ಕೆ.ಆರ್. ಪ್ರಕಾಶರಿಗೆ ಸನ್ಮಾನ , ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ

ನಾಟಕೋತ್ಸವ ಸಮಾರೋಪ- ಕೆ.ಆರ್. ಪ್ರಕಾಶರಿಗೆ ಸನ್ಮಾನ
ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ
ಅಕಾಡೆಮಿಕ್ ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ. ಅವು ಶಾಸ್ತ್ರ ಮತ್ತು ವಿಜ್ಞಾನ ಎರಡೂ ಕೂಡ. ನಮ್ಮ ಸಮಸ್ಯೆಗಳಿಗೆ ಪರಿಹಾರ ರೂಪಿಸಿಕೊಳ್ಳುವ ಶಕ್ತಿ ಅವುಗಳಿಂದ ಒದಗುತ್ತದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಚ್.ಎಂ.ನಾಗರಾಜರಾವ್ ಹೇಳಿದರು.
ಅವರು ಸಿದ್ಧಾಪುರ ಶಂಕರಮಠದಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ಸ್ಥಳೀಯ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ ನಾಲ್ಕು ದಿನಗಳ ಹವ್ಯಾಸಿ ನಾಟಕೋತ್ಸವ-2020ರ ಸಮಾರೋಪ ಕಾರ್ಯಕ್ರಮದಲ್ಲಿ ಸಮಾರೋಪ ಮಾತುಗಳನ್ನಾಡಿದರು.
ಶಿಕ್ಷಣ ಪಡೆದುಕೊಂಡರೂ ನಮ್ಮಲ್ಲಿ ಅಹಂಕಾರ , ಇನ್ನೊಬ್ಬರನ್ನ ಅರ್ಥ ಮಾಡಿಕೊಳ್ಳದ ಸ್ಥಿತಿ ನಮ್ಮದಾಗಿದೆ.ಪರಸ್ಪರ ಬೆರೆಯುವ ಸ್ವಭಾವ ಕ್ಷೀಣಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿದ ಕಲೆಗಳು ಈಗಲೂ ಸರ್ವಶ್ರೇಷ್ಠ. ನಗರೀಕರಣದಲ್ಲಿ ಪ್ರತಿಷ್ಠಾಪನಾ ಸಂಸ್ಕೃತಿಯೇ ಹೆಚ್ಚುತ್ತ ಬಂತು. ಕಾಲ ಯಾವಾಗಲೂ ಸರಿಯಾಗಿರುವದಿಲ್ಲ. ಕಲೆಗಳು ನಮ್ಮ ಸರಿಗಳ ಪಟ್ಟಿಮಾಡುತ್ತವೆ. ಪರಿಪೂರ್ಣತೆಗೆ ಎಲ್ಲ ಕಲೆಗಳೂ ಸಹಕಾರಿಯಾಗಿವೆ. ಸಾಂಸ್ಕೃತಿಕ ಮತ್ತು ಬದುಕಿನ ಕಲೆ ಎರಡನ್ನೂ ಕಾಣುವುದು ರಂಗಕಲೆಗಳಿಂದ ಸಾಧ್ಯ. ಯಕ್ಷಗಾನ, ರಂಗಕಲೆಗಳು ಯಾವುದು ಅಗತ್ಯ ಎನ್ನುವದನ್ನು ತಿಳಿಸಿಕೊಡುತ್ತದೆ. ಮುಖ್ಯವಾಗಿ ನಮ್ಮಲ್ಲಿ ಸಾಂಸ್ಕೃತಿಕ ಪ್ರಜ್ಞೆ ರೂಪಿಸುವ ಪ್ರಜ್ಞೆ ಬೇಕು. ಅದು ಇಂಥ ನಾಟಕೋತ್ಸವಗಳಿಂದ ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಮಾತನಾಡಿ ಧಾರ್ಮಿಕ ಚಟುವಟಿಕೆಯಂತೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಮಹತ್ವವಿದೆ. ಸಾಂಸ್ಕೃತಿಕತೆಯಿಂದ ಆನಂದ, ನೆಮ್ಮದಿ ದೊರೆಯುತ್ತದೆ. ಇಲ್ಲಿ ನಡೆದ ನಾಲ್ಕು ದಿನಗಳ ನಾಟಕೋತ್ಸವ ಅತ್ಯಂತ ಯಶಸ್ವಿಯಾಗಿ ನಡೆದಿದ್ದು ರಂಗಭೂಮಿಯ ಕುರಿತಾದ ಆಸಕ್ತಿ, ಪ್ರಜ್ಞೆಯನ್ನು ಪ್ರೇಕ್ಷಕರಲ್ಲಿ ಮೂಡಿಸಿದೆ ಎಂದರು.
ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ, ನಾಟಕೋತ್ಸವದ ಸಂಯೋಜಕ ಕೆ.ಆರ್.ಪ್ರಕಾಶ್ ಸ್ವಾಗತಿಸಿದರು. ಪ್ರೊ| ಎಂ.ಕೆ.ನಾಯ್ಕ ಹೊಸಳ್ಳಿ ನಿರೂಪಿಸಿದರು. ಕೃಷ್ಣ ಪೂಜಾರಿ ವಂದಿಸಿದರು.
ಈ ಸಂದರ್ಭದಲ್ಲಿ ಕೆ.ಆರ್.ಪ್ರಕಾಶ್‍ರನ್ನು ಸ್ಥಳೀಯ ಸಂಘಟನೆಗಳ ಪರವಾಗಿ ಸನ್ಮಾನಿಸಲಾಯಿತು. ನಾಟಕೋತ್ಸವಕ್ಕೆ ಸಹಕಾರ ನೀಡಿದ ಸಂಘಟನೆಗಳ ಮುಖ್ಯಸ್ಥರಾದ ಗಣಪತಿ ಹೆಗಡೆ ಹುಲೀಮನೆ, ನಂದನ ಹೆಗಡೆ ಮಗೇಗಾರ, ಗಣಪತಿ ಹಿತ್ಲಕೈ, ಗಣಪತಿ ಹೆಗಡೆ ವಡ್ಡಿನಗದ್ದೆ, ಗಣಪತಿ ಗುಂಜಗೋಡ ಮುಂತಾದವರನ್ನು ಗೌರವಿಸಲಾಯಿತು.

ಲಲಿತಪ್ರಬಂಧ-
ನೋಡಿದ್ದೀರಾ..
ಜೋಗದ ಗುಂಡಿ
-ತಮ್ಮಣ್ಣ ಬೀಗಾರ್
ದೊಡ್ಡ ಕಲ್ಲುಬಂಡೆ, ಅದರ ಆಚೆಗಿನ ನೀರಿನ ಗುಂಡಿ ಎಲ್ಲ ಸಮೀಪ ಇದ್ದಂತೆ ಕಾಣುತ್ತಿತ್ತು. ಹಾಗೆ ಕಾಣಲು ತೊಡಗಿ ಐದು ನಿಮಿಷವೇ ಆಗಿರಬೇಕು. ಹಿಂದೆ ನೋಡಿದರೆ ಅಪ್ಪ ನನಗಿಂತ ಮೆಟ್ಟಿಲು ಹಿಂದೆ ಇದ್ದ. ನಿಲ್ಲು ನಿಲ್ಲು ಎಂದು ಸನ್ನೆ ಮಾಡುತ್ತ ದೊಡ್ಡದಾಗಿ ಕೂಗಿ ಹೇಳಿದ. ನಾನು ನಿಧಾನವಾಗಿ ಕೆಳಗೆ ಇಳಿಯುತ್ತಲೇ ಇದ್ದೆ.
ನನ್ನದು ಜೋಗ ಜಲಪಾತದಿಂದ ಹದಿನೈದು ಇಪ್ಪತ್ತು ಕಿಲೋಮೀಟರಿನಷ್ಟು ಸಮೀಪವೇ ಇರುವ ಊರು. ಬಹಳ ದೂರದ ಊರುಗಳಿಂದ ಜೋಗದ ಜಲಪಾತ ನೋಡಲು ಜನ ಬರುತ್ತಾರೆ ಎಂದು ಕೇಳಿದ್ದೆ. ನಾನೀಗ ಆರನೇ ತರಗತಿ ಓದುತ್ತಿದ್ದರೂ ಜೋಗಕ್ಕೆ ಬಂದಿರಲಿಲ್ಲ……..

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *