ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ


ಕೇಂದ್ರದ ಆಯುಷ್‍ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಫಲಾನುಭವಿಗಳ ನೋಂದಣಿ ಪ್ರತಿ ತಾಲೂಕುಗಳ ಸರ್ಕಾರಿ ಆಸ್ಫತ್ರೆಗಳಲ್ಲಿ ನಡೆಯುತ್ತಿದೆ.
ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳ ವ್ಯಾಪ್ತಿಯ ಜಿಲ್ಲಾ ಅರೋಗ್ಯಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
ಈ ನೋಂದಣಿ ಮತ್ತು ಆಧಾರ್ ಜೋಡಣೆ ಪ್ರಕ್ರೀಯೆ ಕೆಲವು ದಿವಸ ನಡೆಯಲಿದ್ದು ಸರ್ಕಾರದ ರಿಯಾಯತಿ ಆರೋಗ್ಯ ಸೇವೆ ಪಡೆಯಲು ಈ ಕಾರ್ಡ್ ಕಡ್ಡಾಯ ಎನ್ನಲಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಎಲ್ಲಾ ತಾಲೂಕಾ ಆಸ್ಫತ್ರೆಯಲ್ಲಿ ಈ ನೋಂದಣಿಕಾರ್ಯ ಪ್ರಾರಂಭವಾಗಿ 4ದಿವಸ ಕಳೆದಿದೆ. ಸಿಬ್ಬಂದಿಗಳ ಕೊರತೆ,ತಾಂತ್ರಿಕ ಅನುಕೂಲಗಳಿಲ್ಲದ ವ್ಯವಸ್ಥೆಗಳ ಪರಿಣಾಮ ದಿನವೊಂದಕ್ಕೆ ನೂರು ಜನರ ನೋಂದಣಿ ಕೂಡಾ ನಡೆಯದಿರುವುದು ಸ್ಥಳಿಯರ ಅಸಮಧಾನಕ್ಕೆ ಕಾರಣವಾಗಿದೆ.

ಆಯುಷ್‍ಮಾನ ಭಾರತದ ಎಡವಟ್ಟು ವಾಹನ ಹತ್ತಿದರೆ ದಂಡ ಕಟ್ಟು
ಸಾರ್ವಜನಿಕರ ಅನಾರೋಗ್ಯ ಸಮಸ್ಯೆಗಳಿಗೆ ಸ್ಫಂದಿಸುವ ಆಯುಷ್‍ಮಾನ್ ಭಾರತ ಯೋಜನೆ ಕೇಂದ್ರದ ಅನೇಕ ಯೋಜನೆಗಳಂತೆ ಬರೀ ಘೋಷಣೆಯಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಆರೋಗ್ಯ ಕರ್ನಾಟಕ ಯೋಜನೆಯನ್ನು ಆಯುಷ್‍ಮಾನ್ ಭಾರತ ಯೋಜನೆಯೊಂದಿಗೆ ವಿಲೀನ ಮಾಡುವ ಬಿ.ಜೆ.ಪಿ ಮಾಧ್ಯಮಗಳ ವರದಿಗೆ ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅದು ಉದ್ಧೇಶಪೂರ್ವಕ ಸುದ್ದಿ, ಆ ಸುದ್ದಿಗೆ ಅದನ್ನು ಬರೆದ, ಪ್ರಸಾರಮಾಡಿದ ಮಾಧ್ಯಮಗಳ ವಿಶ್ವಾಸಾರ್ಹತೆಯಷ್ಟೇ ಬೆಲೆ ಎಂದು ಪ್ರತಿಕ್ರೀಯೆ ನೀಡಿದ್ದಾರೆ.!
ಅದೇನೆ ಇರಲಿ, ಆಯುಷ್‍ಮಾನ ಭಾರತವೋ, ಆರೋಗ್ಯ ಕರ್ನಾಟಕವೋ ಯಾವುದೋ ಒಂದು ಯೋಜನೆಯ ಉಪಯೋಗವಾದರೂ ಫಲಾನುಭವಿಗಳಿಗೆ ದಕ್ಕಬೇಕು. ಆದರೆ ಆಯುಷ್‍ಮಾನ್ ಭಾರತ ಅನುಕೂಲಕ್ಕೆ ಇರುವ ಕಠಿಣ ನಿಯಮಗಳು ಅವೈಜ್ಞಾನಿಕ, ಅಪ್ರಾಯೋಗಿಕ ಎನ್ನುವ ಆರೋಪ ವ್ಯಕ್ತವಾಗಿದೆ. ರೋಗಿ ಕಡ್ಡಾಯವಾಗಿ ಸರ್ಕಾರಿ ಆಸ್ಫತ್ರೆಯಲ್ಲಿ ನೋಂದಣಿ ಮಾಡಿಸಿರಬೇಕು ಎನ್ನುವ ನಿಯಮ ಸೇರಿದಂತೆ ವೈದ್ಯರ ನೋಂದಣಿ ಸಂಖ್ಯೆ ಇತ್ಯಾದಿ ನಿಯಮಗಳು ಬಡವರಿಗೆ ವಂಚಿಸಲು ಬೇಕಾದ ಅನಾವಶ್ಯಕ ನಿಯಮ, ನಿಬಂಧನೆಗಳು ಎಂದು ಜನತೆ ಗೋಳಾಡುತ್ತಾ ಶಾಪ ಹಾಕುತಿದ್ದಾರೆ. ಆದರೆ ಈಗಿನ ಬಿ.ಜೆ.ಪಿ. ಗುಲಾಮಿ ಸರ್ಕಾರ ಬಡಜನರ ಈ ದುಖ: ತೊಂದರೆ ಕೇಳುತ್ತಿಲ್ಲ ಈ ಬಗ್ಗೆ ಸಂಘಟಿತ ಪ್ರತಿಭಟನೆ, ಹೋರಾಟದಿಂದ ಮಾತ್ರ ಬಡವರ ಜೇಬಿನ ಲೂಟಿ ತಡೆಯಬಲ್ಲದು.
ಮೋಟಾರ್ ವಾಹನ ಕಾಯಿದೆ- ಕೇಂದ್ರದ ಹೊಸ ಮೋಟಾರ್ ವಾಹನ ಕಾಯಿದೆ ಜಾರಿ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರ ಹಿತಕ್ಕಾಗಿ ದಂಡ ಹಾಕುವುದಾದರೆ ನ್ಯಾಯಾಲಯಗಳು ದಂಡ ವಿಧಿಸಿದಂತೆ ನಾಮಕಾವಾಸ್ಥೆ ಆಗಿರಬೇಕು, ಆದರೆ ಸರ್ಕಾರ ಕಠಿಣ ನಿಯಮಗಳನ್ನು ಮಾಡಿ, ಹೆಚ್ಚಿನ ದಂಡ ವಿಧಿಸಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಶ್ರೀಮಂತರು, ಸ್ಥಿತಿವಂತರಿಗೆ ಕಾನೂನು ಪಾಲನೆ ಕಷ್ಟವಲ್ಲ, ಅವರು ಕಾನೂನು ಪಾಲನೆ ಮಾಡುತ್ತಾರೆ ಇಲ್ಲವೆ ಕಾನೂನು ಮುರಿದು ಬಚಾವಾಗುತ್ತಾರೆ. ಆದರೆ ಕಠಿಣ ಕಾನೂನು ಪಾಲನೆ ಮಾಡಲಾರದ ಬಡವರು, ಕಾನೂನನ್ನು ಬಗ್ಗಿಸಲಾಗದೆ, ಜಾರಿಗೆ ತರದೆ ಮಾರ್ಗಮಧ್ಯದಲ್ಲಿ ಗೋಳಾಡುತ್ತಾರೆ. ಈ ಬಗ್ಗೆ ದೇಶದಾದ್ಯಂತ ವಿರೋಧ ವ್ಯಕ್ತವಾಗುತಿದ್ದು ಈ ಕಾನೂನಿನ ಲೋಪ. ತೊಂದರೆ ಬಗ್ಗೆ ಸಾಮೂಹಿಕ ವಿರೋಧದ ಅಲೆ ಏಳದಿದ್ದರೆ ಭವಿಷ್ಯ ಭೀಕರವಾಗುವುದು, ಬಡವರು ತೊಂದರೆಗೆ ಒಳಗಾಗುವುದು ನಿಶ್ಚಿತ.
ಬ್ಯಾಂಕ್ ವಿಲೀನ-
ಈ ಹಿಂದೇ ಕೆಲವು ಬ್ಯಾಂಕ್‍ಗಳನ್ನು ದೊಡ್ಡಬ್ಯಾಂಕ್‍ಗಳ ಜೊತೆಗೆ ವಿಲೀನ ಮಾಡಿದ ಕೇಂದ್ರ ಸರ್ಕಾರ ಮತ್ತೆ ಕೆಲವು ಬ್ಯಾಂಕ್‍ಗಳನ್ನು ವಿಲೀನ ಮಾಡಿ ಕೇಂದ್ರೀಕೃತ ವ್ಯವಸ್ಥೆ ಜಾರಿಗೆ ಮುಂದಾಗಿದೆ.
ಜನಸಾಮಾನ್ಯರಿಗೆ ಬ್ಯಾಂಕ್ ಅನಿವಾರ್ಯತೆಯನ್ನು ಹೆಚ್ಚಿಸಿ,ಬ್ಯಾಂಕ್ ಮತ್ತು ಹಣಕಾಸಿನ ಸೇವೆ ಕಡಿತ ಮಾಡುವ ಹಿಂದೆ ಸದುದ್ದೇಶಕ್ಕಿಂತ ಕೇಂದ್ರದ ಸರ್ವಾಧಿಕಾರಿಗಳ ದುರುದ್ದೇಶವೇ ಎದ್ದು ಕಾಣುತ್ತಿದೆ. ಬ್ಯಾಂಕ್ ವಿಲೀನದ ಬಗ್ಗೆ ಸಾಂಕೇತಿಕ ಪ್ರತಿಭಟನೆ, ವಿರೋಧಗಳಾದರೂ ವ್ಯಕ್ತವಾಗಿವೆ. ಆದರೆ ಆರೋಗ್ಯ ಯೋಜನೆ ಲೋಪ, ಸಾರಿಗೆ ನಿಯಮಗಳ ಮೋಸಗಳ ಬಗ್ಗೆ ಜನತೆ ಕನಿಷ್ಟ ಪ್ರತಿಭಟನೆಯ ಧ್ವನಿಯನ್ನೂ ಎತ್ತಿಲ್ಲ. ಒಪ್ಪಿತ ಸಮ್ಮತಿ, ಒಪ್ಪಿತ ಸೌಹಾರ್ದತೆಯ ನೀತಿ ಜಾರಿ ಮಾಡುತ್ತಿರುವ ಕೇಂದ್ರದ ಬಿ.ಜೆ.ಪಿ. ಸರ್ಕಾರ ಈ ಮೂರು ಯೋಜನೆ,ಕಾರ್ಯಕ್ರಮ, ನಿಯಮಗಳ ಹೊರತಾಗಿ ನೂರಾರು ಕಾನೂನು, ಯೋಜನೆ, ಕಾರ್ಯಕ್ರಮಗಳಲ್ಲಿ ಉಳ್ಳವರ ಪರ, ಇಲ್ಲದವರ ವಿರೋಧ ಮಾಡುತ್ತಿರುವ ವಿದ್ಯಮಾನಕ್ಕೆ ಅಂಗೈ ಹುಣ್ಣಿಗೆ ಕನ್ನಡಿ ಬೇಡ ಎನ್ನುವ ಸ್ಥಿತಿ. ಈ ಬಗ್ಗೆ ಜನತೆ ಬಂಡೇಳದಿದ್ದರೆ ಕಾಲ ಕಠಿಣವಾಗುತ್ತಾ ಸರ್ವಾಧಿಕಾರ, ಮತವ್ಯಗ್ರತೆ ದೇಶವನ್ನು ತಿಂದುಹಾಕುವುದಂತೂ ಸತ್ಯ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *