ಇದು ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ಷೇತ್ರದ ಕತೆ- ಜನಪ್ರತಿನಿಧಿಗಳು ಯಾಕಿದ್ದೀರಿ?ಏನು ಮಾಡುತಿದ್ದೀರಿ?ಎಂದು ಪ್ರಶ್ನಿಸಿದ ವಿದ್ಯಾರ್ಥಿ


ಈ ಕ್ಷೇತ್ರದಲ್ಲಿ ಜನಪ್ರತಿನಿಧಿಗಳು ಏನು ಮಾಡುತ್ತಿದ್ದೀರಿ? ಜನಪ್ರತಿನಿಧಿಗಳಿಗೆ ಕಿಂಚಿತ್ ಕಾಳಜಿ ಇಲ್ಲವೆ? ಹೀಗೆಂದು ಪ್ರಶ್ನಿಸಿದವನು ಒಬ್ಬ ವಿದ್ಯಾರ್ಥಿ, ಈತ ಪ್ರಶ್ನಿಸಿದ್ದು ಸ್ನೇಹಿತರು, ಕುಟುಂಬಸ್ಥರ ಎದುರಿಗಲ್ಲ, ತಾಲೂಕಾ ಪಂಚಾಯತ್ ಕೆ.ಡಿ.ಪಿ.ಸಭೆಯಲ್ಲಿ.
ಇಂದು ಇಲ್ಲಿಯ (ಸಿದ್ಧಾಪುರ) ತಾ.ಪಂ. ಸಭಾಭವನದಲ್ಲಿ ತಾ.ಪಂ. ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮಾಸಿಕ ಕೆ.ಡಿ.ಪಿ. ಸಭೆ ನಡೆಯಿತು. ಈ ಸಭೆಗೆ ತಮ್ಮ ಅಹವಾಲು ಹೇಳಿಕೊಳ್ಳಲು ಬಂದಿದ್ದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಭೆಯಲ್ಲಿ ಸೇರಿದ್ದರು.
ಇವರ ಪ್ರತಿನಿಧಿಯಾಗಿ ವೇದಿಕೆಗೆ ಬಂದ ವಿದ್ಯಾರ್ಥಿ ಹರೀಶ್ ನೀವೆಲ್ಲಾ ಏನು ಮಾಡುತಿದ್ದೀರಿ? ಕಳೆದ ಒಂದೆರಡು ವರ್ಷಗಳಿಗಿಂತ ಹೆಚ್ಚು ಅವಧಿಯಿಂದ ನಾವು ನಮ್ಮ ಬಸ್ ಅವ್ಯವಸ್ಥೆಯ ಸಮಸ್ಯೆ ಹೇಳುತ್ತಲೇ ಬರುತಿದ್ದೇವೆ. ಆದರೆ ನಿಮಗ್ಯಾರಿಗೂ ಈ ತೊಂದರೆ, ರಗಳೆ ಅರ್ಥವಾಗುವ ಹಾಗೆ ಕಾಣುವುದಿಲ್ಲ. ತಾಲೂಕಿನ ಏಕೈಕ ಸರ್ಕಾರಿ ಕಾಲೇಜಿಗೆ 8-10 ಕಿ.ಮೀ. ನಡೆದು ಬಂದು ಬಸ್ ಹತ್ತಿ ಅಧ್ಯಯನಕ್ಕೆ ಬರುವ ಅನೇಕ ವಿದ್ಯಾರ್ಥಿ,ವಿದ್ಯಾರ್ಥಿನಿ
ಗಳಿದ್ದೇವೆ. ನಮಗೆ ನಿತ್ಯ ನಿರಂತರ ಬಸ್ ಅವ್ಯವಸ್ಥೆಯ ತೊಂದರೆ, ಈ ಬಗ್ಗೆ ಅನೇಕ ಬಾರಿ ಮನವಿ ನೀಡಿ, ಪ್ರತಿಭಟನೆ ಮಾಡಿ ಬೇಡಿಕೆ ಇಟ್ಟರೂ ಪರಿಸ್ಥಿತಿ ಸುಧಾರಿಸಿಲ್ಲ, ವಿದ್ಯಾರ್ಥಿಗಳು ಪ್ರತಿಭಟನೆ ಮಾಡಲು ಹೋದರೆ ಪೊಲೀಸರು ದೂರು ದಾಖಲಿಸುತ್ತಾರೆ. ಇಂಥ ವ್ಯವಸ್ಥೆ ಯಾಕೆ? ಹೀಗಾದರೆ ನಾವು ಕೇಳುವುದ್ಯಾರನ್ನು ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರೀಯಿಸಿದ ತಾ.ಪಂ. ಅಧ್ಯಕ್ಷರು ಏನು ಮಾಡಬೇಕೆಂದು ತೋಚುತ್ತಿಲ್ಲ ಎಂದರು. ಈ ಸಮಯದಲ್ಲಿ ಪ್ರತಿಕ್ರೀಯಿಸಿದ ತಾ.ಪಂ. ಸದಸ್ಯ ನಾಸಿರ್‍ಖಾನ್ ಸಾರಿಗೆ ಸಂಸ್ಥೆ ನೌಕರರಿಗೆ ನಾವು ಹೇಳಿ ಸುಸ್ತಾಗಿದ್ದೇವೆ. ಈ ಅವ್ಯವಸ್ಥೆ ಸುಧಾರಿಸುವುದು ಕಷ್ಟ ಎಂದರು. ಇದಕ್ಕೆ ಪ್ರತಿಕ್ರೀಯಿಸಿದ ಸಾರಿಗೆ ಸಂಸ್ಥೆ ಪ್ರತಿನಿಧಿ ಎಂ.ಡಿ.ನಾಯ್ಕ ಸಭೆಯ ಅಭಿಪ್ರಾಯ, ಬೇಡಿಕೆ ಮೇಲಿನ ಅಧಿಕಾರಿಗಳಿಗೆ ತಿಳಿಸುತ್ತೇವೆ ಎಂದರು.
ಯಾಕೆ ಈ ಸ್ಥಿತಿ-
ನಗರದಲ್ಲಿ ಸ್ಥಾಪನೆಯಾಗಬೇಕಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜಕಾರಣಿಗಳ ಒಳಒಪ್ಪಂದದಿಂದಾಗಿ ಗ್ರಾ.ಪಂ. ಪ್ರದೇಶದಲ್ಲಿ ಸ್ಥಾಪನೆಯಾಗಿದೆ. ಈ ಕಾಲೇಜು, ಇಲ್ಲಿಯ ಸಮಸ್ಯೆ, ತೊಂದರೆಗಳ ಬಗ್ಗೆ ಈ ಜಿಲ್ಲೆಯ ಸಂಸದ ಅನಂತಕುಮಾರ ಹೆಗಡೆ ಅವರ ರಾಜಕೀಯ ಜೀವನದಲ್ಲಿ ಯಾವಾಗಲೂ ಕೇಳಿದ್ದಿಲ್ಲ, ಶಾಸಕರು, ಸಚಿವರು ಈಗ ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಹಿಂದಿನ ಅವಧಿಯಲ್ಲಿ ತಾನು ವಿರೋಧಿ ಪಕ್ಷದ ಶಾಸಕ ಹಾಗಾಗಿ ಈ ಸರ್ಕಾರದಲ್ಲಿ ನಮ್ಮ ಕೆಲಸ ಆಗುತ್ತಿಲ್ಲ ಎಂದು ಅಲವತ್ತುಕೊಳ್ಳುತಿದ್ದರು. ಈಗ ರಾಜ್ಯ ವಿಧಾನಸಭಾ ಅಧ್ಯಕ್ಷರಾಗಿರುವ ಕಾಗೇರಿ ಕಳೆದ ವಾರ ಇದೇ ಸರ್ಕಾರಿ ಮಹಾವಿದ್ಯಾಲಯದ ಕಾರ್ಯಕ್ರಮಕ್ಕೆ ಬಂದವರು ಮತ್ತೆ ಭರವಸೆ ನೀಡಿ ತೆರಳಿದ್ದರು. ಹೀಗೆ ಶಾಸಕರ ಭರವಸೆ, ಅಧಿಕಾರಿಗಳ ಉಪೇಕ್ಷೆಯಿಂದ ನೊಂದ ವಿದ್ಯಾರ್ಥಿಗಳು ಕಳೆದ ವರ್ಷಕೂಡಾ ತಾ.ಪಂ. ಸಭೆಗೆ ಬಂದು ತಮ್ಮ ತೊಂದರೆ ಹೇಳಿಕೊಂಡಿದ್ದರು. ಈಗ ಮತ್ತೆ ತಾ.ಪಂ. ಸಭೆಗೆ ಬಂದು ತಾ.ಪಂ. ಸದಸ್ಯರು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳಿಗೆ ಶಾಸಕರ ಪಕ್ಷದವರು, ತಾ.ಪಂ. ಸ್ಥಾಯಿ ಸಮೀತಿ ಅಧ್ಯಕ್ಷರೂ ಆಗಿರುವ ಮಹಾಬಲೇಶ್ವರ ಹೆಗಡೆ ನಾವೂ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ನೀವು ಪ್ರತಿಭಟನೆ ಮಾಡುವುದಾದರೆ ನಾವೂ ಬರುತ್ತೇವೆ ಎಂದರು.
ಆಗ ಪ್ರತಿಕ್ರೀಯಿಸಿದ ವಿದ್ಯಾರ್ಥಿಗಳು ಬಸ್ ಬೇಡಿಕೆ ಹಿನ್ನೆಲೆಯಲ್ಲಿ ಪ್ರತಿಭಟಸಲು ಮುಂದಾದರೆ ಪೊಲೀಸರು ಪ್ರಕರಣ ದಾಖಲಿಸುತ್ತಾರೆ.ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲು ಕೇಳಿದರೆ ಪೊಲೀಸ್ ಪ್ರಕರಣ ದಾಖಲಿಸುವುದಾದರೆ ನಮ್ಮ ಭವಿಷ್ಯದ ಗತಿಯೇನು? ಎಂದರು. ಅಧ್ಯಕ್ಷರಾದಿಯಾಗಿ ತಾ.ಪಂ. ಸದಸ್ಯರು ನಾವು ವಿಧಾನಸಭಾಧ್ಯಕ್ಷರಿಗೆ,ಶಾಸಕರಿಗೆ ಹೇಳಿ ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ ಎನ್ನುವ ತಪ್ಪು ಮಾಡಲಿಲ್ಲ!

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *