ಸಚಿವ ಮಾಧುಸ್ವಾಮಿ ಬ್ರಷ್ಟರನ್ನು ಮನೆಗೆ ಕಳುಹಿಸುವರೆ?ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು

ಸಚಿವರ ಎದುರು ಬೆತ್ತಲಾದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು
ಉತ್ತರಕನ್ನಡ ಜಿಲ್ಲೆಗೆ ಪ್ರಗತಿಪರಿಶೀಲನೆಗೆ ಬಂದಿದ್ದ ನೀರಾವರಿ ಸಚಿವ ಕೆ.ಮಾಧುಸ್ವಾಮಿ ಎದುರೇ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಲು ತಡವರಿಸಿ,ಉಗಿಸಿಕೊಂಡ ಘಟನೆ ಇಂದು ಕಾರವಾರದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಭೇಟಿ,ಪ್ರಗತಿಪರಿಶೀಲನೆಗೆ ಬಂದ ಸಚಿವ ಮಾಧುಸ್ವಾಮಿ ಸಣ್ಣ ನೀರಾವರಿ ಇಲಾಖೆಯ ಮಾಹಿತಿ ಕೇಳುವ ಪ್ರಗತಿಪರಿಶೀಲನೆಯ ಸಂದರ್ಭದಲ್ಲಿ ಮುಂಡಗೋಡಿನ ಒಬ್ಬ ಇಂಜಿನಿಯರ್ ಸೇರಿದಂತೆ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡಲು ವಿಫಲರಾದರು.
ಈ ದುರ್ನಡತೆ,ಬೇಜವಾಬ್ಧಾರಿಗೆ ತರಾಟೆಗೆ ತೆಗೆದುಕೊಂಡ ನೀರಾವರಿ ಸಚಿವ ಮಾಧುಸ್ವಾಮಿ ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇಬ್ಬರು ಅಧಿಕಾರಿಗಳನ್ನು ಮನೆಗೆ ಕಳುಹಿಸಿದ್ದೇನೆ ನಿಮಗೂ ಅದೇ ಗತಿಯಾಗಲಿದೆ ಎಂದು ಎಚ್ಚರಿಸಿದರು.
ಸಚಿವ ಮಾಧುಸ್ವಾಮಿ ಬ್ರಷ್ಟರನ್ನು ಮನೆಗೆ ಕಳುಹಿಸುವರೆ?
ಉತ್ತರಕನ್ನಡ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಶಿರಸಿ-ಹಳಿಯಾಳಗಳ ನಡುವೆ ಸಂಗೀತ ಕುರ್ಚಿ ಸ್ಫರ್ಧೆಯಂತಾಗಿ ಒಮ್ಮೆ ಶಿರಸಿಗೆ ಸ್ಥಳಾಂತರವಾಗಿ ಮತ್ತೆ ಹಳಿಯಾಳದಲ್ಲಿ ನೆಲೆ ನಿಂತಿರುವುದು ಜಿಲ್ಲೆಯ ವಿಪರ್ಯಾಸ.
ಹೀಗೆ ಜಿಲ್ಲಾ ಕೇಂದ್ರ ಕಾರವಾರದಲ್ಲೂ ಇಲ್ಲ, ಜಿಲ್ಲೆಯ ಕೇಂದ್ರ ಸ್ಥಳ ಶಿರಸಿಯಲ್ಲೂ ಇರದೆ ಸಣ್ಣ ನೀರಾವರಿ ಇಲಾಖೆ ಹಳಿಯಾಳದಲ್ಲಿರುವುದು ಯಾರ ಹಿತಕ್ಕೆ, ಯಾರ ಅನುಕೂಲಕ್ಕೆ ಎನ್ನುವ ಪ್ರಶ್ನೆ ಏಳುವಂತಾಗಿದೆ.
ಸಣ್ಣ ನೀರಾವರಿ ಇಲಾಖೆ ಉತ್ತರಕನ್ನಡ ಜಿಲ್ಲೆಯಲ್ಲಿ ನೂರಾರು ಕೋಟಿ ಕಾಮಗಾರಿ ನಡೆಸಿದೆ. ಅದರಲ್ಲಿ 10 ಕೋಟಿಗಳಿಗೂ ಅಧಿಕ ವಾರ್ಷಿಕ ವೆಚ್ಚದ ಸಿದ್ದಾಪುರದ
ಸಣ್ಣ ನೀರಾವರಿ ಇಲಾಖೆಯ ಯಾವ ಕಾಮಗಾರಿಗಳೂ ಗುಣಮಟ್ಟಕಾಯ್ದುಕೊಂಡಿಲ್ಲ.
ಜನರಿಗೆ ತಿಳಿಸದೆ ಕೆಲವೇ ಜನಪ್ರತಿನಿಧಿಗಳ ಒಪ್ಪಿಗೆ ಮೇರೆಗೆ ನಿರ್ವಹಿಸಿದ ನೂರಾರು ಕೋಟಿ ವೆಚ್ಚದ ಕೆಲವು ಕಾಮಗಾರಿಗಳು ಕಳಪೆ,ಅವೈಜ್ಞಾನಿಕ ಮತ್ತು ನಿರುಪಯುಕ್ತ ಕೆಲಸಗಳಾಗಿವೆ.
ಇದು ಬುದ್ಧಿವಂತ ಜನರು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮಾಜಿ ಕೇಂದ್ರ ಸಚಿವ,ಸಂಸದ ಅನಂತಕುಮಾರ ಹೆಗಡೆಗಳ ಕ್ಷೇತ್ರ. ಈ ಕ್ಷೇತ್ರದಲ್ಲೇ ನೂರಾರು ಕೋಟಿ ಮಂಗಮಾಯ ಮಾಡಿರುವ ಅಧಿಕಾರಿಗಳು ಉಳಿದ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡುವ ಕನಿಷ್ಟ ಸಾಧ್ಯತೆಗಳೂ ಇಲ್ಲ. ಹಳಿಯಾಳದಿಂದ ಭಟ್ಕಳದ ವರೆಗೆ ಕಾರವಾರದಿಂದ ಸಿದ್ದಾಪುರ, ಮುಂಡಗೋಡುಗಳ ವರೆಗೆ ಕೆಲವೇ ಜನಪ್ರತಿನಿಧಿಗಳು ಮತ್ತು ಪ್ರಮುಖ ಮುಖಂಡರ ಆಪ್ತರು ಸೇರಿ ನೂರಾರು ಕೋಟಿ ಅನುದಾನ ಹಾಳುಮಾಡಿ ದುಂಡಗಾಗಿದ್ದಾರೆ.
ಶಿರಸಿ,ಯಲ್ಲಾಪುರ ಕ್ಷೇತ್ರಗಳಲ್ಲಂತೂ ಹಳೆಯ ನೂರಾರು ಕೋಟಿ ಅನುದಾನ ವೆಚ್ಚದ ಕಾಮಗಾರಿಗಳಿಗೇ ಮತ್ತೆ ಕೋಟ್ಯಂತರ ಹಣ ನೀಡಿ ಹಗಲುದರೋಡೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳನ್ನು ಬಳಸಿಕೊಂಡು ಪ್ರಭಾವಿಗಳು ನುಂಗಿದ ಅನುದಾನದ ಮೊತ್ತ ನೂರಾರು ಕೋಟಿ ಸಾರ್ವಜನಿಕರ ತೆರಿಗೆ ಹಣ. ಈ ಹಣ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಅಮಾನತ್ತು ಮಾಡಿಸಿ, ಲೋಕಾಯುಕ್ತರೋ,ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ವಿಶೇಷ ಸಮೀತಿಯಿಂದ ತನಿಖೆಗೆ ಒಳಪಡಿಸಿದರೆ ಕೆಲವು ಗೋಮುಖವ್ಯಾಘ್ರಗಳ ಮುಖವಾಡ ಕಳಚುವುದರಲ್ಲಿ ಸಂಶಯಗಳಿಲ್ಲ.
ಸಚಿವ ಮಾಧುಸ್ವಾಮಿ ಸಭೆಯಲ್ಲಿ ಅಧಿಕಾರಿಗಳನ್ನು ತೆಗಳಿ, ನಿಂದಿಸಿ ತೆರಳಿದರೆ ಸಮಸ್ಯೆ ಮತ್ತಷ್ಟು ಉಲ್ಬಣಿಸುವುದೇ ಹೊರತು,ವಾಸ್ತವ, ಸತ್ಯ ದರ್ಶನವಾಗುವುದಿಲ್ಲ. ಉತ್ತರಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಮತ್ತು ಹಿಂದಿನ ಜಲಾನಯನ ಇಲಾಖೆಗಳ ಕಾಮಗಾರಿಗಳ ನೆಪದಲ್ಲಿ ಆಗಿರುವ ಸಾವಿರಾರು ಕೋಟಿ ಕಳಪೆ ಕಾಮಗಾರಿ ಹಗರಣದ ಹಿಂದಿರುವ ತಿಮಿಂಗಿಲಗಳನ್ನು ಹಿಡಿದು ನ್ಯಾಯ ಒದಗಿಸುವ ಕೆಲಸ ಮಾಧುಸ್ವಾಮಿ ಅಥವಾ ಈಗಿನ ಅನರ್ಹ ಸರ್ಕಾರದಿಂದ ಆಗುವುದೆ? ಎನ್ನುವುದೆ ಯಕ್ಷ ಪ್ರಶ್ನೆ. ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ
ನಾಳೆಡಿ.26 ರ ಗ್ರಹಣದ ಬಗ್ಗೆ ಎಲ್ಲೆಲ್ಲೂ ಚರ್ಚೆ ನಡೆಯುತ್ತಿದೆ.
ಶಿರಸಿಯಲ್ಲಿ ಬಸ್ ನಿಲ್ಧಾಣದ ಬಳಿ ಚಿಂತನ ಉತ್ತರಕನ್ನಡ ಸೂರ್ಯಗ್ರಹಣ ವೀಕ್ಷಣೆಗೆ ಸುರಕ್ಷಿತ ಸಾಧನಗಳ ವ್ಯವಸ್ಥೆ ಮಾಡಿದ್ದು ಆಸಕ್ತರು 8.45 ರ ನಂತರ ಈ ಅನುಕೂಲ ಬಳಸಿಕೊಳ್ಳಬಹುದಾಗಿದೆ.
ಶಾಲೆಗಳಲ್ಲೂ ವ್ಯವಸ್ಥೆ-
ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಶಿಸಲಾಗಿಲ್ಲ. ಆಯಾ ಶಾಲೆ-ಕಾಲೇಜುಗಳಲ್ಲಿ ಸುರಕ್ಷಿತ ಸಾಧನಗಳನ್ನು ಬಳಸಿ ಸೂರ್ಯಗ್ರಹಣ ವೀಕ್ಷಣೆಗೆ ಅನುಕೂಲಮಾಡಿಕೊಡಲು ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ಕೇಂದ್ರಕ್ಕೆ ಹೊರಟಿದ್ದ ರಾಜ ರಾಜ್ಯದ ರಾಜನಾದ ಕತೆ
ಇದು ರೈತನಮಗ ದೇವರಾಜ್‍ಸಾಹಸಗಾಥೆ
ಕಳೆದ ಒಂದು ವರ್ಷದಿಂದೀಚೆಗೆ ತಾಲೂಕಾ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆ ಸಲ್ಲಿಸುತಿದ್ದ ದೇವರಾಜ್ ಈಗ ಕೆ.ಪಿ.ಎಸ್.ಸಿ. ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಸಹಾಯಕ ಕಮೀಷನರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.
ದೇವರಾಜ್ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಮನೂರು ಹಾಲಗಳಲೆ ರೈತ ಕುಟುಂಬದ ಕುಡಿ. ಭಾರತೀಯ ಆಡಳಿತ ಸೇವೆ ಪರೀಕ್ಷೆ ತೇರ್ಗಡೆಯಾಗಿದ್ದ ದೇವರಾಜ್ 2 ವರ್ಷಗಳ ಕೆಳಗೆ ಅಂತಿಮ ಆಯ್ಕೆಯಲ್ಲಿ ಸ್ಫಲ್ಪ ಅಂಕಗಳ ಅಂತರದಿಂದ ಆಯ್.ಎ.ಎಸ್. ನಿಂದ ವಂಚಿತರಾಗಿದ್ದರು. ನಂತರ ಕೃಷಿ ಸಹಾಯಕ ನಿರ್ಧೇಶಕರಾಗಿ ಸೇವೆಗೆ ಸೇರಿದ್ದ ಅವರು ಭಾರತೀಯ ಆಡಳಿತ ಸೇವೆ ಮತ್ತು ಕರ್ನಾಟಕ ಆಡಳಿತ ಸೇವೆಯ ಪರೀಕ್ಷೆಗಳನ್ನು ಎದುರಿಸುತಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *