ಅವಶ್ಯಕತೆಗೆ ತಕ್ಕಷ್ಟು ಪದವಿಧರ ಶಿಕ್ಷಕರಿಲ್ಲದೆ ಶಾಲೆಗಳ ಶಿಕ್ಷಕ-ಶಿಕ್ಷಕಿಯರ ಹುದ್ದೆ ಖಾಲಿ ಖಾಲಿ

ಪದವಿಧರ ಪ್ರಾಥಮಿಕ ಶಿಕ್ಷಕರ ಕೊರತೆಯಿಂದಾಗಿ ಅವಶ್ಯವಿದ್ದ ಶಾಲೆಗಳಲ್ಲಿ ಶಿಕ್ಷಕರನ್ನು ದೊರಕಿಸಲು ಸಾಧ್ಯವಾಗಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ ಹೇಳಿದ್ದಾರೆ.
ಹೂಡಲಮನೆ ಪ್ರಾಥಮಿಕ ಶಾಲೆ ಭೇಟಿಯ ವೇಳೆ ಮಾಧ್ಯಮಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಅವರು ಸರ್ಕಾರ ಗುಣಾತ್ಮಕ ಶಿಕ್ಷಣ ದೊರಕಿಸುವ ಹಿನ್ನೆಲೆಯಲ್ಲಿ ನೂತನ ಯೋಜನೆಗಳನ್ನು ತಯಾರಿಸುತ್ತಿದೆ. ಆದರೆ ಪದವಿಧರ ಶಿಕ್ಷಕರ ಮೇಮಕಾತಿಗೆ ಅರ್ಜಿ ಕರೆದರೆ 10 ಸಾವಿರ ಹುದ್ದೆಗಳಿಗೆ 2500 ಜನ ಮಾತ್ರ ಅರ್ಜಿ ಹಾಕಿದ್ದಾರೆ. ಹಾಗಾಗಿ ಕೆಲವು ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಈ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಮಾಡಿ ತೊಂದರೆ ಬಗೆಹರಿಸುವ ವ್ಯವಸ್ಥೆ ಮಾಡುತ್ತೇವೆ ಎಂದರು.

ಶಾಲಾಚೀಲ ರಹಿತ ದಿನ, ವಾಟರ್ ಬೆಲ್ ಸೇರಿದಂತೆ ಚಟುವಟಿಕೆ ಆಧರಿತ ಗುಣಾತ್ಮಕ ಶಿಕ್ಷಣದಿಂದ ಶಿಕ್ಷಣದ ವ್ಯವಸ್ಥೆ ಸುಧಾರಿಸಲಿದ್ದೇವೆ. ಪ್ರಾಯೋಗಿಕ ಪರೀಕ್ಷೆ, ಉಪನಿರ್ಧೇಶಕರಿಗೆ ತರಬೇತಿ, ಕಾರ್ಯಾಗಾರ ಮಾಡುವ ಮೂಲಕ ವಿದ್ಯಾರ್ಥಿಸ್ನೇಹಿ ಶಿಕ್ಷಣಕ್ಕೆ ಒತ್ತು ಕೊಡುತ್ತೇವೆ.
-ಸುರೇಶ್‍ಕುಮಾರ,ಶಿಕ್ಷಣ ಸಚಿವ.

ಅರಳು ಹುರಿದಂತೆ ಪಟಪಟನೆ ಇಂಗ್ಲೀಷ್ ಮಾತನಾಡಿದ ಮಕ್ಕಳು, ಸಚಿವರ ಪ್ರಶಂಸೆ
ಎಲ್ಲಾ ವ್ಯವಸ್ಥೆಗಳೂ ಅಚ್ಚುಕಟ್ಟು, ಶಾಲೆಯೆಂದರೆ ದೇವಾಲಯಕ್ಕಿಂತ ಹೆಚ್ಚೆನ್ನುವ ಭಾವ. ಪಟಪಟನೆ ಅರಳು ಹುರಿದಂತೆ ಇಂಗ್ಲೀಷ್ ನಲ್ಲಿ ಮಾತನಾಡುವ ಕನ್ನಡದಮಕ್ಕಳು ಇದು ತಾಲೂಕಿನ ಹೂಡ್ಲಮನೆ ಶಾಲೆಯಲ್ಲಿ ಇಂದು ಕಂಡ ದೃಶ್ಯ.
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ಮಗಳ ಮದುವೆ ಆರತಕ್ಷತೆಗೆ ಬಂದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಅಣಲೇಬೈಲ್ ಪಂಚಾಯತ್ ಹೂಡ್ಲಮನೆ ಶಾಲೆಯನ್ನು ಭೇಟಿ ಮಾಡಿದರು.
ಸಚಿವರು ಅವರೊಂದಿಗೆ ಬಂದಿದ್ದ ಅಧಿಕಾರಿಗಳಿಗೆ ಈ ಶಾಲೆಯ ಆವರಣ ಪ್ರವೇಶಿಸುತಿದ್ದಂತೆ ಹೊಸ ಅನುಭವ ಆದಂತಾಯಿತು. ಗಣ್ಯರನ್ನು ಸ್ವಾಗತಿಸಿದ ವಿದ್ಯಾರ್ಥಿಗಳು ಸಚಿವರನ್ನು ಕರೆದೊಯ್ದು ಇಡೀ ಶಾಲೆ, ಶಾಲೆಯ ವ್ಯವಸ್ಥೆ, ವಿಶೇಶಗಳನ್ನು ಒಬ್ಬೊಬ್ಬರಾಗಿ ಇಂಗ್ಲೀಷ್ ನಲ್ಲಿ ಪರಿಚಯಿಸುತಿದ್ದರೆ…

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *