ಗಾಂಧಿ ಸ್ಮರಣೆ ಉತ್ತರಕನ್ನಡ ಅನುಲಕ್ಷಿಸಿ

ನಾಳೆ ಗಾಂಧಿ ಜಯಂತಿ-
ಶಿರಸಿ-ಸಿದ್ಧಾಪುರದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿದ್ದ ಮಹಾತ್ಮಾ ಗಾಂಧಿ!
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಸಿದ್ಧಾಪುರಕ್ಕೆ ಬಂದಿದ್ದರು ಮತ್ತು ಮಹಾತ್ಮಾ ಗಾಂಧಿಯವರಿಂದಾಗಿ ಉತ್ತರಕನ್ನಡದ ಮಾರಿ ಹಬ್ಬದ ಕೋಣನ ಬಲಿ,ಅಸ್ಪೃಶ್ಯತೆ ಆಚರಣೆ ಮುಕ್ತಿ ಹಾಗೂ ವಿಧವಾ ವಿವಾಹ ಪ್ರಾರಂಭವಾದವು ಎನ್ನುವ ಐತಿಹಾಸಿಕ ದಾಖಲೆಗಳಿವೆ.
ಮಹಾತ್ಮಾಗಾಂಧಿ ಶಿರಸಿ-ಸಿದ್ಧಾಪುರಕ್ಕೆ 1936 ರಲ್ಲಿ ಭೇಟಿ ನೀಡಿದ್ದರು. ಅಂದು ಅವರು ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲಿ ಮಾಡುತಿದ್ದ ಕೋಣನ ಬಲಿ ಆಚರಣೆ ನಿಲ್ಲಿಸುವಂತೆ ವಿನಂತಿಸಿದ್ದರು. ಶಿರಸಿಯ ರೂಢಿ-ಸಂಪ್ರದಾಯಗಳ ಜನರು ಗಾಂಧೀಜಿಯವರ ವಿನಂತಿಯನ್ನು ಮನ್ನಿಸಿರಲಿಲ್ಲ. ಆದರೆ ಮಾರಿಕಾಂಬಾ ಜಾತ್ರೆಯಲ್ಲಿ ಕೋಣನಬಲಿ ತಡೆಯುವ ವಾಗ್ದಾನ ಮಾಡದಿದ್ದರೆ ತಾನು ದೇವಸ್ಥಾನ ಪ್ರವೇಶಿಸುವುದಿಲ್ಲ, ಮತ್ತು ಅನ್ನ-ಆಹಾರ ಮುಟ್ಟುವುದಿಲ್ಲ ಎಂದು ಹಠ ಹಿಡಿದಿದ್ದರಿಂದ ಸ್ಥಳಿಯರು ಗಾಂಧೀಜಿಯವರಿಗೆ ಕೋಣನ ಬಲಿ ನಿಲ್ಲಿಸಲು ಸಮ್ಮತಿಸಿದರು.
ಇದೇ ಸಮಯದಲ್ಲಿ ಸಿದ್ಧಾಪುರಕ್ಕೆ ಬಂದಿದ್ದ ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ವಿಧವಾ ವಿವಾಹಕ್ಕೆ ಒಪ್ಪದ ಸಂದರ್ಭವನ್ನು ಎತ್ತಿಕೊಂಡು ಆ ಕುಟುಂಬಕ್ಕೆ ವಿಧವಾ ವಿವಾಹ ಮಾಡಿಸುವ ಸಂಕಲ್ಫ ತೊಡುತ್ತಾರೆ.
ಸಿದ್ಧಾಪುರದ ದೊಡ್ಮನೆ ಕುಟುಂಬ ವಿಧವಾ ವಿವಾಹಕ್ಕೆ ಒಪ್ಪದೆ ಅಸಹಕಾರ ವ್ಯಕ್ತಪಡಿಸಿದಾಗ ಕೆಲವು ನಿಬಂಧನೆಗೆ ಒಳಪಟ್ಟು ವಿಧವಾ ವಿವಾಹವನ್ನೂ ಮಾಡಿಸುವಲ್ಲಿ ಯಶಸ್ವಿಯಾಗುತ್ತಾರೆ.

ಇಂಥದ್ದೇ ಇನ್ನೊಂದು ಪ್ರಸಂಗವೆಂದರೆ….
ಸ್ವಾತಂತ್ರ್ಯ ಹೋರಾಟಗಾರ್ತಿ ದೇವಿ ಹಸ್ಲರ್ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರೂ ಸಮಾರಂಭ, ಸಮಾವೇಶಗಳಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಅಂದಿನ ಆಚರಣೆಯ ಪ್ರಕಾರ ದೇವಿ ಹಸ್ಲರ್ ಪರಿಶಿಷ್ಟಳೆಂಬ ಕಾರಣಕ್ಕೆ ಅವರನ್ನು ಹೊರಗೆ ಬರುವುದಕ್ಕೆ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯ ಗುಂಪಿನೊಂದಿಗೆ ಸೇರುವುದಕ್ಕೆ ಅವಕಾಶಮಾಡುತ್ತಿರಲಿಲ್ಲ. ಈ ಸೂಕ್ಷ್ಮ ವಿಚಾರ ಗಮನಿಸಿದ ಗಾಂಧೀಜಿ ಸಮಾಜದಲ್ಲಿ ಅಸ್ಪೃಶ್ಯ ತೆ,ಅಸಮಾನತೆ, ರೂಢಿ ಸಂಪ್ರದಾಯಗಳ ಸಂಕುಚಿತತೆ ತೊಲಗದೆ ಸಮಾಜಸುಧಾರಣೆ,ಸ್ವಾತಂತ್ರ್ಯ ಹೋರಾಟ ಸಾಧ್ಯವಿಲ್ಲ ಎಂದು ಅಸ್ಪೃ ಶ್ಯತೆ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದರು.
ಹೀಗೆ ಮಹಾತ್ಮಾ ಗಾಂಧಿ ಆಕಾಲದ ಮೌಢ್ಯ, ಅಂಧಾಚರಣೆ,ಸಾಮಾಜಿಕ ಅನಿಷ್ಟಗಳಾದ ಕೋಣನಬಲಿ, ಅಸ್ಪೃ ಶ್ಯತೆ, ವಿರೋಧಿಸಿ ವಿಧವಾ ವಿವಾಹಕ್ಕೆ ಉತ್ತೇಜನ, ಬೆಂಬಲ ನೀಡಿದ್ದರು.

ಶಿರಸಿ-ಸಿದ್ದಾಪುರದ ಈ ಘಟನೆಗಳು ಸಿದ್ಧಾಪುರ,ಶಿರಸಿಗಳ ಇತಿಹಾಸ, ಚರಿತ್ರೆಯಲ್ಲಿ ಮಹಾತ್ಮಾಗಾಂಧಿಯವರ ಮಹತ್ವವನ್ನು ಸಾರಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *