ತಣ್ಣಗಾದ ದೀಪಾವಳಿ!

ಅಕಾಲದಮಳೆಯ ನಡುವೆ
ತಣ್ಣಗಾದ ದೀಪಾವಳಿ
ಮಲೆನಾಡಿನ ದೊಡ್ಡ ಹಬ್ಬ ದೀಪಾವಳಿಯ ಸಂಬ್ರಮಕ್ಕೆ ಮಳೆ ತಣ್ಣೀರೆರಚಿದೆ. ಕಳೆದ ಒಂದು ವಾರದಿಂದ ಪ್ರತಿನಿತ್ಯ ಬೀಳುತ್ತಿರುವ ಮಳೆ
ರೈತರನ್ನು ಕಂಗಾಲು ಮಾಡಿದೆ. ಮಳೆ-ಬೆಳೆ ಆಶ್ರಯಿಸಿರುವ ರೈತರು ಸೊಂಪಾಗಿದ್ದರೆ ಹಬ್ಬಕ್ಕೆ ಮಜಾ. ಆದರೆ ಈ ವರ್ಷದ ಮಳೆ ರೈತರ ಖುಷಿ-ಸಂಬ್ರಮ ಕಸಿದುಕೊಂಡಿದೆ.
ರೈತರು ತಾವು ಬೆಳೆದ ಫಸಲನ್ನೇ ವಿಭಿನ್ನವಾಗಿ ಪೂಜಿಸುವ ಹಬ್ಬಕ್ಕೆ ಅಡಿಕೆ, ಅಡಿಕೆಯ ಹಿಂಗಾರ ತೆಗೆಯಲು ಈ ಅಕಾಲದ ಮಳೆ ಅನುಕೂಲ ಮಾಡಿಕೊಟ್ಟಿಲ್ಲ. ಸಿದ್ಧಾಪುರದಂಥ ಚಿಕ್ಕ ನಗರದಲ್ಲಿ ಕೂಡಾ ಅಡಿಕೆ, ಹಿಂಗಾರ, ಎಲೆ ಸೇರಿದಂತೆ ದೀಪಾವಳಿ ಫಲಾವಳಿಗಳು ಮಾರುಕಟ್ಟೆಪ್ರವೇಶಿಸಿವೆ. ರೈತರು ಅಡಿಕೆ,ಸಿಂಗಾರ ತೆಗೆಯುವ ಕೂಲಿಗೆ ಕೊಡುವ ವೇತನದಲ್ಲಿ ನಗರದಲ್ಲಿ ಈ ವಸ್ತುಗಳು ಸಿಗುತ್ತವೆ ಎಂದುಕೊಂಡು ಖರೀದಿಯಲ್ಲಿ ತೊಡಗಿದ್ದ ರೈತರ ನಿರುತ್ಸಾಹದ ಹಿಂದೆ ಈ ವರ್ಷದ ಮಳೆಯ ಪ್ರಭಾವವಿದೆ.
ಖರೀದಿ ಜೋರು-
ಮೂರು-ನಾಲ್ಕು ದಿವಸಗಳ ದೀಪಾವಳಿ ಈ ವರ್ಷಮೂರೇ ದಿನಗಳಿಗೆ ಸೀಮಿತವಾಗಿರುವುದು ಈ ವರ್ಷದ ವಿಶೇಶ. ಪ್ರತಿವರ್ಷ ಅಮವಾಸ್ಯೆಯ ಹಿಂದಿನ ದಿವಸದಿಂದ ವರ್ಷತೊಡಕಿನ ವರೆಗೆ ಗ್ರಾಮೀಣ ಜನರಿಗೆ ನಾಲ್ಕೈದು ದಿನಗಳು, ನಗರದ ಜನರಿಗೆ ಮೂರು ದಿವಸಗಳ ಹಬ್ಬ ನಡೆಯುವುದು ವಾಡಿಕೆ.
ಆದರೆ ಈ ವರ್ಷ ಅಮವಾಸ್ಯೆ, ಮರುಪಾಡ್ಯಗಳು ತಳುಕುಹಾಕಿಕೊಂಡಿರುವುದರಿಂದ ಬಹುತೇಕ ಕಡೆ ಗೋಪೂಜೆ ಸೋಮುವಾರವೇ ನಡೆಯುತ್ತಿದೆ. ವೈದಿಕರು ರಾಕ್ಷಸನನ್ನು ಸಂಹರಿಸುವ ರೀತಿ, ಅಬ್ರಾಹ್ಮಣರು ತಮ್ಮ ದ್ರಾವಿಡದೊರೆ ಬಲೀಂದ್ರನನ್ನು ಆರಾಧಿಸುವ ರೀತಿ-ನೀತಿಗಳಿಂದ ಆಚರಿಸುವ ಈ ಹಬ್ಬ ಮಾಂಸಾಹಾರ,ಸಿಹಿತಿನಿಸುಗಳ ವಿಶೇಶದ ಉತ್ಸವ.
ಮಲೆನಾಡಿನ ಕೆಲವು ಕಡೆ ಗೋಪೂಜೆ, ದನ ಬೆರೆಸುವ ಮೊದಲು ಪ್ರಾಣಿಬಲಿಕೊಟ್ಟು ಈ ಹಬ್ಬವನ್ನು ಆಚರಿಸುತ್ತಾರೆ. ಬದಲಾಗುತ್ತಿರುವ ರೀತಿ-ನೀತಿ, ಆಧುನಿಕತೆಯ ಸ್ಫರ್ಶ, ಪಶುಪಾಲನೆಯ ವಿರಳತೆಗಳ ನಡುವೆ ಈ ವರ್ಷದ ದೀಪಾವಳಿಗೆ ಮಳೆಯ ರಗಳೆ ಕೂಡಾ ಸೇರಿದೆ. ಆದರೆ ಹೂವು,ಹಣ್ಣು, ಮೀನು-ಮಾಂಸ ಖರೀದಿಯ ಪ್ರಮಾಣ,ಉತ್ಸಾಹ ತಗ್ಗಿಲ್ಲ.

ಕಾಗೋಡುತಿಮ್ಮಪ್ಪನವರಿಗೆ
35 ವರ್ಷಗಳಲ್ಲಿನ
ಎರಡು ವಿಭಿನ್ನ ಪತ್ರಗಳು
ದೀವರು ಈಡಿಗರಲ್ಲ. ಎಂದು ಅನೇಕ ವರ್ಷಗಳಿಂದ ಚರ್ಚೆ, ಸಂವಾದ, ವಿವಾದಗಳೆಲ್ಲಾ ನಡೆಯುತ್ತಿವೆ. 1970-80 ರ ದಶಕದಲ್ಲಿ ದೀವರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಗೋಪಾಲಗೌಡರ ನೇತೃತ್ವದಲ್ಲಿ ಸದನದ ಒಳಗೆ, ಹೊರಗೂ ಚರ್ಚೆ ನಡೆದು ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರಿಂದಾಗಿ ದೀವರ ಪಂಗಡ ಇತರ ಹಿಂದುಳಿದವರ ಪಟ್ಟಿಯಲ್ಲಿ ಸೇರ್ಪಡೆಯಾಯಿತು. ಇದೇ ಸಮಯದಲ್ಲಿ ರಾಜ್ಯದ ಕೆಲವೆಡೆ ಅನೇಕರು ಈ ಚರ್ಚೆ ಸಂವಾದಗಳಲ್ಲಿ ಪಾಲ್ಗೊಂಡು ‘ದೀವರ’ ವಿಚಾರವನ್ನು ಸರ್ಕಾರ, ಸಾರ್ವಜನಿಕರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು.
ರೈತ ಹೋರಾಟಗಾರ ದಿನಕರ ದೇಸಾಯಿಯವರಿಗೆ ತಾಲೂಕಿನಲ್ಲೇ ಮೊಟ್ಟಮೊದಲ ಬಾರಿಗೆ ವೇದಿಕೆ ಕಲ್ಪಿಸಿದ ನಮ್ಮೂರು ಕೋಲಶಿರ್ಸಿ, ದೀವರು ನಾಮಧಾರಿಗಳ ಸಂಘಟನೆಗೆ ನಮ್ಮಜ್ಜ ಕನ್ನಾ ಕೆ. ನಾಯ್ಕರ ನೇತೃತ್ವದಲ್ಲಿ ಸಂಘಟನೆ ಪ್ರಾರಂಭಿಸಿತ್ತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *