ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ

ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ
-ಸಿದ್ಧರಾಮ ಎಸ್.
ಶಾಸಕಾಂಗ,ಕಾರ್ಯಾಂಗ, ನ್ಯಾಯಾಂಗಗಳು ಸಂವಿಧಾನದ ಪರಿಧಿಯೊಳಗೆ ಕೆಲಸಮಾಡಬೇಕಾಗುತ್ತದೆ ಇವೆಲ್ಲವುಗಳಿಗಿಂತ ಸಂವಿಧಾನ ಶ್ರೇಷ್ಠ ಎಂದಿರುವ ಕಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸಿದ್ಧರಾಮ ಎಸ್. ಸಂವಿಧಾನದ ಅರಿವಿಲ್ಲದೆ ಮಾಡುವ ಕೆಲಸ ಫಲಕೊಡುವುದು ಕಷ್ಟ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಇಂದು ಇಲ್ಲಿಯ ಲಯನ್ಸ್
ಬಾಲಭವನದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ ಮತ್ತು ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ವೈದ್ಯ ಡಾ.ಎಂ.ಪಿ.ಶೆಟ್ಟಿ ಮತ್ತು ನಿವೃತ್ತ ಶಿಕ್ಷಕ ಲಕ್ಷ್ಮಣ ನಾಯ್ಕ ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಬಗ್ಗೆ ಪ್ರಾಸ್ಥಾವಿಕವಾಗಿ ಮಾತನಾಡಿದ ನಿವೃತ್ತನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ತಾಲೂಕಿನಲ್ಲಿ ನಿವೃತ್ತ ನೌಕರರ ಸಂಘದಿಂದ ಸ್ವಚ್ಛತೆ,ಶೌಚಾಲಯ ನಿರ್ಮಾಣ, ಮಳೆಕೊಯ್ಲಿನ ತಿಳುವಳಿಕೆ ನೀಡುತಿದ್ದೇವೆ.ಅದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶೆಟ್ಟಿ ಮತ್ತು ನಾಯ್ಕ ಸಾರ್ವಜನಿಕ ಸಹಕಾರ,ಜನರ ಪ್ರೀತಿಯಿಂದ ತಮ್ಮ ಬದುಕು ಸಹನೀಯವಾಗಿರುವುದಕ್ಕೆ ಕೃತಜ್ಞತೆ ತಿಳಿಸಿದರು.
ಹಿರಿಯರ ಅನುಭವವೇ ಶಿಕ್ಷಣ, ಸ್ವಾರ್ಥ,ಲಾಭ,ಲೋಭಗಳಿಂದ ಇಂದು ಮಾನವೀಯ ಸಂಬಂಧಗಳೇ ಶಿಥಿಲವಾಗುತ್ತಿರುವುದರಿಂದ ಕಾನೂನು,ಸಂವಿಧಾನ ಇದಕ್ಕೆ ಪರಿಹಾರ ನೀಡುತ್ತವೆ
-ಸಿದ್ಧರಾಮ ಎಸ್.

ವೈಚಾರಿಕ ಸ್ಪಷ್ಟತೆಯಲ್ಲಿ ಅರಳಿದ ಮನುಷ್ಯಪ್ರೀತಿ
ಡಾ. ರಹಮತ್ ತರೀಕೆರೆಯವರು ನಮ್ಮ ನಡುವಿನ ಪ್ರಮುಖ ಸಂಸ್ಕøತಿ ಚಿಂತಕ ಹಾಗೂ ಸಂಶೋಧಕ.
ಕರ್ನಾಟಕವನ್ನು ಬಹುವಿಧದಲ್ಲಿ ಅರ್ಥಮಾಡಿಕೊಳ್ಳುತ್ತ, ಪರ್ಯಾಯ ಸಂಸ್ಕøತಿಗಳ ಶೋಧನೆಯಲ್ಲಿ ತೊಡಗಿರುವ ರಹಮತ್‍ರ ಚಿಂತನೆಗಳ ಪ್ರಾತಿನಿಧಿಕ ಸಂಕಲನ ‘ತನ್ನತನದ ಹುಡುಕಾಟ’ ಕೃತಿ .
ಮನುಷ್ಯವಿರೋಧಿ ತತ್ವಸಿದ್ಧಾಂತ ಅಜೆಂಡಾಗಳನ್ನು ಎದುರು ಹಾಕಿಕೊಂಡು ಸಂಶೋಧನೆ ಅಥವಾ ಚಿಂತನೆಗೆ ತೊಡಗುವ ಅವರ ಅಧ್ಯಯನದಲ್ಲಿ ಮಾನವೀಯತೆಯ ಬಾಗಿಲುಗಳು ತೆರೆದುಕೊಳ್ಳುತ್ತಾ ಹೋಗುತ್ತವೆ. ಅವರ ಯಾವುದೇ ಬರವಣೆಗೆಗಳ ಮೂಲ ಆಶಯವೂ ಇದೇ ಆಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *