿ ಹೆಮ್ಮನಬೈಲ್ ಮತ್ತು ಕಲ್ಯಾಣಪುರ, ಅಕ್ಕುಂಜಿಗಳಲ್ಲಿ ತಾತ್ಕಾಲಿಕ ಪುನರ್‍ವಸತಿ ಕೇಂದ್ರಗಳಲ್ಲಿ ದುಡಿದ ಅನೇಕರು ನಮ್ಮ ಗಮನ ಸೆಳೆದರು. ಆದರೆ ಅವರೆಲ್ಲರ ಮುಖ ಪರಿಚಯವಾಗಲಿ,ಸ್ನೇಹ-ಸಂಬಂಧಗಳಾಗಲಿ ನಮಗಿಲ್ಲ. ಆದರೆ ನಮ್ಮ ಪರಿಚಯದ ತಾ.ಪಂ. ಸದಸ್ಯ ನಾಸಿರ್‍ಖಾನ್ ಈ ವಾರವಿಡೀ ಈ ಸಂತೃಸ್ತರ ಜೊತೆಗಿದ್ದರು. ಸಿದ್ಧಾಪುರದ ತಹಸಿಲ್ಧಾರರು ಹುರುಪಿನಿಂದಲೇ ಇಲ್ಲಿಯ ಜವಾಬ್ಧಾರಿ ನಿರ್ವಹಿಸಿದ್ದಾರೆ. ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ದುಡಿದ ಅನೇಕರಿದ್ದಾರೆ. ಇವರೆಲ್ಲರ ಜೊತೆಗೆ ರಾತ್ರಿ ಹಗಲೆನ್ನದೆ ಕೆಲಸ ಮಾಡಿದ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರಿದ್ದಾರೆ. ಇವರಲ್ಲಿ ಕೊಂಡ್ಲಿ ಗ್ರಾಮ ಚಾವಡಿಯ ಆರ್.ಐ. ದಿವಾಕರ್ ನಾಯ್ಕ ತಮ್ಮ ಬಿರುಕುಬಿಟ್ಟ ಕಾಲ್ ಬೆರಳುಗಳ ಪಾದವನ್ನೇ ಊರುತ್ತಾ ಇಡೀ ತಾಲೂಕು ಸುತ್ತಿದ್ದಾರೆ!.
ಇವರ ಮಧ್ಯೆ ಗವಿನಗುಡ್ಡ ಸೇರಿದಂತೆ ಸಿದ್ದಾಪುರ ತಾಲೂಕು, ಉತ್ತರಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಹೀಗೆ ನಿಸ್ವಾರ್ಥ ಸೇವೆ ಮಾಡಿದ ಅನೇಕರಿದ್ದಾರೆ. ಇವರೆಲ್ಲರಿಗೆ ಧನ್ಯವಾದಗಳು. ಊರು ಕೊಚ್ಚಿಹೋದ ಮೇಲೆ ವಾರದ ಕೊನೆ ಅವಧಿಯಲ್ಲ ಓಡೋಡಿ ಬಂದು ಸುದ್ದಿ ಮಾಡಿದ ಕೆಲವು ಎಂ.ಪಿ., ಎಂ.ಎಲ್.ಎ.ಗಳಿಗೂ. ಅವರ ಚಿತ್ರ ಹಾಕಿ ಭಟ್ಟಂಗಿತನ ಮೆರೆದ ಕೆಲವು ಭಕ್ತಹುಳುಗಳಿಗೂ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *