ಗೋಲ್‍ಮಾಲ್ ಬೆಳೆವಿಮೆಗೆ ಎಲ್ಲೆಲ್ಲೂ ವಿರೋಧ


ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಎಂದು ಪ್ರಚಾರ ಮಾಡಲಾಗಿದ್ದ ಬೆಳೆವಿಮೆ ಯೋಜನೆ ವಿಫಲವಾಗಿರುವ ವಿದ್ಯಮಾನ ಗೋಚರಿಸತೊಡಗಿದೆ.
ಮೋದಿ ನೇತೃತ್ವದ ಹಿಂದಿನ ಎನ್.ಡಿ.ಎ. ಸರ್ಕಾರದ ಅವಧಿಯಲ್ಲಿ ವಿಪರೀತ ಪ್ರಚಾರದೊಂದಿಗೆ ಪ್ರಾರಂಭವಾದ ಫಸಲ್ ಭಿಮಾ ಮತ್ತು ಹವಾಮಾನ ಆಧಾರಿತ ಬೆಳೆವಿಮೆ ಗಳೆರಡೂ ವಿಫಲವಾಗಿವೆ. ಈ ಯೋಜನೆ ಬರೀ ಪ್ರಚಾರ, ಕೆಲವು ಉದ್ಯಮಿಗಳನ್ನು ಕೊಬ್ಬಿಸಿದ ಯೋಜನೆ ಎಂದು ರಾಜ್ಯ, ರಾಷ್ಟ್ರಮಟ್ಟದ ಮುಖಂಡರು ಬಹುಹಿಂದೇ ದೂರಿದ್ದರು. (ಲಕ್ಷಾಂತರ ಕೋಟಿ ಅವ್ಯವಹಾರ) ವಾಸ್ತವವೆಂದರೆ ಪ್ರಧಾನಿ ಮೋದಿ ಈ ಯೋಜನೆಯ ಬಹುತೇಕ ರಾಜ್ಯಗಳ ಜವಾಬ್ಧಾರಿಯನ್ನು ತಮ್ಮ ಸ್ನೇಹಿತರಾದ ಅಂಬಾನಿ ಸಹೋದರರಿಗೆ ನೀಡಿದ್ದರು.
ಅವರು ಬೆಳೆವಿಮೆಗೆಂದು ಕಟ್ಟಿಸಿಕೊಂಡ ಕಂತಿನ ಲಕ್ಷಾಂತರ ಕೋಟಿ ಮೊತ್ತದಲ್ಲಿ ಪ್ರತಿಶತ 15 ರಷ್ಟನ್ನೂ ಮರಳಿ ರೈತರಿಗೆ ನೀಡಿಲ್ಲದಿರುವುದು ಅಂಕಿಅಂಶಗಳ ಸತ್ಯ. ವಿಚಿತ್ರವೆಂದರೆ ಈ ಯೋಜನೆ ಜಾರಿಯಾಗಿ ಮೂರ್ನಾಲ್ಕು ವರ್ಷ ಕಳೆದ ನಂತರವೂ ಈ ಯೋಜನೆಯ ಗುಟ್ಟು, ರಹಸ್ಯಗಳು ಫಲಾನುಭವಿ ರೈತರಿಗೆ ದೊರೆಯುತ್ತಿಲ್ಲ. ಶಿರಸಿ-ಸಿದ್ಧಾಪುರ ಸೇರಿದಂತೆ ರಾಜ್ಯದಲ್ಲಿ ರೈತರ ಬೆಳೆ ವಿಮೆ ಕಂತು ಸಂಗ್ರಹಿಸುವ ಏಜೆನ್ಸಿ ಜವಾಬ್ಧಾರಿ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ವಹಿಸುತ್ತದೆ. ಆದರೆ ಈ ಬಗೆಗಿನ ಎಳ್ಳಷ್ಟು ಮಾಹಿತಿಗಳು ಕೆ.ಡಿ.ಸಿ.ಸಿ. ಬ್ಯಾಂಕ್ ಮತ್ತು ಇದರ ಅಧೀನ ಪ್ರಾಥಮಿಕ ಸಹಕಾರಿ ಸಂಘಗಗಳಲ್ಲಿಲ್ಲ.
ಈ ತೊಂದರೆ ಬಗ್ಗೆ ಸಿದ್ಧಾಪುರ ತಾಲೂಕಾ ರೈತ ಸಂಘ ಆಕ್ಷೇಪ ಎತ್ತಿ ತಾಲೂಕಿನಲ್ಲಿ ಬೆಳೆವಿಮೆ ವ್ಯವಹಾರ ಅನುಮಾನಾಸ್ಫದವಾಗಿದೆ ಇದರಿಂದ ರೈತರಿಗೆ ಅನುಕೂಲದ ಬದಲು ತೊಂದರೆ ಆಗುತ್ತಿದೆ ಎಂದಿದ್ದಾರೆ.
ರವಿವಾರ ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆದ ಸರ್ವೋದಯ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ರೈತರು ಬೆಳೆವಿಮೆ ಬಗ್ಗೆ ಆಕ್ಷೇಪ ಎತ್ತಿ ಬೆಳೆವಿಮೆ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಾದರೆ ನೀವ್ಯಾಕೆ ಪ್ರೀಮಿಯಂ ಕಟ್ಟಿಸಿಕೊಳ್ಳುತ್ತೀರಿ ಎಂದು ಆಕ್ಷೇಪಿಸಿದರು.
ಈ ಪ್ರಶ್ನೆಗಳಿಗೆ ಉತ್ತರಿಸಿದ ಕೆ.ಡಿ.ಸಿ.ಸಿ.ಬ್ಯಾಂಕ್ ನಿರ್ಧೇಶಕ ಷಣ್ಮುಖಗೌಡರ್ ಇದು ಕೇಂದ್ರದ ಆದೇಶ, ರಾಜ್ಯ ಸರ್ಕಾರ ಕೇಂದ್ರದ ಆದೇಶಕ್ಕೆ ಒಪ್ಪಿ ಕೆ.ಡಿ.ಸಿ.ಸಿ. ಬ್ಯಾಂಕ್ ಗೆ ಜವಾಬ್ಧಾರಿ ವಹಿಸಿದ ಮೇಲೆ ಅನಿವಾರ್ಯವಾಗಿ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ವಹಿಸಬೇಕು ಎಂದು ಸದಸ್ಯರನ್ನು ಸಮಜಾಯಿಸಿದರು.
ಇದೇ ಬೆಳೆವಿಮೆ ರಗಳೆ ಬಗ್ಗೆ ಸೋಮುವಾರ ನಡೆದ ಸಿದ್ಧಾಪುರ ತಾಲೂಕಾಪಂಚಾಯತ್ ಸಭೆ ಆಕ್ಷೇಪಿಸಿದೆ. ಸದಸ್ಯರು ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳನ್ನು ಪ್ರಶ್ನಿಸಿ ಬೆಳೆವಿಮೆ ಏನಾಯ್ತು, ಮಾಹಿತಿ ಕೊಡುವವರ್ಯಾರು? ಎಂದು ಪ್ರಶ್ನಿಸಿದರು. ಅದಕ್ಕೆ ಪ್ರತಿಕ್ರೀಯಿಸಿದ ತೋಟಗಾರಿಕಾ ಸಹಾಯಕ ನಿರ್ಧೇಶಕ ಮಹಾಬಲೇಶ್ವರ ಪ್ರೀಮಿಯಂ ಕಟ್ಟಿಸಿಕೊಂಡು, ಕಮೀಷನ್ ಪಡೆಯುವ ಕೆ.ಡಿ.ಸಿ.ಸಿ. ಬ್ಯಾಂಕ್ ಅದಕ್ಕೆ ಉತ್ತರದಾಯಿ ಎಂದರು.
ಹೀಗೆ ಜನಪ್ರತಿನಿಧಿಗಳು, ರೈತರು, ಸಹಕಾರಿ ಸಂಘಗಳು ಎಲ್ಲೆಂದರಲ್ಲಿ ಬೆಳೆವಿಮೆ ತೊಂದರೆ, ರೈತರಿಗಾಗುತ್ತಿರುವ ಮೋಸದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಜನಪ್ರತಿನಿಧಿಗಳಾದ ಸಂಸದರು, ಶಾಸಕರು, ಸಚಿವರು ತುಟಿಪಿಟಿಕ್ ಮಾಡುತ್ತಿಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *