ಕೆ.ಆರ್. ಪ್ರಕಾಶರಿಗೆ ಸನ್ಮಾನ , ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ

ನಾಟಕೋತ್ಸವ ಸಮಾರೋಪ- ಕೆ.ಆರ್. ಪ್ರಕಾಶರಿಗೆ ಸನ್ಮಾನ
ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ
ಅಕಾಡೆಮಿಕ್ ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ. ಅವು ಶಾಸ್ತ್ರ ಮತ್ತು ವಿಜ್ಞಾನ ಎರಡೂ ಕೂಡ. ನಮ್ಮ ಸಮಸ್ಯೆಗಳಿಗೆ ಪರಿಹಾರ ರೂಪಿಸಿಕೊಳ್ಳುವ ಶಕ್ತಿ ಅವುಗಳಿಂದ ಒದಗುತ್ತದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಚ್.ಎಂ.ನಾಗರಾಜರಾವ್ ಹೇಳಿದರು.
ಅವರು ಸಿದ್ಧಾಪುರ ಶಂಕರಮಠದಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ಸ್ಥಳೀಯ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ ನಾಲ್ಕು ದಿನಗಳ ಹವ್ಯಾಸಿ ನಾಟಕೋತ್ಸವ-2020ರ ಸಮಾರೋಪ ಕಾರ್ಯಕ್ರಮದಲ್ಲಿ ಸಮಾರೋಪ ಮಾತುಗಳನ್ನಾಡಿದರು.
ಶಿಕ್ಷಣ ಪಡೆದುಕೊಂಡರೂ ನಮ್ಮಲ್ಲಿ ಅಹಂಕಾರ , ಇನ್ನೊಬ್ಬರನ್ನ ಅರ್ಥ ಮಾಡಿಕೊಳ್ಳದ ಸ್ಥಿತಿ ನಮ್ಮದಾಗಿದೆ.ಪರಸ್ಪರ ಬೆರೆಯುವ ಸ್ವಭಾವ ಕ್ಷೀಣಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿದ ಕಲೆಗಳು ಈಗಲೂ ಸರ್ವಶ್ರೇಷ್ಠ. ನಗರೀಕರಣದಲ್ಲಿ ಪ್ರತಿಷ್ಠಾಪನಾ ಸಂಸ್ಕೃತಿಯೇ ಹೆಚ್ಚುತ್ತ ಬಂತು. ಕಾಲ ಯಾವಾಗಲೂ ಸರಿಯಾಗಿರುವದಿಲ್ಲ. ಕಲೆಗಳು ನಮ್ಮ ಸರಿಗಳ ಪಟ್ಟಿಮಾಡುತ್ತವೆ. ಪರಿಪೂರ್ಣತೆಗೆ ಎಲ್ಲ ಕಲೆಗಳೂ ಸಹಕಾರಿಯಾಗಿವೆ. ಸಾಂಸ್ಕೃತಿಕ ಮತ್ತು ಬದುಕಿನ ಕಲೆ ಎರಡನ್ನೂ ಕಾಣುವುದು ರಂಗಕಲೆಗಳಿಂದ ಸಾಧ್ಯ. ಯಕ್ಷಗಾನ, ರಂಗಕಲೆಗಳು ಯಾವುದು ಅಗತ್ಯ ಎನ್ನುವದನ್ನು ತಿಳಿಸಿಕೊಡುತ್ತದೆ. ಮುಖ್ಯವಾಗಿ ನಮ್ಮಲ್ಲಿ ಸಾಂಸ್ಕೃತಿಕ ಪ್ರಜ್ಞೆ ರೂಪಿಸುವ ಪ್ರಜ್ಞೆ ಬೇಕು. ಅದು ಇಂಥ ನಾಟಕೋತ್ಸವಗಳಿಂದ ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಮಾತನಾಡಿ ಧಾರ್ಮಿಕ ಚಟುವಟಿಕೆಯಂತೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಮಹತ್ವವಿದೆ. ಸಾಂಸ್ಕೃತಿಕತೆಯಿಂದ ಆನಂದ, ನೆಮ್ಮದಿ ದೊರೆಯುತ್ತದೆ. ಇಲ್ಲಿ ನಡೆದ ನಾಲ್ಕು ದಿನಗಳ ನಾಟಕೋತ್ಸವ ಅತ್ಯಂತ ಯಶಸ್ವಿಯಾಗಿ ನಡೆದಿದ್ದು ರಂಗಭೂಮಿಯ ಕುರಿತಾದ ಆಸಕ್ತಿ, ಪ್ರಜ್ಞೆಯನ್ನು ಪ್ರೇಕ್ಷಕರಲ್ಲಿ ಮೂಡಿಸಿದೆ ಎಂದರು.
ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ, ನಾಟಕೋತ್ಸವದ ಸಂಯೋಜಕ ಕೆ.ಆರ್.ಪ್ರಕಾಶ್ ಸ್ವಾಗತಿಸಿದರು. ಪ್ರೊ| ಎಂ.ಕೆ.ನಾಯ್ಕ ಹೊಸಳ್ಳಿ ನಿರೂಪಿಸಿದರು. ಕೃಷ್ಣ ಪೂಜಾರಿ ವಂದಿಸಿದರು.
ಈ ಸಂದರ್ಭದಲ್ಲಿ ಕೆ.ಆರ್.ಪ್ರಕಾಶ್‍ರನ್ನು ಸ್ಥಳೀಯ ಸಂಘಟನೆಗಳ ಪರವಾಗಿ ಸನ್ಮಾನಿಸಲಾಯಿತು. ನಾಟಕೋತ್ಸವಕ್ಕೆ ಸಹಕಾರ ನೀಡಿದ ಸಂಘಟನೆಗಳ ಮುಖ್ಯಸ್ಥರಾದ ಗಣಪತಿ ಹೆಗಡೆ ಹುಲೀಮನೆ, ನಂದನ ಹೆಗಡೆ ಮಗೇಗಾರ, ಗಣಪತಿ ಹಿತ್ಲಕೈ, ಗಣಪತಿ ಹೆಗಡೆ ವಡ್ಡಿನಗದ್ದೆ, ಗಣಪತಿ ಗುಂಜಗೋಡ ಮುಂತಾದವರನ್ನು ಗೌರವಿಸಲಾಯಿತು.

ಲಲಿತಪ್ರಬಂಧ-
ನೋಡಿದ್ದೀರಾ..
ಜೋಗದ ಗುಂಡಿ
-ತಮ್ಮಣ್ಣ ಬೀಗಾರ್
ದೊಡ್ಡ ಕಲ್ಲುಬಂಡೆ, ಅದರ ಆಚೆಗಿನ ನೀರಿನ ಗುಂಡಿ ಎಲ್ಲ ಸಮೀಪ ಇದ್ದಂತೆ ಕಾಣುತ್ತಿತ್ತು. ಹಾಗೆ ಕಾಣಲು ತೊಡಗಿ ಐದು ನಿಮಿಷವೇ ಆಗಿರಬೇಕು. ಹಿಂದೆ ನೋಡಿದರೆ ಅಪ್ಪ ನನಗಿಂತ ಮೆಟ್ಟಿಲು ಹಿಂದೆ ಇದ್ದ. ನಿಲ್ಲು ನಿಲ್ಲು ಎಂದು ಸನ್ನೆ ಮಾಡುತ್ತ ದೊಡ್ಡದಾಗಿ ಕೂಗಿ ಹೇಳಿದ. ನಾನು ನಿಧಾನವಾಗಿ ಕೆಳಗೆ ಇಳಿಯುತ್ತಲೇ ಇದ್ದೆ.
ನನ್ನದು ಜೋಗ ಜಲಪಾತದಿಂದ ಹದಿನೈದು ಇಪ್ಪತ್ತು ಕಿಲೋಮೀಟರಿನಷ್ಟು ಸಮೀಪವೇ ಇರುವ ಊರು. ಬಹಳ ದೂರದ ಊರುಗಳಿಂದ ಜೋಗದ ಜಲಪಾತ ನೋಡಲು ಜನ ಬರುತ್ತಾರೆ ಎಂದು ಕೇಳಿದ್ದೆ. ನಾನೀಗ ಆರನೇ ತರಗತಿ ಓದುತ್ತಿದ್ದರೂ ಜೋಗಕ್ಕೆ ಬಂದಿರಲಿಲ್ಲ……..

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *