ಒಡನಾಡಿ ಬಿಡುಗಡೆ,ರಂಜಿಸಿದ ಯಕ್ಷಗೀತೆ

ರತ್ನಾಕರ & ತಮ್ಮಣ್ಣರಿಗೆ ಸನ್ಮಾನ

ಟಿ.ವಿ.,ಮೊಬೈಲ್ ಮಾದಕವಸ್ತುಗಳು ಈಗಿನ ನವ ಜನಾಂಗ ಮತ್ತು ಮಹಿಳೆಯರಿಗೆ ಮಾರಕವಾಗಿವೆ ಎಂದು ಅಭಿಪ್ರಾಯ ಪಟ್ಟಿರುವ ಸಾಹಿತಿ,ಜಿಲ್ಲಾ ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷ ರೋಹಿದಾಸ ನಾಯ್ಕ ಸಾಹಿತ್ಯದ ಕೃಷಿ ಮತ್ತು ಓದಿನಿಂದ ಈ ಅಪಾಯವನ್ನು ತಪ್ಪಿಸಬಹುದು ಎಂದಿದ್ದಾರೆ.
ರತ್ನಾಕರ ನಾಯ್ಕ ಸಂಪಾದಿಸಿರುವ ಸಾಹಿತ್ಯ ಸಮ್ಮೇಳನಗಳ ಒಡನಾಡಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು ದೂರದರ್ಶನಗಳ ಧಾರವಾಹಿಗಳು, ಮೊಬೈಲ್ ಅನುಕೂಲಗಳು, ಮಾದಕ ದೃವ್ಯಗಳು ನಮಗೆ ಅಪಾಯಕಾರಿಯಾಗಿ ಪರಿಣಮಿಸಿವೆ.
ಈ ತೊಂದರೆಯಿಂದ ಪಾರಾಗಲು ಮನುಷ್ಯತ್ವ, ಮಾನವೀಯ ಅಂತ:ಕರಣದ ಸಾಹಿತ್ಯದ ಕೃಷಿ ಮತ್ತು ಓದೇ ಬಿಡುಗಡೆಯಾಗಬೇಕು ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಸಾಂಸ್ಕøತಿಕ ಘಟಕದ ಜಿಲ್ಲಾಧ್ಯಕ್ಷ ಗೋಪಾಲನಾಯ್ಕ ಭಾಶಿ ಕಾರ್ಯಕ್ರಮಕ್ಕೆ ಸರ್ವರನ್ನೂ ಸ್ವಾಗತಿಸಿದರು.
ಪತ್ರಕರ್ತ ಕನ್ನೇಶ್ ಕೋಲಶಿರ್ಸಿ ಮಾತನಾಡಿ ಒಡನಾಡಿ ಒಂದು ಆಕರ ಗೃಂಥದಂತಿದೆ. ಇಲ್ಲಿಯ ಮಾಹಿತಿ-ಆಶಯಗಳು ಸಮಾಜಮುಖಿಯಾಗಿವೆ ಎಂದರು.
ಹಿರಿಯ ಸಾಹಿತಿ ವಿಷ್ಣುನಾಯ್ಕ ಮಾತನಾಡಿ ಒಡನಾಡಿಯಲ್ಲಿ ಮಹತ್ವದ ಮಾಹಿತಿ-ವಿಶೇಶ ವಿಚಾರಗಳಿವೆ. ವ್ಯಕ್ತಿಯಾಗಿ ರತ್ನಾಕರ ಒಂದು ಸಂಸ್ಥೆಯ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ನಿವೃತ್ತ ಶಿಕ್ಷಕ ತಮ್ಮಣ್ಣ ಬೀಗಾರ್ ರನ್ನು ಸಂಘಟಕರು ಸನ್ಮಾನಿಸಿದರು.
ಪೌರ್ಣಿಮಾ ಸಾಹಿತ್ಯ ವೇದಿಕೆಯಿಂದ ಕೃತಿ ಸಂಗ್ರಹಿಸಿದ ರತ್ನಾಕರ ನಾಯ್ಕರನ್ನು ಸನ್ಮಾನಿಸಲಾಯಿತು. ರಾಮಚಂದ್ರ ಭಾಗವತರ ಸುಶ್ರಾವ್ಯ ಯಕ್ಷಗೀತೆಗಳಿಂದ ಪ್ರಾರಂಭವಾದ ಕಾರ್ಯಕ್ರಮ ಅವರ ಯಕ್ಷಗೀತೆಗಳೊಂದಿಗೆ ಮುಕ್ತಾಯವಾಯಿತು.
ಸಾಹಿತ್ಯ ಪರಿಷತ್‍ನ ಚಟುವಟಿಕೆ ಕ್ಷೀಣಿಸಿರುವ ಬಗ್ಗೆ ವಿಷಾದಿಸಿದ ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಎಸ್ ಗೌಡರ್ ಉತ್ತಮ ಕಾರ್ಯಕ್ರಮಗಳಿಂದ ಸಾಹಿತ್ಯ ಪರಿಷತ್ ಕ್ರೀಯಾಶೀಲವಾಗಬೇಕೆಂದು ಆಶಿಸಿದರು. ಸಹಾಯಕ ಅಭಿಯೋಜಕ ಚಂದ್ರಶೇಖರ್ ಎಸ್.ಎಚ್., ವಿಮರ್ಶಕ ಸುಬ್ರಾಯ ಮತ್ತೀಹಳ್ಳಿ, ಕೃತಿ ಸಂಪಾದಕ ರತ್ನಾಕರ ನಾಯ್ಕ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *