ಇದು ರೈತನಮಗ ದೇವರಾಜ್‍ಸಾಹಸಗಾಥೆ

ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ
ಇದು ರೈತನಮಗ ದೇವರಾಜ್‍ಸಾಹಸಗಾಥೆ
ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
ದೇವರಾಜ್ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಮನೂರು ಹಾಲಗಳಲೆ ರೈತ ಕುಟುಂಬದ ಕುಡಿ. ಭಾರತೀಯ ಆಡಳಿತ ಸೇವೆ ಪರೀಕ್ಷೆ ತೇರ್ಗಡೆಯಾಗಿದ್ದ ದೇವರಾಜ್ 2 ವರ್ಷಗಳ ಕೆಳಗೆ ಅಂತಿಮ ಆಯ್ಕೆಯಲ್ಲಿ ಸ್ಫಲ್ಪ ಅಂಕಗಳ ಅಂತರದಿಂದ ಆಯ್.ಎ.ಎಸ್. ನಿಂದ ವಂಚಿತರಾಗಿದ್ದರು. ನಂತರ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆಗೆ ಸೇರಿದ್ದ ಅವರು ಭಾರತೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಯ ಪರೀಕ್ಷೆಗಳನ್ನು ಎದುರಿಸುತಿದ್ದರು.
ಮೊನ್ನೆ ಪ್ರಕಟವಾದ ಕೆ.ಪಿ.ಎಸ್.ಸಿ. ಆಯ್ಕೆ ಪಟ್ಟಿಯಲ್ಲಿ ಹೆಚ್ಚಿನ ಅಂಕಗಳಿಂದ ಎ.ಸಿ. ಹದ್ದೆಗೆ ಆಯ್ಕೆಯಾಗಿರುವ ಇವರು ಹೊಸವರ್ಷದಲ್ಲಿ ಸಹಾಯಕ ಕಮೀಷನರ್ ಆಗಿ ಸೇವೆಗೆ ಸೇರಲಿದ್ದಾರೆ. ಎಳೆಯರಿಗೆ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಮಾಡುವ ದೇವರಾಜ್, ಧ್ಯೇಯ, ಗುರಿ ಸ್ಫಸ್ಟವಿದ್ದರೆ ಸಾಧನೆ ಕಷ್ಟಸಾಧ್ಯವಲ್ಲ, ಆದರೆ ಅಂದುಕೊಂಡಿದ್ದನ್ನು ಸಾಧಿಸದಿದ್ದರೂ ಆತ್ಮವಿಶ್ವಾಸದಿಂದಿರುವುದೇ ಸಾಧಕನ ಶಕ್ತಿ.
ಆತ್ಮವಿಶ್ವಾಸ, ನಂಬಿಕೆ ಕಳೆದು ಹೋದರೆಪರೀಕ್ಷೆ, ಜೀವನದಲ್ಲಿ ಸೋಲಬೇಕಾಗುತ್ತದೆ. ಪರೀಕ್ಷೆಯಲ್ಲಿ ಸೋತರೂ ಜೀವನದಲ್ಲಿ ಗೆಲ್ಲಲು ಹಲವು ಮಾರ್ಗಗಳಿವೆ. ಹಾಗಾಗಿ ಶ್ರಮ,ಸಂಯಮ,ಪ್ರಯತ್ನ, ಸಾಧಿಸುವ ಛಲ ಕೆಳಗೆಬಿದ್ದರೂ ಮತ್ತೆ ಏಳುವ ವಿಶ್ವಾಸವಿದ್ದರೆ ಸಾಧನೆ ಕಷ್ಟವಲ್ಲ ಎನ್ನುವ ಅವರ ಮಾತು ಎಳೆಯರಿಗೆ ಸ್ಫೂರ್ತಿ ಮತ್ತು ಮಾರ್ಗದರ್ಶಿ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *