ಮಕ್ಕಳ ಸಮಗ್ರ ವಿಕಾಸಕ್ಕೆ ಸೃಜನಾತ್ಮಕ ಚಟುವಟಿಕೆ ಪೂರಕ -ಕನ್ನೇಶ್

ಮಕ್ಕಳ ಪಠ್ಯವನ್ನು ಪಾಲಕರು ಅರಿತು ಮಾರ್ಗದರ್ಶನ ಮಾಡಿದರೆ ಹೆಚ್ಚು ಅನುಕೂಲ. ಹಾಗೆಯೇ ಅವರು ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಹಂತದಲ್ಲಿ ಸೃಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ಅವರ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಾಧ್ಯವಾಗುತ್ತದೆ ಎಂದು ಸಮಾಜಮುಖಿ ಪತ್ರಿಕೆಯ ಸಂಪಾದಕ ಕನ್ನೇಶ್ ಕೋಲಶಿರ್ಸಿ ಹೇಳಿದರು.
ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಆಧಾರ ಸಂಸ್ಥೆ ( ರಿ) ಗಳ ಆಶ್ರಯದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ನಡೆಸಿದ ಚಿತ್ರಕಲೆ ಹಾಗೂ ವೇಷಭೂಷಣ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ ಮಾತನಾಡಿ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಅನೇಕ ಸಂಗತಿಗಳ ಕುರಿತಾಗಿ ತಿಳಿದುಕೊಳ್ಳುವುದಕ್ಕೆ ಮಕ್ಕಳಿಗೆ ಸಾಧ್ಯವಾಗುತ್ತದೆ.ಹೆಚ್ಚು ಹೊಸ ವಿಚಾರಗಳ ಅರಿವು ಮೂಡುತ್ತದೆ. ನಮ್ಮಲ್ಲಿಯ ಕ್ರೀಯಾಶೀಲತೆ ಬೆಳೆಯುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಧಾರ ಸಂಸ್ಥೆಯ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ ಮಾತನಾಡಿ ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆ ಇರುತ್ತದೆ. ಪಠ್ಯೇತರ ಚಟುವಟಿಕೆಯಲ್ಲಿ ಸಾಧನೆಯನ್ನು ಮಾಡುವುದರೊಂದಿಗೆ ನಮ್ಮಲ್ಲಿಯ ಕೀಳರಿಮೆ ಹೋಗುತ್ತದೆ.ಯಾವುದಾದರೂ ಆಸಕ್ತ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಹೊಂದಲು ಸಹಕಾರಿಯಾಗುತ್ತದೆ ಎಂದರು.
ವೇದಿಕೆಯಲ್ಲಿ ರಜಥಶಿಲ್ಪಿ ಪ್ರಶಾಂತ ಶೇಟ್, ಶಿಕ್ಷಣ ಇಲಾಖೆಯ ಬಿ.ಆರ್.ಪಿ ಗಳಾದ ಎಚ್.ಆರ್.ನಾಯ್ಕ, ,ಆಧಾರ ಸಂಸ್ಥೆಯ ಸಂಯೋಜಕ ಟಿ.ಕೆ.ಎಂ.ಆಜಾದ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಆಧಾರ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಸಂಧ್ಯಾ ಡಿ.ಆಚಾರಿ ಸ್ವಾಗತಿಸಿದರು. ಶಿಕ್ಷಕಿ ನಮೃತಾ ವಿ. ಕಾರ್ಯಕ್ರಮ ನಿರ್ವಹಿಸಿದರು. ರೇಖಾ ಫರ್ನಾಂಡಿಸ್ ವಂದಿಸಿದರು.
ಸ್ಫರ್ಧಾ ವಿಜೇತರು; ಚಿತ್ರಕಲೆ 5 ರಿಂದ 8 ವರ್ಷದ ಮಕ್ಕಳ ವಿಭಾಗದಲ್ಲಿ ಕೋಲಶಿರ್ಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ನೇ ತರಗತಿಯ ವಿದ್ಯಾರ್ಥಿ ಬಿ.ಎನ್.ಪ್ರೇರಣ ( ಪ್ರಥಮ), ಪ್ರಶಾಂತಿ ವಿದ್ಯಾ ಕೇಂದ್ರದ 3 ನೇ ತರಗತಿ ವಿದ್ಯಾರ್ಥಿ ರಾಘವೇಂದ್ರ ಡಿ.ಶೆಟ್ಟಿ ( ದ್ವಿತೀಯ) ಇದೇ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ವಿಶ್ವಾಸ ಸಿ.ಹೊಸೂರು ( ತೃತೀಯ)
9 ರಿಂದ 12 ರ ವಯೋಮಿತಿ ವಿಭಾಗದಲ್ಲಿ ಪಟ್ಟಣದ ಸಿದ್ಧಿವಿನಾಯಕ ಪ್ರಾಥಮಿಕ ಶಾಲೆಯ 5 ನೇ ತರಗತಿ ವಿದ್ಯಾರ್ಥಿ ಸುಹಾಸ್ ನಾಗರಾಜ ನಾಯ್ಕ (ಪ್ರಥಮ) ಕವಲಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿ ಎಚ್.ಡಿ.ದೀಪಾ ( ದ್ವಿತೀಯ) ಪ್ರಶಾಂತಿ ವಿದ್ಯಾ ಕೇಂದ್ರದ 4 ನೇ ತರಗತಿ ವಿದ್ಯಾರ್ಥಿ ಎಸ್.ಆರ್.ಸಾನಿಕಾ ( ತೃತೀಯ) 13 ರಿಂದ 16 ವಯೋಮಾನದ ವಿಭಾಗದಲ್ಲಿ ಹಲಗೇರಿಯ ಕರ್ನಾಟಕ ಪ್ರೌಢ ಶಾಲೆ 9 ನೇ ತರಗತಿ ವಿದ್ಯಾರ್ಥಿ ಚಿನ್ಮಯ್ಯ ಜಿ.ನಾಯ್ಕ (ಪ್ರಥಮ) ಪಟ್ಟಣದ ಸಿದ್ಧಿವಿನಾಯಕ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಮಾನ್ಯ ಎಚ್.ಎನ್ ( ದ್ವಿತೀಯ) ಹಲಗೇರಿಯ ಕರ್ನಾಟಕ ಪ್ರೌಢ ಶಾಲೆ 9 ನೇ ತರಗತಿ ವಿದ್ಯಾರ್ಥಿ ದೀಪಕ್ ಕೆ.ನಾಯ್ಕ ( ತೃತೀಯ) ಬಹುಮಾನ ಪಡೆದುಕೊಂಡಿದ್ದಾರೆ.
ವೇಷಭೂಷಣ ಸ್ಪರ್ಧೆಯಲ್ಲಿ 5 ರಿಂದ 7 ರ ವಯೋಮಿತಿಯ ವಿಭಾಗದಲ್ಲಿ ಪಟ್ಟಣದ ಪ್ರಶಾಂತಿ ಆಂಗ್ಲ ಮಾಧ್ಯಮ ಶಾಲೆಯ 1 ನೇ ತರಗತಿ ವಿದ್ಯಾರ್ಥಿ ತಪಸ್ಯ ತುಷಾರ ಚಂದ್ರಘಟಗಿ ( ಪ್ರಥಮ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 1 ನೇ ತರಗತಿ ವಿದ್ಯಾರ್ಥಿ ಮಾನ್ವಿ ಮೋಹನ ನಾಯ್ಕ (ದ್ವಿತೀಯ) ಸಿದ್ಧಿವಿನಾಯಕ ಪ್ರಾಥಮಿಕ ಶಾಲೆಯ 1 ನೇ ತರಗತಿಯ ವಿದ್ಯಾರ್ಥಿ ವಿವಾನ್ ಪ್ರಕಾಶ ನಾಯ್ಕ (ತೃತೀಯ).
8 ರಿಂದ 10 ರ ವಯೋಮಾನದ ವಿಭಾಗದಲ್ಲಿ ಸಿದ್ಧಿವಿನಾಯಕ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಆರುಷ ಆನಂದ ಶೇಟ್ ( ಪ್ರಥಮ). ಕವಲಕೊಪ್ಪ ಎಚ್.ಪಿ.ಎಸ್ 4 ನೇ ತರಗತಿ ವಿದ್ಯಾರ್ಥಿ ಮಧುರಾ ನಾಯ್ಕ ( ದ್ವಿತೀಯ) ಸಿದ್ದಾಪುರ ಎಚ್.ಪಿ.ಎಸ್ 3 ನೇ ತರಗತಿ ವಿದ್ಯಾರ್ಥಿ ಜಾಹ್ನವಿ ( ತೃತೀಯ) ಸ್ಥಾನವನ್ನು ಪಡೆದುಕೊಂಡರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *