ಬಹಿರಂಗವಾಗುತ್ತಿರುವ ಸಿದ್ದಾಪುರದ ಸುಪ್ತ ವ್ಯವಹಾರಗಳು, ಸಮಾಜಮುಖಿಯ ಅನುಮಾನ, ಆತಂಕ ಸತ್ಯ ಮಾಡುತ್ತಿರುವ ಪೊಲೀಸರು

ಈ ತಿಂಗಳ ಪ್ರಾರಂಭದಿಂದ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೋರ್ಟಲ್ ಗಳಲ್ಲಿ ಸಿದ್ಧಾಪುರ ಮತ್ತು ಉತ್ತರಕನ್ನಡ ಜಿಲ್ಲೆಯ ಅಕ್ರಮ ವ್ಯವಹಾರಗಳ ಸರಣಿ ವರದಿಗಳು ಪ್ರಕಟವಾಗುತಿದ್ದಂತೆ ಎಚ್ಚೆತ್ತ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸಿದ್ಧಾಪುರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇದೇ ತಿಂಗಳು ಕನಿಷ್ಟ 25-30 ಜನರನ್ನು ಬಂಧಿಸಿದ್ದಾರೆ.
ಹೀಗೆ ಬಂಧಿತರಾದವರಲ್ಲಿ ಹೆಚ್ಚಿನವರು ಇಸ್ಫೀಟ್, ಜುಗಾರಿ, ಓ.ಸಿ. ಆಡುತಿದ್ದವರು, ಆಡಿಸುತಿದ್ದವರು ಎಂಬುದು ಗಮನಾರ್ಹ.
ಒಬ್ಬ ಕಾಲೇಜು ವಿದ್ಯಾರ್ಥಿ ಸರ್ಕಾರಿ ಕೃಪಾ ಪೋಷಿತ ಅಕ್ರಮ ದಂಧೆಗೆ ಬಲಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿ ಸಮಾಜಮುಖಿ ವರದಿ ಮಾಡಿದ್ದಾಗ ಹಗಲು ದೇಶಭಕ್ತರು ರಾತ್ರಿ ದರೋಡೆಕೋರರು, ಕಳ್ಳರು ಆಗುವ ರಾಷ್ಟ್ರೀಯವಾದಿಗಳ ದುಷ್ಟ ಪರಿವಾರದ ಮಂಗಗಳ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಗುಲಾಮಿತನದ ಕೆಸರು ಕಕ್ಕಿಕೊಂಡದ್ದಿದೆ.
ಆದರೆ ಈ ಲಾಭಬಡುಕ ಸೋಗಲಾಡಿ ಮತಾಂಧ ಹುಚ್ಚುಶ್ವಾನಗಳ ಹುಚ್ಚು ಅರಚುವಿಕೆಗೆ ಯಾರೂ ಕ್ಯಾರೆ ಎನ್ನಲಿಲ್ಲ. ಸುದೈವವೆಂದರೆ ಈ ಮತಾಂಧ ದುಷ್ಟ ಪರಿವಾರದ ವ್ಯಭಿಚಾರಿ ಧಾರ್ಮಿಕರ ಸೋಗಲಾಡಿತನದ ರಾಷ್ಟ್ರೀಯ ಸುಳ್ಳುಗಾರ ಶ್ವಾನಗಳ ಕುಂಡೆಗೆ ಒದೆಯುವಂತೆ ಉತ್ತರ ಕನ್ನಡ ಪೊಲೀಸರು ಇಂದು ಸಿದ್ಧಾಪುರದ ಐಗಳಕೊಪ್ಪದಲ್ಲಿ ನಾಗರಾಜ ಗುಡ್ಡೆಮನೆ ಎನ್ನುವ ಅಕ್ರಮ ವ್ಯವಹಾರಿಯೊಂದಿಗೆ 8 ಜನರನ್ನು ಬಂಧಿಸಿದ್ದಾರೆ.
ನಿನ್ನೆ ಹೇಳಿಕೊಳ್ಳದ ಆರೋಪಕ್ಕೆ ತುತ್ತಾದ 3 ವಿದ್ಯಾರ್ಥಿಗಳ ಬಂಧನವಾಗಿದೆ.
ಇಂದು ಬೆಂಗಳೂರಿನಲ್ಲಿ ಕಂಟ್ರಿ ಪಿಸ್ತೂಲ್ ಗಳೊಂದಿಗೆ ಪೊಲೀಸರಿಗೆ ಸೆರೆ ಸಿಕ್ಕ ವ್ಯಕ್ತಿ ಸಿದ್ಧಾಪುರದವನು ಎನ್ನುವುದು ಆತಂಕದ ವಿಚಾರ.
ಹೀಗೆ ಸಿದ್ದಾಪುರದಂಥ ಪುಟ್ಟ ನಗರದ ಜನ ತಾಲೂಕು, ಜಿಲ್ಲೆ ರಾಜ್ಯಮಟ್ಟದ ವರೆಗೆ ಅಪರಾಧ ಚಟುವಟಿಕೆಗಳಲ್ಲಿ ಬಂಧಿತರಾಗುತಿದ್ದಾರೆ ಎಂದರೆ ಇವರ ಹಿಂದೆ ಅನೇಕ ವ್ಯವಸ್ಥಿತ ಜಾಲಗಳು ಕೆಲಸಮಾಡುತ್ತಿವೆ ಎಂದರ್ಥ.
ಇಂಥ ವ್ಯವಸ್ಥೆಯನ್ನು ಪೋಶಿಸುವ ಮುಖವಾಡದ ಉದ್ದಿಮೆದಾರರ ಮನೆಗೆ ಭೇಟಿ ನೀಡುವ ಇಲ್ಲಿಯ ಶಾಸಕ, ಸಂಸದರೇ ಈ ಅಕ್ರಮವ್ಯವಹಾರಗಳ ರಕ್ಷಕರು ಎನ್ನುವ ಮಾತು ಸಿದ್ಧಾಪುರದ ನಿತ್ಯ ಚರ್ಚೆಯ ವಿಷಯವಾಗಿದೆ.
ಸಮಾಜಮುಖಿ ಸೇರಿದಂತೆ ಕೆಲವು ಮಾಧ್ಯಮಗಳು ಮಾತ್ರಎಕ್ಸ್‍ಪೋಸ್ ಮಾಡಿದ ಈ ವ್ಯವಹಾರಗಳ ಹಿಂದೆ ಸಿದ್ಧಾಪುರ ಉತ್ತರ ಕನ್ನಡ ಜಿಲ್ಲೆಯ ಜನರ ಹಿತಾಸಕ್ತಿ, ಶಾಂತಿ ಸುವ್ಯವಸ್ಥೆಯ ಕಾಳಜಿ ಇದೆ.
ನಮ್ಮೆಲ್ಲಾ ಅನುಮಾನ, ಸಂಶಯಗಳನ್ನು ಅಕ್ರಮವ್ಯವಹಾರಿಗಳನ್ನು ಬಂಧಿಸುವ ಮೂಲಕ ದಿಟಮಾಡುತ್ತಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸರಿಗೆ ಸಮಾಜಮುಖಿ ಕೃತಜ್ಞತೆ ಸಲ್ಲಿಸುತ್ತದೆ.
ಈ ಹಿನ್ನೆಲೆಯಲ್ಲಿ ಉತ್ತಮ ಸಿದ್ಧಾಪುರ ಉತ್ತಮ ಸಮಾಜಕ್ಕಾಗಿ ಕೆಲಸ ಮಾಡಿದ ತೃಪ್ತಿ ನಮಗಿದೆ. ಕನಿಷ್ಟ ರಾಜ್ಯದ ಶ್ರೇಷ್ಠ ಮನಸ್ಸುಗಳಾದರೂ ಇದನ್ನು ಗಮನಿಸುತ್ತಾರೆ ಎನ್ನುವ ನಂಬಿಕೆ ನಮಗಿದೆ. ಅಂದಹಾಗೆ ಸಿದ್ಧಾಪುರದ ಅಕ್ರಮ ಮದ್ಯಮಾರಾಟ, ಇಸ್ಪೀಟ್, ಜುಗಾರಿ, ಓ.ಸಿ. ಇನ್ನಿತರ ಅಕ್ರಮಗಳು ಇಷ್ಟಕ್ಕೆ ನಿಲ್ಲುತ್ತವೆ ಎನ್ನುವುದು ಕೇವಲ ನಮ್ಮ ಬೃಮೆಯಾಗಬಾರದಷ್ಟೇ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *