ನಾಡದೇವಿಯ ಅಭಿಮಾನೋತ್ಸವ ಚಂದ್ರಾವಳಿ ವಿಲಾಸ ಯಕ್ಷಗಾನ

ನಾಡದೇವಿ ಶ್ರೀ ಭುವನೇಶ್ವರಿ ಅಭಿಮಾನೋತ್ಸವ ಬಳಗವು ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು ಭುವನಗಿರಿಯ ಶ್ರೀ ಭುವನೇಶ್ವರಿ ದೇವಸ್ಥಾನದಲ್ಲಿ ನಾಡದೇವಿಯ ಅಭಿಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ.
ನ.29ರ ಬೆಳಿಗ್ಗೆ 6ಕ್ಕೆ ಮಂಗಳವಾದ್ಯ ನಾದಸ್ವರದೊಂದಿಗೆ ಆರಂಭಗೊಂಡು ಮೂಲನಿವಾಸಿನಿ ಶ್ರೀ ಭುವನೇಶ್ವರಿ ಅಮ್ಮನವರಿಗೆ ಅಭಿಷೇಕ, ಪೂಜಾ ಕೈಂಕರ್ಯಗಳು ದೇವಸ್ಥಾನದ ಪ್ರಧಾನ ಅರ್ಚಕ ವೇ| ಶ್ರೀಧರ ಭಟ್ಟ ಮುತ್ತಿಗೆಯವರ ನೇತೃತ್ವದಲ್ಲಿ, ವೇ|ಶೇಷಗಿರಿ ಭಟ್ಟ ಗುಂಜಗೋಡ ಸಂಯೋಜಕತ್ವದಲ್ಲಿ ನಡೆಯುವದು.
9ರಿಂದ ಉದಯ ಟಿವಿ ಸಮಸ್ತೆ ಶಂಕರ ಕಾರ್ಯಕ್ರಮದ ಗುರು ವಿದ್ವಾನ್ ಡಾ| ಗೋಪಾಲಕೃಷ್ಣ ಜೋಶಿಯವರ ಮಾರ್ಗದರ್ಶನದಲ್ಲಿ ಚಂಡಿಕಾಯಾಗ ಜರುಗುವದು.10ರಿಂದ ಕುಂಕುಮಾರ್ಚನೆ, ನಂತರ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾಪೂಜೆ, 12.30ಕ್ಕೆ ಮಹಾಮಂಗಳಾರತಿ, ನಂತರ ಮಹಾಪ್ರಸಾದ ವಿನಿಯೋಗ ನಡೆಯುವದು.
ಸಂಜೆ 4ರಿಂದ ಸಾಂಸ್ಕøತಿಕ ಕಾರ್ಯಕ್ರಮ, ಕೇಶವ ಹೆಗಡೆ ಕೊಳಗಿ, ಗೋಪಾಲ ಆಚಾರ್ಯ, ಅಶೋಕ ಭಟ್ ಸಿದ್ದಾಪುರ ಮುಂತಾದ ಕಲಾವಿದರ ಪಾಲ್ಗೊಳ್ಳುವಿಕೆಯಲ್ಲಿ ಚಂದ್ರಾವಳಿ ವಿಲಾಸ ಯಕ್ಷಗಾನ, ನಂತರ ರಸಮಂಜರಿ ಕಾರ್ಯಕ್ರಮಗಳು ನಡೆಯುವದು. ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಮಸ್ತರೂ ಪಾಲ್ಗೊಳ್ಳಬೇಕೆಂದು ಶ್ರೀ ಭುವನೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇ| ಶ್ರೀಧರ ಭಟ್ಟ ಹಾಗೂ ಶ್ರೀ ಭುವನೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯವರು ಕೋರಿಕೊಂಡಿದ್ದಾರೆ.
ಕರ್ನಾಟಕದ ನಾಡದೇವಿ ಶ್ರೀ ಭುವನೇಶ್ವರಿಯ ದೇವಿಯ ಕುರಿತಾಗಿ ಕನ್ನಡಿಗರು ಮಾತ್ರವಲ್ಲದೇ ಅನ್ಯಭಾಷಿಕರೂ ಅಭಿಮಾನ, ಪೂಜ್ಯ ಭಾವನೆಯನ್ನು ಹೊಂದಿದ್ದಾರೆ.ಕರ್ನಾಟಕ ಸಾಹಿತ್ಯ, ಕಲೆ, ಸಂಸ್ಕøತಿಗೆ ಹೆಸರಾದಂತೆ ಸ್ವಾಭಿಮಾನ, ಕರ್ಮಯೋಗಕ್ಕೆ ಹೆಸರಾದದ್ದು. ನಮ್ಮ ರಾಜ್ಯವು ಪ್ರಕೃತಿವಿಕೋಪ ಮುಂತಾದ ಸಮಸ್ಯೆಗಳಿಂದ ನಲುಗಿಹೋಗಿದ್ದು ಕನ್ನಡಿಗರಾದ ನಾವು ನಮ್ಮ ಬದುಕನ್ನು ನಾವೇ ಕಟ್ಟಿಕೊಳ್ಳಬೇಕಿದೆ.
ನಾಡದೇವಿ ಮುನಿದರೆ ವಿಕೋಪಗಳು ಮತ್ತೆ, ಮತ್ತೆ ಕಾಣಿಸಿಕೊಳ್ಳುತ್ತವೆ. ನಾವು ಮೊಟ್ಟಮೊದಲು ಮಾಡಬೇಕಾದ ಶುಭಕಾರ್ಯವೆಂದರೆ ನಾಡದೇವಿಯನ್ನು ಸಂತೃಪ್ತಗೊಳಿಸಬೇಕು. ಹಾಗಾದಾಗ ಮಾತ್ರ ನಾಡು ಮತ್ತಷ್ಟು ಸಮೃದ್ಧಿ ಕಾಣುತ್ತದೆ. ಈ ಕಾರಣದಿಂದ ಸಮಸ್ತ ಕನ್ನಡಿಗರ ಪರವಾಗಿ ಪ್ರಥಮ ಹೆಜ್ಜೆಯಾಗಿ ನ.29ರಂದು ಸಂಸ್ಕಾರಯುತ ಶುಭಕಾರ್ಯಕ್ಕೆ ಶ್ರೀ ಭುವನೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ, ಪ್ರಧಾನ ಅರ್ಚಕರು, ಇನ್ನಿತರ ವಿದ್ವಾಂಸರ, ಅಸಂಖ್ಯಾತ ಭಕ್ತರ ಸಹಕಾರದೊಂದಿಗೆ ಮುಂದಾಗಿದ್ದೇವೆ.
ಎಲ್ಲ ಕನ್ನಡದ ಕಟ್ಟಾಳುಗಳು, ಶ್ರೀ ದೇವಿಯ ಭಕ್ತರು ಈ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಅಭಿಮಾನೋತ್ಸವ ಬಳಗದ ಪರವಾಗಿ ಲೋಕೇಶ್ ಹೆಗಡೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ಅನರ್ಹರು ಸೋತರೂ
ಮಂತ್ರಿ,ಗೆದ್ದರೆ ಸಚಿವರು
ಡಿ.5 ರಂದು ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಅರ್ಧಕ್ಕಿಂತ ಹೆಚ್ಚು ಅನರ್ಹ ಶಾಸಕರು ಸೋಲುವ ಆತಂಕದ ಹಿನ್ನೆಲೆಯಲ್ಲಿ ಅನರ್ಹರು ಸೋತರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಸಚಿವರನ್ನಾಗಿ ಮಾಡಲು ಬಿ.ಜೆ.ಪಿ. ತೀರ್ಮಾನಿಸಿದೆಯಂತೆ. ಚುನಾವಣಾ ಪೂರ್ವ ಸಮೀಕ್ಷೆಗಳ ಹಿನ್ನೆಯಲ್ಲಿ ಬಿ.ಜೆ.ಪಿ.ಯಿಂದ ಸ್ಫರ್ಧಿಸಿರುವ ಅನರ್ಹ ಶಾಸಕರಲ್ಲಿ ಅರ್ಧಕ್ಕಿಂತ ಹೆಚ್ಚು ಜನ ಸೋಲುವ ಹಿನ್ನೆಲೆಯಲ್ಲಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿಸಿ ಸಚಿವರನ್ನಾಗಿಸಲು ಅಮಿತ್ ಶಾ ಸಲಹೆ ನೀಡಿದ್ದಾರಂತೆ.
ಈ ಬಗ್ಗೆ ಚರ್ಚೆ ಸಂವಾದಗಳು ನಡೆಯುತ್ತಿದ್ದು ಕಾಂಗ್ರೆಸ್, ಜೆ.ಡಿ.ಎಸ್.ಪಕ್ಷಗಳು ಅನರ್ಹರ ಸೋಲಿಗೆ ಶತಾಯ ಗತಾಯ ಪ್ರಯತ್ನಿಸುತ್ತಿರುವಂತೆ ಅನರ್ಹರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಸೋಲುವುದು ಖಚಿತ ಎನ್ನಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *