ಗೃಹ ಉದ್ಯಮದಲ್ಲಿ ಯಶಸ್ಸು ಕಾಣುತ್ತಿರುವ ಶಿವಕುಮಾರ

ಹೆಸರು-ಶಿವಕುಮಾರ ಗೋವಿಂದ
ವಯಸ್ಸು-25
ವೃತ್ತಿ-ಅಗರಬತ್ತಿ ತಯಾರಿಕೆ.
ಹೀಗೆ ಪರಿಚಯಿಸಬಹುದಾದ ಯುವಕ ಶಿವಕುಮಾರ ಗೋವಿಂದ ನಾಯ್ಕ ಕಡಕೇರಿಯವರು.
ಈಗಿನ ಟ್ರೆಂಡ್‍ನಂತೆ ಮೂರು ವರ್ಷ ಡಿಪ್ಲೊಮಾ ಓದಿದ ಶಿವಕುಮಾರ ಮಹಾನಗರಕ್ಕೆ ಓಡಲು ಮುಂದಾಗಲಿಲ್ಲ. ಕೆಲವು ವರ್ಷ ಆಯ್.ಟಿ.ಆಯ್. ವಿದ್ಯಾರ್ಥಿಗಳಿಗೆ ಪಾಠ ಮಾಡಿದ. ನಂತರ ಸ್ವಂತ ಉದ್ದಿಮೆ ಶ್ರೇಷ್ಠ ಎಂದು ಬಗೆದು, ಅಗರಬತ್ತಿ ತಯಾರಿಸಲು ಪ್ರಾರಂಭಿಸಿದ. ಈಗ ತಿಂಗಳೊಂದಕ್ಕೆ ಕನಿಷ್ಠ ಮೂರು ಟನ್ ಊದುಬತ್ತಿ ತಯಾರಿಸುವ ಶಿವಕುಮಾರ ಮೂರ್ನಾಲ್ಕು ಜನ ಕೆಲಸಗಾರರಿಗೆ ವೇತನ ಕೊಟ್ಟು ದಿನಕ್ಕೆ ಸಾವಿರ ಮಿಕ್ಕಿ ಉಳಿಸುತ್ತಾರೆ.
ಇದು ಶಿವಕುಮಾರ ನಾಯ್ಕ ಗೃಹ ಉದ್ದಿಮೆ ಮೂಲಕ ಕಂಡುಕೊಂಡ ಉದ್ಯೋಗ ಮತ್ತು ಆತ್ಮವಿಶ್ವಾಸ.
ಅಗರಬತ್ತಿಗೆ ಬೇಕಾಗುವ ಎಲ್ಲಾ ಕಚ್ಚಾ ವಸ್ತುಗಳನ್ನು ಖರೀದಿಸಿ ತರುವ ಇವರಿಗೆ ಹೊರಗಿನಿಂದ ಪ್ರೀಮಿಕ್ಸ್ ಖರೀದಿಸಿ, ದೊಡ್ಡ ಕಂಪನಿಗಳಿಗೆ ಅಗರಬತ್ತಿ ಪೂರೈಸುವುದರಿಂದ ತೊಂದರೆ, ರಗಳೆ ಕಡಿಮೆ ಎನ್ನುವ ಸತ್ಯ ಕಂಡುಕೊಂಡಿದ್ದಾರೆ.
ಮನೆಮಂದಿಯೆಲ್ಲಾ ನಿರಂತರ ಮಾಡಬಹುದಾದ ಈ ಕೆಲಸ ಹೆಚ್ಚಿನ ಬಂಡವಾಳ ಬಯಸದ ಸ್ವತಂತ್ರ ವೃತ್ತಿ. ಸರ್ಕಾರ, ಕೈಗಾರಿಕಾ ಕೇಂದ್ರಗಳ ನೆರವು ದೊರೆತರೆ ಈ ಉದ್ಯಮವನ್ನು ವಿಸ್ತರಿಸಬಹುದು ಎನ್ನುವ ಶಿವಕುಮಾರ ಈಗಾಗಲೇ ಕೆಲವು ಪ್ರಯೋಗದಿಂದಲೂ ಯಶಸ್ಸು ಕಂಡಿದ್ದಾರೆ. ಜಾನುವಾರುಗಳ ಸೆಗಣಿಯಿಂದ ತಯಾರಿಸುವ ಅಗರಬತ್ತಿಗೆ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಠ ಒಂದರ ಬೇಡಿಕೆ ಪೂರೈಸಿ ಆತ್ಮವಿಶ್ವಾಸ ಗಳಿಸಿಕೊಂಡಿರುವ ಶಿವಕುಮಾರ ಸ್ಥಳಿಯ ಲಭ್ಯತೆ, ಬೇಡಿಕೆ ಹಿನ್ನೆಲೆಯಲ್ಲಿ ಸ್ಥಳಿಯ ಬ್ರಾಂಡ್ ಕೂಡಾ ತಯಾರಿಸಬಹುದು ಎನ್ನುತ್ತಾರೆ. ಹೊರ ಊರು, ದೊಡ್ಡ ಕಂಪನಿಗಳಲ್ಲಿ ಬೇರೆಯವರಿಗೆ ದುಡಿಯುವ ಬದಲು ನಮ್ಮೂರಲ್ಲಿ ನಮಗೆ ಸುಲಭದ ಉದ್ಯೋಗ, ಆದಾಯ ಸಿಕ್ಕರೆ ಒಳ್ಳೆಯದು ಎನ್ನುವ ಯೋಚನೆಯಿಂದ ಪ್ರಾರಂಭಿಸಿರುವ ಈ ಗೃಹ ಉದ್ಯಮ ಅವರ ಕನಸಿಗೆ ರೆಕ್ಕೆ ಹಚ್ಚಿದೆ.
ನಾಟಿವೈದ್ಯ ತಂದೆ ಗೋವಿಂದ ನಾಯ್ಕ, ಪ್ರೋತ್ಸಾಹಿಸುವ ತಾಯಿ, ಸಹೋದರಿಯರ ಹಾರೈಕೆ,ಪ್ರಯತ್ನದಿಂದ ನವ ಉದ್ಯಮಿಯಾಗಿ ಬೆಳೆಯುತ್ತಿರುವ ಕಡಕೇರಿಯ ಈ ಯುವಕ ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ಫೂರ್ತಿ ಮತ್ತು ಮಾದರಿ. ದಾಖಲೆ,ಬರೀ ವರದಿ, ಯೋಜನಾವರದಿಗಳಿಂದ ಸರ್ಕಾರದ ನೆರವು ಪಡೆಯುವ ಬುದ್ಧಿವಂತರ ನಡುವೆ.ಕೆಲಸ ಮಾಡುತ್ತಾ ದಾಖಲೆ ಇಡದೆ ದಾಖಲೆ ಮಾಡಬಹುದಾದ ಈ ಯುವಕನನ್ನು ಸರ್ಕಾರ, ಸ್ಥಳಿಯ ನಾಯಕತ್ವಗಳು ಗುರುತಿಸಿದರೆ ಇವರ ಉದ್ದಿಮೆಗೆ ಉತ್ತೇಜಿಸಿದಂತಾಗಬಹುದು.

ಮಹಿಳಾ ಶಿಕ್ಷಣದ ಮನ್ವಂತರೆ ಸಾವಿತ್ರಿಭಾಯಿ ಫುಲೆ
ನೈಗಾಂವ್ ಮಹಾರಾಷ್ಟ್ರದ ಒಂದು ಪುಟ್ಟ ಹಳ್ಳಿ. ಶಿಕ್ಷಕಿಯೊಬ್ಬರು ಕೈಚೀಲವೊಂದನ್ನು ಹೆಗಲಿಗೇರಿಸಿ ಮುನ್ನಡೆಯುತ್ತಿದ್ದರು. ‘ಇವಳೊಬ್ಬಳು ಗುರುವಂತೆ ಗುರು! ರೊಟ್ಟಿ ತಟ್ಟಕೊಂಡು ಮನೇಲಿ ಬಿದ್ದಿರೋದು ಬಿಟ್ಟು ಊರವರಿಗೆಲ್ಲಾ ಶಾಲೆ ಕಲಿಸ್ತಾಳಂತೆ’ ಎಂದು ಚುಚ್ಚು ನುಡಿಯುತ್ತಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *