ವೈಯಕ್ತಿಕ ಆರೋಗ್ಯ ಕಾರ್ಡೋ? ಕುಟುಂಬದ ಆರೋಗ್ಯ ಕಾರ್ಡೋ-


ಆರೋಗ್ಯಕಾರ್ಡ್ ಕಡ್ಡಾಯ, ಸರಳೀಕೃತವಾಗುವವರೆಗೆ ಆಧಾರ್, ಪಡಿತರ ಚೀಟಿಗಳಿಂದಲೂ ಪ್ರಯೋಜನ ಪಡೆಯಬಹುದು!
ಆರೋಗ್ಯ ಕರ್ನಾಟಕ ಚೀಟಿ ವ್ಯವಸ್ಥೆ ಸರಳೀಕರಣಗೊಳ್ಳಲಿದ್ದು ಈ ಕಾರ್ಡ್ ಕಡ್ಡಾಯವಾಗಿ ಪಡೆಯಬೇಕು ಈ ಕಾರ್ಡ್ ಇಲ್ಲದವರು ಆಧಾರ್ ಚೀಟಿ ಮತ್ತು ಪಡಿತರ ಚೀಟಿಗಳಿಂದ ಆರೋಗ್ಯ ಕರ್ನಾಟಕದ 5 ಲಕ್ಷ ರಿಯಾಯತಿ ಪಡೆಯಬಹುದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಇಂದು ಇಲ್ಲಿಯ (ಸಿದ್ಧಾಪುರ) ತಾ.ಪಂ. ಸಭಾಭವನದಲ್ಲಿ ನಡೆದ ಗ್ರಾಮೀಣ ರಸ್ತೆಟಾಸ್ಕ್ ಫೋರ್ಸ್ (ನಿರ್ವಹಣಾ ಸಭೆ) ಸಭೆಯಲ್ಲಿ ಮಾತನಾಡಿದ ಅವರು ಆರೋಗ್ಯ ಕಾರ್ಡ್ ಗೊಂದಲ ತಿಳಿಗೊಳ್ಳಲಿದೆ.ಒಂದು ದಿವಸಕ್ಕೆ 30 ಜನರಿಗೆ ನೀಡಬಹುದಾದ ಈ ಕಾರ್ಡ್ ತಾಲೂಕಿನ ಎಲ್ಲಾ ಜನರಿಗೆ ಸಿಗುವುದು ಯಾವಾಗ? ಎಂದು ಪ್ರಶ್ನಿಸಿದರು.
ಮಳೆ ಮತ್ತು ಪ್ರವಾಹ ಹಾನಿಯ ವಿವರ ಕೇಳಿದ ಕಾಗೇರಿ ತಾಲೂಕಿನಲ್ಲಿ ವಾಡಿಕೆಗಿಂತ 63% ಮಳೆ ಹೆಚ್ಚಾಗಿದ್ದು ಕೆಲವೆಡೆ ನೂರು ಪ್ರತಿಶತ ಮಳೆ ಹೆಚ್ಚು ಬಿದ್ದಿದೆ ಇದರಿಂದ ಭಾದಿತರಾದ 14 ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ದೊರೆಯಲಿದೆ. ಉಳಿದ ಕೆಲವರು ಸರ್ಕಾರ ತೋರಿಸುವ ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಳ್ಳುವುದಾದರೆ ಅವರಿಗೂ 5 ಲಕ್ಷ ನೆರವು ನೀಡುತ್ತೇವೆ. ಅರಣ್ಯ ಅತಿಕ್ರಮಣ ಮಾಡಿ ಮನೆ ಮಾಡಿಕೊಂಡವರ ಮನೆಗೆ ತೊಂದರೆಯಾದರೆ ಅವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಧನ ದೊರೆಯಲಿದೆ ಎಂದರು.
ಕೆ.ಡಿ.ಪಿ. ಸಭೆಯಂತಾದ ಶಾಸಕರ ಗ್ರಾಮೀಣ ರಸ್ತೆ ಟಾಸ್ಕ್ ಫೋರ್ಸ್ ಸಭೆ-
ವಿಧಾನಸಭಾ ಅಧ್ಯಕ್ಷ, ಶಾಸಕ ವಿಶ್ವೇಶ್ವರ ಹೆಗಡೆ ಅಧ್ಯಕ್ಷತೆಯ ಗ್ರಾಮೀಣ ರಸ್ತೆ ಟಾಸ್ಕ್ ಫೋರ್ಸ್ ಸಭೆ ಪ್ರಾರಂಭದಲ್ಲಿ ಸಾಮಾನ್ಯ ಕೆ.ಡಿ.ಪಿ. ಸಭೆಯಂತೆನಿಸಿತು. ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಅದಕ್ಕೆ ಪರಿಹಾರ, ಅನುದಾನದ ಮಾತು ಆಡಬೇಕು ಆದರೆ, ಇಂದು ನಡೆದ ಅಧ್ಯಕ್ಷರ ಸಭೆ ಸಾಮಾನ್ಯ ಕೆ.ಡಿ.ಪಿ. ಸಭೆಯಂತೆನಿಸಿತು.
ಈ ಹಿಂದೆ ಇಂಥ ಹಲವಾರು ಟಾಸ್ಕ ಫೊರ್ಸ್ ಸಭೆಗಳೂ ಹೀಗೆ ನಾಮಕಾವಸ್ಥೆ ಆಗಿ ಅವುಗಳ ಪರಿಣಾಮ ಶೂನ್ಯ ಆಗಿದ್ದು ಇತಿಹಾಸ.

ವೈಯಕ್ತಿಕ ಆರೋಗ್ಯ ಕಾರ್ಡೋ? ಕುಟುಂಬದ ಆರೋಗ್ಯ ಕಾರ್ಡೋ-
ಆರೋಗ್ಯ ಕರ್ನಾಟಕ ಚೀಟಿ ಪಡೆಯುವ ಪ್ರಕ್ರೀಯೆ, ಪ್ರಗತಿ ಬಗ್ಗೆ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ವಿವರ ಪಡೆಯುತಿದ್ದಾಗ ಪ್ರತಿಕ್ರೀಯಿಸಿದ ಶ್ರೀಧರ ಹೆಗಡೆ ಬೈಲಳ್ಳಿ ಬೇರೆ ರಾಜ್ಯಗಳಲ್ಲಿ ಇಡೀ ಕುಟುಂಬಕ್ಕೆ ಒಂದೇ ಆರೋಗ್ಯ ಕಾರ್ಡ್ ಮಾಡಿಸಲಾಗುತ್ತಿದೆ, ಆದರೆ ಇಲ್ಲಿ ಪ್ರತಿ ಸದಸ್ಯನಿಗೆ ಯಾಕೆ ಪ್ರತ್ಯೇಕ ಕಾರ್ಡ್ ಎಂದು ಪ್ರಶ್ನಿಸಿದರು. ಅದಕ್ಕೆ ಸಮರ್ಪಕ ಉತ್ತರ ನೀಡದ ಕಾಗೇರಿ ಇನ್ನೂ ಸರಳವಾಗಲಿದೆ ಎಂದಷ್ಟೇ ಹೇಳಬಲ್ಲೆ ಎಂದು ನುಣುಚಿಕೊಂಡರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *