ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ: ಪ್ರಸಾದ್

‘ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ. ಮನುಷ್ಯ ಮನಸ್ಸು ಮಾಡಿದರೆ ಪರಿಸರವನ್ನು ಉಳಿಸಿಕೊಳ್ಳುವುದು ಸಾಧ್ಯವಿದೆ. ಪರಿಸರದ ಕೆಲಸವನ್ನು ನಾವು ಪಕ್ಷಿಗಳಿಂದ ಕಲಿಯಬೇಕು. ಅವು ನಿರಂತರವಾಗಿ ಪ್ರತಿದಿನವೂ ಬೀಜಪ್ರಸಾರ ಮಾಡುವ ಮೂಲಕ ಕಾಡಿನ ಬೆಳವಣಿಗೆಗೆ ಸಹಾಯವಾಗುತ್ತದೆ. ನಾವು ಮನುಷ್ಯರು ವರ್ಷಕ್ಕೊಂದು ಸಲ ಪರಿಸರ ದಿನಾಚರಣೆ ಮಾಡಿ ಕೈತೊಳೆದುಕೊಳ್ಳುತ್ತೇವೆ. ಪಕ್ಷಿಗಳಿಗಿರುವ ಪರಿಸರ ಕಾಳಜಿಯನ್ನು ನಾವು ಮೈಗೂಡಿಸಿಕೊಳ್ಳಬೇಕು’ ಎಂದು ಪಕ್ಷಿವೀಕ್ಷಕ ಪ್ರಸಾದ್ ಹೇಳಿದರು.
ಅವರು ಇಂಡಿಯಾ ಫೌಂಡೇಷನ್ ಫಾರ್ ದಿ ಆಟ್ರ್ಸ ಸಂಸ್ಥೆಯ ಆಶ್ರಯದಲ್ಲಿ ತಾಲೂಕಿನ ಆನಗೋಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ‘ಮಕ್ಕಳಿಗಾಗಿ ಎರಡನೇ ಹಂತದ ಪಕ್ಷಿ ವೀಕ್ಷಣೆ ವಿಶೇಷ ತರಬೇತಿ ಕಾರ್ಯಕ್ರಮ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
‘ಚಿನ್ನದ ಸೂಜಿ ಅಂತ ಕಣ್ಣಿಗೆ ಚುಚ್ಚಿಕೊಂಡರೆ ನೋವಾಗುವುದು ನಮಗೇ. ಹಾಗಾಗಿ ಇದು ಸರಕಾರದ ಕೆಲಸ ಅಂತ ಕಾಯದೆ ಪ್ರತಿಯೊಬ್ಬರೂ ಪರಿಸರ ರಕ್ಷಣೆಯ ಕೆಲಸ ತಮ್ಮ ಕೈಲಾದ ಮಟ್ಟಿಗೆ ಮಾಡಬೇಕು’ ಎಂದು ಅವರು ಹೇಳಿದರು.
ದೈಹಿಕ ಶಿಕ್ಷಣ ತಾಲೂಕ ಅಧಿಕಾರಿ ರವೀಂದ್ರ ಕಾಪಸೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‘ಮಕ್ಕಳು ಪಕ್ಷಿವೀಕ್ಷಣೆಯ ಜೊತೆಗೆ ಅವುಗಳ ಬಗ್ಗೆ ಹೆಚ್ಚಿನ ಜ್ಞಾನವನ್ನು ಗೂಗಲ್ ಮೂಲಕ ಸಂಗ್ರಹಿಸಬಹುದು’ ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿ ಅಶ್ವಿನಿ ಭಟ್ಟ ಹಾಡಿದ ಸ್ವಾಗತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯಾಧ್ಯಾಪಕ ಸುಧಾಕರ ನಾಯಕ ಸ್ವಾಗತಿಸಿದರು. ಐಎಫ್‍ಏ ಗ್ರ್ಯಾಂಟಿ ಗಣೇಶ ಪಿ. ನಾಡೋರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಸುರೇಶ್ ಕುಮಾರ್(ಬರ್ಡ್ ಸುರೇಶ್), ಹರೀಶ್, ರಾಹುಲ್, ಶಿಕ್ಷಕಿಯರಾದ ಸವಿತಾ ಹೆಗಡೆ, ಪ್ರತಿಭಾ ನಾಯ್ಕ ಉಪಸ್ಥಿತರಿದ್ದರು. ಶಿಕ್ಷಕಿ ಕುಸುಮಾ ನಾಯಕ ವಂದಿಸಿದರು.
ಅದಕ್ಕೂ ಮೊದಲು ಸಂಪನ್ನೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಶಾಲೆಯ ಆಯ್ದ 25 ಮಕ್ಕಳನ್ನು ಕಾಡಿಗೆ ಕರೆದೊಯ್ದು ಪಕ್ಷಿವೀಕ್ಷಣೆಯ ಪಟ್ಟುಗಳನ್ನು ಹೇಳಿಕೊಡಲಾಯಿತು. ಸುರೇಶ್ ಕುಮಾರ್ ಸುಮಾರು 175 ಹಕ್ಕಿಗಳ ಮಾಹಿತಿಯಿರುವ ಬೋಷರ್‍ಗಳನ್ನು ಮಕ್ಕಳಿಗೆ ಉಚಿತವಾಗಿ ಹಂಚಿ, ಪಕ್ಷಿವೀಕ್ಷಣೆಯಲ್ಲಿ ದುರ್ಬೀನು ಬಳಕೆಯ ಕುರಿತು ಮಾಹಿತಿ ನೀಡಿದರು. ಕಾಡಿನಲ್ಲಿ ಪಕ್ಷಿಗಳ ಚಲನವಲನ, ಪಕ್ಷಿಗಳಿಗೂ ಮರಗಳಿಗೂ ಇರುವ ಸಂಬಂಧ, ಪ್ಲಾಸ್ಟಿಕ್‍ನಿಂದಾಗುವ ಹಾನಿ, ಪಕ್ಷಿಗಳು ಹಾಗೂ ಮಾನವನ ಕೃಷಿ ಚಟುವಟಿಕೆಗಳಿಗಿರುವ ಸಂಬಂಧ ಮುಂತಾದ ವಿಷಯವಾಗಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *