ಅಪರಾಧ ನಿಯಂತ್ರಿಸಿ,ಶಾಂತಿ-ಸುವ್ಯವಸ್ಥೆಗೆ ಶ್ರಮಿಸಲು ಪೊಲೀಸರ ಭರವಸೆ


ವಿದೇಶಿ ವಿದ್ರೋಹಕ ಶಕ್ತಿಗಳು ನಮ್ಮ ಯುವಕರು,ಯುವತಿಯರನ್ನು ದಿಕ್ಕುತಪ್ಪಿಸುವ ಹುನ್ನಾರದಲ್ಲಿ ತೊಡಗಿದ್ದು,ಮಾದಕ ವಸ್ತುಗಳು,ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಈ ಪರೋಕ್ಷ ದಾಳಿಯನ್ನು ತಡೆಯಲುಪಾಲಕರು, ಹಿರಿಯರು ಜಾಗೃತರಾಗುವ ಅವಶ್ಯಕತೆಯಿದೆ ಎಂದು ಶಿರಸಿ ಪೊಲೀಸ್ ಉಪ ವರಿಷ್ಠಾಧಿಕಾರಿ ಗೋಪಾಲಕೃಷ್ಣ ನಾಯಕ ಹೇಳಿದ್ದಾರೆ.
ಸಿದ್ಧಾಪುರದ ಲಯನ್ಸ್ ಬಾಲಭವನದಲ್ಲಿ ನಡೆದ ಪೊಲೀಸ್ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶಿರಸಿ ಉಪವಿಭಾಗ ಸೇರಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ನೆರೆಯ ರಾಜ್ಯಗಳು, ದೇಶಗಳ ಕುಟಿಲ ಯತ್ನಗಳಿಂದ ಡಗ್ಸ್, ಗಾಂಜಾ ಸೇರಿದ ಮಾದಕ ವಸ್ತುಗಳ ಮಾರಾಟಜಾಲ ಕಾರ್ಯನಿರ್ವಹಿಸುತಿದ್ದು ಸಾರ್ವಜನಿಕರು, ಎಳೆಯ ಮಕ್ಕಳ ಪಾಲಕರು ಈ ಬಗ್ಗೆ ಗಮನ ಹರಿಸದಿದ್ದರೆ ಅಪಾಯವಿದೆ ಎಂದು ವಿವರಿಸಿದರು.
ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಉತ್ತಮ ಸಂಬಂಧವಿರಬೇಕೆಂಬ ಆಶಯದಿಂದ ಇಂಥ ಸಭೆ ನಡೆಸುತಿದ್ದೇವೆ. 2017 ರಿಂದ ಸಿದ್ಧಾಪುರದಲ್ಲಿ ಅಪಘಾತ, ಸಾವು, ಅಪರಾಧ ಪ್ರಕರಣಗಳ ಪತ್ತೆ ಹೆಚ್ಚುತಿದ್ದು ಸಾರ್ವಜನಿಕರ ಸಹಕಾರದಿಂದ ಇಲ್ಲಿ ಕಾನೂನುಬಾಹೀರ ಚಟುವಟಿಕೆಗಳನ್ನು ನಿಯಂತ್ರಿಸುವ ಭರವಸೆ ನೀಡಿದರು.
ಸಭೆಯಲ್ಲಿ ಸೇರಿದ ಸಾರ್ವಜನಿಕರು ತಾಲೂಕಿನ ಅಕ್ರಮಮದ್ಯ ಮಾರಾಟ,ಇಸ್ಪೀಟ್,ಓ.ಸಿ. ವ್ಯವಹಾರಗಳ ಬಗ್ಗೆ ಆಕ್ಷೇಪಿಸಿ ನಿಯಂತ್ರಣಕ್ಕೆ ಕೋರಿದರು. ಅಪರಿಚಿತರ ಬಗ್ಗೆ ನಿಗಾ ಇಡುವುದು, ವಾಹನಗಳ ನಿಲುಗಡೆಗೆ ಸ್ಥಳ ನಿಗದಿಪಡಿಸುವುದು,ಅಪರಾಧಪ್ರಕರಣಗಳ ನಿಯಂತ್ರಿಸುವುದು ಸೇರಿದಂತೆ ತಾಲೂಕಿನ ಶಾಂತಿ-ಸುವ್ಯವಸ್ಥೆ ಕಾಪಾಡಿ, ಜನಜೀವನಕ್ಕೆ ಅನುಕೂಲಮಾಡಲು ಶ್ರಮಿಸುವುದಾಗಿ ತಿಳಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *