

ಸಿದ್ದಾಪುರ; ತಾಲೂಕಿನಾದ್ಯಂತ ಇಂದು ಭೂಮಿಪೂಜೆ (ಶೀಗೆ ಹುಣ್ಣಿಮೆ) ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ತಾವು ಬೆಳೆದ ಬೆಳೆ ಇನ್ನೇನು ಕೈಗೆ ಬರುವ ಹಂತದಲ್ಲಿ ಇದೆ. ಹೀಗಿರುವಾಗ ಭೂತಾಯಿಗೆ ಸೀಮಂತ ಕಾರ್ಯ ನೆರವೇರಿಸಲು ಮಹಿಳೆಯರು ಸಡಗರದಿಂದ ರಾತ್ರಿಯಿಂದಲೇ ಬಯಕೆಯ ಅಡುಗೆಗಳನ್ನು ಸಿದ್ದಪಡಿಸುತ್ತಾರೆ. ಕಡುಬು, ಕಜ್ಜಾಯ, ವಿವಿಧಬಗೆಯ ಪಲ್ಯೆ ಸೇರಿದಂತೆಹಲವು ರೀತಿಯ ಖಾದ್ಯಗಳನ್ನು ತಯಾರಿಸುತ್ತಾರೆ. ಬೆಳಿಗ್ಗೆ ತಮ್ಮತಮ್ಮ ಹೊಲಗದ್ದೆಗಳಿಗೆ ತೆರಳಿ ಭೂಮಿತಾಯಿಯನ್ನು ಶೃಂಗಾರ ಮಾಡಿ ಪೂಜೆ ನೆರವೆರಿಸುತ್ತಾರೆ. ಬೆಳಿಗ್ಗೆಯಿಂದಲೇ ಹೋಯ್…ಹೋಯ್…ಹೋಯ್ ಎಂಬ ಧ್ವನಿ ಕೇಳುವುದೇ ಎಲ್ಲಿಲ್ಲದ ಆನಂದ. ನಂತರ ಹೊಲದಲ್ಲಿ ಕುಳಿತು ಊಟಮಾಡಿ ಮನೆಗೆ ತೆರಳುತ್ತಾರೆ.ಹೊಲದಲ್ಲಿ ಊಟ ಮಾಡುವುದೇ ಒಂದು ಸಂತೋಷದ ಕ್ಷಣ.












_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






