ಸಂಪಾದಕರ ಅನುಭವ ಕಥನ ಸ್ಮೃತಿಯಾಗಿ ಹರಿದಾಗ……..

ಊರು,ಸಂಬಂಧ,ಜಾತಿ,ಧರ್ಮ ನಿರುಪಯುಕ್ತ ಎನ್ನುವ ಅನುಭವವಾಗಿ, ಅವಮಾನ,ಅಪಮಾನವಾದಾಗಲೆಲ್ಲಾ ಛಲ ಜಾಗೃತವಾಗುತಿತ್ತು. ಸೋಲುವ, ಕಳೆದುಕೊಳ್ಳುವ ಭಯಗಳಿಂದ ಶ್ರಮದಿಂದ ಸಾಧಿಸುವುದು ರೂಢಿಯಾಯಿತು ಎಂದು ತಮ್ಮ ಗೆಲುವಿನ ಗುಟ್ಟನ್ನು ಹೇಳಿದವರು ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ.
ಸಿದ್ಧಾಪುರದ ಶಂಕರಮಠದಲ್ಲಿ ನಡೆದ ಗಣೇಶ್ ಹೆಗಡೆ ಸ್ಮೃತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ನಾನು ಶಾಲಾ-ಕಾಲೇಜುಗಳಲ್ಲಿ 35-36 ಪ್ರತಿಶತಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುತ್ತಿರಲಿಲ್ಲ. ನನ್ನ ಓರಗೆಯವರೆಲ್ಲಾ ಅಧಿಕಾರಿಗಳಾಗಿ ಅವರ ಸ್ವಂತ ವಾಹನಗಳಲ್ಲಿ ಠೀವಿಯಿಂದ ಊರಿಗೆ ಬರುತಿದ್ದಾಗ ಬಡ ಮಾಸ್ತರರ ದಡ್ಡಮಗನಾಗಿ ನಾನು ಒಳಗೊಳಗೆ ಕುಸಿಯುತಿದ್ದೆ.
ಊರು, ನೆರೆಹೊರೆಯವರು, ಓರಿಗೆಯವರು ಎಲ್ಲರ ಎದುರು ಸಣ್ಣವನಾಗಿ ಬದುಕುವುದು ಕಷ್ಟವಾಗಿ ಊರು ಬಿಟ್ಟೆ. ಅಲ್ಲಿಂದ ಮಾವಿನಗುಂಡಿ, ಲಿಂಗನಮಕ್ಕಿ ನಿರ್ಮಾಣ ಕೆಲಸಗಾರನಾಗಿ, ಡಿಸೇಲ್ ತುಂಬುವ ಹುಡುಗನಾಗಿ ಕೆಲಸ ಪ್ರಾರಂಭಿಸಿದೆ. ಅಲ್ಲಿಂದ ಕಾರವಾರಕ್ಕೆ ಪತ್ರಿಕೆ ಹಂಚುವ ಹುಡುಗನಾಗಿ ಹೋದೆ. ಸಿನೆಮಾ ಮಂದಿರ,ಪತ್ರಿಕೆ, ಫೊಟೊಗ್ರಾಫಿ ಹೀಗೆ ದುಡಿಯುತ್ತಾ ಬಾಡಿಗೆ ರೂಮಿನ ಸೆಕೆ,ಸೊಳ್ಳೆಗೆ ಹೆದರಿ ಸಮುದ್ರದ ದಂಡೆಯಲ್ಲಿ ಮಲಗುತ್ತಾ ರಾತ್ರಿ ಕಳೆದೆ.
ಮುಂಗಾರು ಪತ್ರಿಕೆಯಲ್ಲಿ ಸೋಮಾರಿಯೆಂದು ಟೀಕಿಸಿಕೊಂಡೆ ನಂತರ ಅದೇ ಪತ್ರಿಕೆಯ ರಾಜ್ಯದ ಉತ್ತಮ ವರದಿಗಾರ ಪುರಸ್ಕಾರ ಪಡೆದೆ. ನಂತರ ಅಧಿಕಾರಿಯೊಬ್ಬರ ನೆರವು, ವಸಂತ ಅಸ್ನೋಟಿಕರರ ಸಹಕಾರದಿಂದ ಪತ್ರಿಕೆ, ಬದುಕು ಪ್ರಾರಂಭಿಸಿ ಒಂದೊಂದೇ ಮೆಟ್ಟಿಲೇರುತ್ತಾ ಇಂಥ ಪ್ರಶಸ್ತಿ ಸ್ವೀಕರಿಸುವಂತಾದೆ.
ಹೀಗೆ ತಮ್ಮ ಅನುಭವ ಹೇಳುತ್ತಾ ಹೋದಂತೆ ಅವರ ಪಕ್ಕದಲ್ಲಿ ಕೂತಿದ್ದ ಮಾಧ್ಯಮ ದಿಗ್ಗಜರು ದಿಗ್ಭ್ರಮೆಗೊಳಗಾದಂತೆ ಕಂಡುಬಂದರು.
ಈ ಸಂದರ್ಭದಲ್ಲಿದ್ದವರು ಕನ್ನಡಪ್ರಭ ಮತ್ತು ಸುವರ್ಣನ್ಯೂಸ್ ಸಂಪಾದಕ ರವಿ ಹೆಗಡೆ, ಹಿರಿಯ ಪತ್ರಕರ್ತ ಭಾಸ್ಕರರಾವ್ ಮತ್ತು ಔಟ್‍ಲುಕ್ ನ ಕೃಷ್ಣಪ್ರಸಾದ.
ರವಿ ಹೆಗಡೆ ಮಾತನಾಡುತ್ತಾ ಸಿದ್ಧಾಪುರ ಕಳೆದ 30-40 ವರ್ಷಗಳ ಹಿಂದೆ ಹೇಗಿತ್ತೋ ಈಗಲೂ ಹೀಗೇ ಇದೆ. ಇದನ್ನು ಸಹಜ ಎನ್ನೋಣವೋ? ಅಭಿವೃದ್ಧಿಯಾಗಿಲ್ಲ ಎಂದು ವಿಶಾದಿಸುವುದೋ. ದೇಶದ ಸಂತಸ ಸೂಚ್ಯಂಕದ ಆಧಾರದಲ್ಲಿ ಪರಿಗಣಿಸುವುದಾದರೆ ಹೀಗಿರುವುದೇ ಒಳ್ಳೆಯದು, ಅಭಿವೃದ್ಧಿ-ಜಿ.ಡಿ.ಪಿ. ಎನ್ನುವುದಾದರೆ ಇದು ದುರಂತ ಇಂಥ ಕಾಡುವ ಅಂಶಗಳೇ ನನ್ನನ್ನು ಇಲ್ಲಿಗೆ ಕರೆತಂದದ್ದು ಎಂದರು.
ಹಿರಿಯ ಪತ್ರಕರ್ತ ಭಾಸ್ಕರರಾವ್ ಮಾತನಾಡಿ ಏಕಚಿತ್ತ, ಏಕವ್ಯಕ್ತಿಯಾಗಿ, ಏಕಲವ್ಯ ಸಾಧನೆ ಮೂಲಕ ಗಣೇಶ್‍ಹೆಗಡೆ ಸ್ಮೃತಿ ಪುರಸ್ಕಾರ ಪಡೆದ ಗಂಗಾಧರ ಹಿರೇಗುತ್ತಿ ದಿಕ್ಕುತಪ್ಪುತ್ತಿರುವ ಸಮಾಜವನ್ನು ನಿರ್ಧೇಶಿಸುವ ಕೆಲಸಮಾಡುತಿದ್ದಾರೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಮಾಧ್ಯಮ ಅಂದು-ಇಂದು ವಿಷಯದ ಮೇಲೆ ಅದ್ಭುತ ಉಪನ್ಯಾಸ ನೀಡಿದ ಕೃಷ್ಣಪ್ರಸಾದ ಲಾಭ-ಅನುಕೂಲಕ್ಕಾಗಿ ಜನರನ್ನು ವಿಭಜಿಸುವ, ಉಳ್ಳವರ, ಅಧಿಕಾರಸ್ಥರ ಪರವಹಿಸುವ, ಜನರನ್ನು ವಿಭಜಿಸುವ ಕೋಮುವಾದಿ ಕಾರ್ಯಾಚರಣೆಯ ಮಾಧ್ಯಮಗಳು ಇಂದು ದೇಶದ ಗಂಡಾಂತರಕಾರಿ ದುಸ್ಥಿತಿಗೆ ಕಾರಣ. ಈ ಮಾಧ್ಯಮಗಳನ್ನು ತಿದ್ದುವ, ಸರಿಪಡಿಸುವ ಶಕ್ತಿ ಜನಸಮೂಹಕ್ಕಿದೆ,ಓದುವ ವರ್ಗಕ್ಕಿದೆ ಎಂದರು.
ಮಾಧ್ಯಮಗಳು ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅನಾರೋಗ್ಯಕರ ವಿಷಯಗಳನ್ನು ವಿಜೃಂಬಿಸುತ್ತಿರುವುದು ಅಪಾಯಕಾರಿ ವಿದ್ಯಮಾನ ಎಂದು ಎಚ್ಚರಿಸಿದರು.
ವಿಜಯ ಹೆಗಡೆ ದೊಡ್ಮನೆ ಪ್ರಾಸ್ತಾವಿಕವಾಗಿ ಮಾತನಾಡಿ ಆರ್.ಪಿ.ಹೆಗಡೆ, ಮತ್ತು ಗಣೇಶ್ ಹೆಗಡೆ ದೊಡ್ಮನೆಯವರನ್ನು ಸ್ಮರಿಸಿದರು. ಸಾಹಿತಿ ಗಂಗಾಧರ ಕೊಳಗಿ ಮತ್ತು ಕಾಶ್ಯಪ ಪರ್ಣಕುಟಿ ದೊಡ್ಮನೆ ಗಣೇಶ್ ಹೆಗಡೆಯವರ ವ್ಯಕ್ತಿತ್ವದ ಬಗ್ಗೆ ಸಾದ್ಯಂತವಾಗಿ ಮಾತನಾಡಿದರು. ಗಂಗಾಧರ ಹಿರೇಗುತ್ತಿ ದಂಪತಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *