ನಿಲ್ಕುಂದದ ಭೀಮನಗುಡ್ಡ ಈಗ ನೋಡಬಹುದಾದಪ್ರೇಕ್ಷಣೀಯ ಸ್ಥಳ

ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ.
ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು.
ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ ಬರೋಬ್ಬರಿ 636 ಮೀಟರ್! ಸಿದ್ಧಾಪುರ ತಾಲೂಕು ಕೇಂದ್ರದಿಂದ 40 ಕಿ.ಮೀ, ಶಿರಸಿಯಿಂದ 30 ಕಿ.ಮೀ ದೂರದ ಈ ಪ್ರದೇಶದ ಇನ್ನೊಂದು ಮಗ್ಗುಲಿಗೆ ವಿಶ್ವವಿಖ್ಯಾತ ಉಂಚಳ್ಳಿ ಜಲಪಾತ ಸೇರಿದಂತೆ 3-4 ಜಲಪಾತಗಳಿವೆ.
ಈ ಜಲಪಾತಗಳೆಲ್ಲಾ ಮಳೆಯಲ್ಲಿ ಉಕ್ಕಿ ಹರಿದು, ಬೇಸಿಗೆಯಲ್ಲಿ ಸೊರಗಿ ಕುಮಟಾದ ಸಮುದ್ರ ಸೇರುವ ಅಘನಾಶಿನಿ ಕಣಿವೆ ಪ್ರದೇಶ ಇದೆ ನೋಡಿ, ಆ ರುದ್ರರಮಣೀಯ ಕಣಿವೆಯ ಚಂದ ಕಾಣಬೇಕೆಂದರೆ ನೀವು ನಿಲ್ಕುಂದದಿಂದ 2 ಕಿ.ಮೀ ದೂರದ ಭೀಮಣಗುಡ್ಡ ಏರಬೇಕು. ಪರಿಸರ, ವನ್ಯಜೀವಿ ಸಂರಕ್ಷಿತ ಪ್ರದೇಶವಿರುವುದರಿಂದ ಮುಂಚಿತ ಪರವಾನಗಿ ಪಡೆದು ಹೋದರೆ ಉತ್ತಮ. ಅರಣ್ಯ ಇಲಾಖೆ, ಸ್ಥಳಿಯ ಆಡಳಿತಗಳ ಪರವಾನಗಿ ಇಲ್ಲದೆಯೂ ತೆರಳಬಹುದಾದ ಈ ಭೀಮನಗುಡ್ಡದ ತುತ್ತ ತುದಿ ತಲುಪಲು ಕನಿಷ್ಟ ಅರ್ಧ ಕೀ.ಮೀ. ಬೆಟ್ಟ ಹತ್ತಬೇಕು. ಬೆಟ್ಟದ ತುದಿಯಿಂದ ಬಹುದೂರ ಕಾಣುವ ಸೂರ್ಯಾಸ್ಥ ಇಲ್ಲಿಯ ವಿಶೇಷ. ಆದರೆ ದಿನವಿಡೀ ನಯನಾಜೂಕಿನಿಂದ ಬಳಕುತ್ತಾ ಸಾಗುವ ಅಘನಾಶಿನಿ ದಿನವಿಡೀ ಕಾಣುವ ಪ್ರಕೃತಿ. ಈ ಬೆಟ್ಟ ನೋಡಲು ಬರುವ ಪ್ರವಾಸಿಗರು ಮುಂಜಾನೆ, ಸಾಯಂಕಾಲದ ಸಮಯ ಇಲ್ಲಿ ಕಳೆಯಲು ಇಷ್ಟ ಪಡುತ್ತಾರೆ. ವಿಚಿತ್ರವೆಂದರೆ ದೇಶ, ವಿದೇಶ ಪರಊರುಗಳ ಜನರನ್ನು ಆಕರ್ಷಿಸುವ ಈ ಭೀಮನೆರೆ ಬೆಟ್ಟ ಸ್ಥಳಿಯರಿಗೆ ದೀಪದ ಬುಡದ ಕತ್ತಲೆ.
ಶಿರಸಿ, ಜಾನ್ಮನೆ ವಲಯದ ಸಿದ್ಧಾಪುರ ತಾಲೂಕಿನ ಈ ಭೀಮನಗುಡ್ಡ ಚಾರಣಿಗರು, ಪ್ರಕೃತಿಪ್ರೀಯರು,ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣ. ಅನುಚಿತ ವರ್ತನೆ ಮಾಡುವ ಪ್ರವಾಸಿಗರನ್ನು ಹಿಡಿಯುವ ಅರಣ್ಯ ಇಲಾಖೆಯ ರಹಸ್ಯ ಕಾರ್ಯಚರಣೆ ಈ ಪ್ರೇಕ್ಷಣೀಯ ಸ್ಥಳದ ಸೌಂದರ್ಯ, ಶಾಂತಿ ಕಾಪಾಡಿದೆ. ಅತಿವಿರಳವಾಗಿ ಈ ಭಾಗದಲ್ಲಿ ಕಂಡು ಬರುವ ಚಿರತೆ, ಕಾಡೆಮ್ಮೆ, ಜಿಂಕೆಗಳೂ ಅವುಗಳಿಗೆ ತೊಂದರೆಯಾಗದಿದ್ದರೆ ನಿಮ್ಮನ್ನೇನೂ ಮಾಡಲಾರವು. ಕೊರೆಯುವ ಚಳಿಯಲ್ಲಿ ಮುಸ್ಸಂಜೆಯ ಸೂರ್ಯಾಸ್ಥ ತಪ್ಪಿಸಿಕೊಂಡರೆ ಅವರಿಗೇ ಹಾನಿ.

ಮನೆಮನೆಯಲ್ಲಿ ರವಿ ಚೆನ್ನಣ್ಣನವರ್ ಅಭಿಮಾನಿ ಬಳಗ ಪ್ರಾರಂಭಿಸಿ ಹೊಸವರ್ಷ ಸ್ವಾಗತಿಸಿದ ಯುವಕರು
ಸಿದ್ಧಾಪುರ,ತಾಲೂಕಿನ ಮನ್ಮನೆಯ ಯುವಕರು ಎಲ್ಲಾ ಯುವಕರು,ಯುವ ಸಂಘಟನೆಗಳಂತೆ ವರ್ಷದ ಕೊನೆಯ ದಿನ ಮೋಜು ಮಜಾ ಮಾಡುವ ಬದಲು ಶಿಸ್ತು, ಪ್ರಾಮಾಣಿಕತೆ, ಕ್ರೀಯಾಶೀಲತೆಗೆ ಹೆಸರಾದ ಪೊಲೀಸ್ ವರಿಷ್ಠ ರವಿ ಡಿ ಚೆನ್ನಣ್ಣನವರ್ ರ ಅಭಿಮಾನಿ ಬಳಗ ಸ್ಥಾಪಿಸುವ ಮೂಲಕ ಮಾದರಿ ಕೆಲಸದ ಮೂಲಕ 2020 ರ ಹೊಸವರ್ಷ ಪ್ರಾರಂಭಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *