ವಾಡಿಕೆಗಿಂತ ಹೆಚ್ಚಿನ ಮಳೆ, ಸಂತೃಸ್ತರಿಗೆ ತಲಾ 10ಸಾ. ರೂ. ಪರಿಹಾರ ವಿತರಣೆ

ಸಿದ್ಧಾಪುರ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ, ಪ್ರವಾಹ ಸಂತೃಸ್ತರಿಗೆ 10 ಸಾವಿರ ನೆರವುನೀಡಿಕೆ ಸೇರಿದಂತೆ ಅನೇಕ ವಿಚಾರಗಳ ಚರ್ಚೆಗೆ ಇಂದಿನ ತಾಲೂಕಾ ಪಂಚಾಯತ್ ಸಭೆ ಸಾಕ್ಷಿಯಾಯಿತು.
ಸುಷ್ಮಾಸ್ವರಾಜ್ ಸಾವಿನ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ತಾ.ಪಂ. ಸಾಮಾನ್ಯ ಸಭೆ ಇಂದು ನಡೆಯಿತು. ಸಭೆಯಲ್ಲಿ ತಾಲೂಕಿನ ಮಹಾಮಳೆ, ಪ್ರವಾಹ, ತೊಂದರೆಗಳ ಸಮಯದಲ್ಲಿ ಸಹಕರಿಸಿದ ಜನಪ್ರತಿನಿಧಿಗಳು, ಸ್ಥಳಿಯರು, ಅಧಿಕಾರಿಗಳು ಪತ್ರಕರ್ತರನ್ನು ಅಭಿನಂದಿಸಿದ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ಮತ್ತು ಸದಸ್ಯ ನಾಶಿರ್‍ಖಾನ್ ಅನಿರೀಕ್ಷಿತ ಅವಗಢದಲ್ಲಿ ಸಾರ್ವಜನಿಕರು, ಆಡಳಿತ ವ್ಯವಸ್ಥೆ ಸೇರಿದಂತೆ ಇಡೀ ಸಮಾಜ ಸಂತೃಸ್ತರ ಪರವಾಗಿ ಮಿಡಿದಿದೆ. ಜೊತೆಗಿರುವವರು ತೊಂದರೆಯಲ್ಲಿದ್ದಾಗ ಇಂಥ ಸಹಕಾರ ಅವಶ್ಯ ಎಂದರು.
ಸಭೆಗೆ ಮಾಹಿತಿ ನೀಡಿದ ಕೃಷಿ ಅಧಿಕಾರಿ ಪ್ರಶಾಂತ್ ತಾಲೂಕಿನಲ್ಲಿ ವಾಡಿಕೆಯ2161ಮಿ.ಮೀ. ಮಳೆ ಬದಲು ಈವರೆಗೆ 3171 ಮಿಮೀ ಮಳೆ ಸುರಿದಿದೆ. ಮಾಹಿತಿ ನೀಡಿದ ಆಹಾರ ನಿರೀಕ್ಷಕ ಎನ್.ಆಯ್. ಗೌಡ ತಾಲೂಕಿನಲ್ಲಿ 36 ಕುಟುಂಬಗಳು ನಿರಾಶ್ರಿತರಾಗಿದ್ದು ಅವರಿಗೆ ತಾಲೂಕಿನ ಮೂರು ಕಡೆ ಸಂತೃಸ್ತರ ಕೇಂದ್ರಗಳನ್ನು ತೆರೆಯಲಾಗಿತ್ತು. ತಾಲೂಕಿನಲ್ಲಿ 2 ಜೀವಹಾನಿ, 2 ಜಾನುವಾರುಗಳ ಸಾವು ಸಂಭವಿಸಿವೆ. ಅವುಗಳಲ್ಲಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ, ಜಾನುವಾರು ಹಾನಿ ಬಗ್ಗೆ 52 ಸಾವಿರ ರೂ. ಪರಿಹಾರಕ್ಕಾಗಿ ಉಪವಿಭಾಗಾಧಿ ಕಾರಿಗಳಿಗೆ ವರದಿ ನೀಡಲಾಗಿದೆ. ತೊಂದರೆಗೊಳಗಾದ 72 ಮನೆಗಳಿಗೆ ಈವರೆಗೆ189500ರೂ. ನೀಡಲಾಗಿದೆ. ಸಂತೃಸ್ತರಿಗೆಆಹಾರ ಕಿಟ್ ಜೊತೆ 2 ಹಂತಗಳಲ್ಲಿ ತಲಾ ಹತ್ತುಸಾವಿರ ರೂಪಾಯಿ ನೀಡಲಾಗಿದೆ ಎಂದು ವಿವರ ನೀಡಿದರು.
ಸಿದ್ಧಾಪುರ ತಾಲೂಕಿನಾದ್ಯಂತ ಸುರಿದ ಮಳೆ, ಪ್ರವಾಹದ ಪರಿಣಾಮ ಅಂದಾಜು1301ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶವಾಗಿದೆ. ಈ ಹಾನಿಯ ಅಂದಾಜು 43 ಕೋಟಿ ಎಂದು ಪ್ರಾಥಮಿಕ ಸಮೀಕ್ಷೆ ಮಾಡಲಾಗಿದೆ. ತಾಲೂಕಿನ11640 ತೋಟಗಾರ ರೈತರಲ್ಲಿ11126 ರೈತರು ಬೆಳೆವಿಮೆ ಮಾಡಿಸಿದ್ದಾರೆ. ಇವರಿಗೆ ಕಳೆದ ವರ್ಷದ ಬೆಳೆವಿಮೆ ಪರಿಹಾರಸೆಪ್ಟೆಂಬರ್ 15 ರ ಒಳಗೆ ಬರಲಿದೆ. ಈ ವರ್ಷದ ಬೆಳೆಹಾನಿ ವಿಮಾ ಪರಿಹಾರ ಮುಂದಿನವರ್ಷ ದೊರೆಯಲಿದೆ.-ಮಹಾಬಲೇಶ್ವರ ಬಿ.ಎಸ್. (ಹಿ.ತೋ.ನಿ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *