ಕೊನೆ ಇಳಿಸುವ ಗಡಗಡೆ ಅಡಿಕೆ ತೋಟದಲ್ಲಿ ಸದ್ದುಮಾಡದೆ ಸಹಕರಿಸುತ್ತಿರುವ ಸರಳ ಯಂತ್ರ

ಆಧುನಿಕ ಆವಿಷ್ಕಾರಗಳು,ಯಾಂತ್ರಿಕತೆ ಇಲ್ಲದೆ ವ್ಯವಸಾಯ ಸುಲಭವಲ್ಲ ಎನ್ನುವ ವೇದನೆ ನಡುವೆ ರೈತರೇ ತಮ್ಮ ಅಗತ್ಯದ ಸಲಕರಣೆಗಳನ್ನು ತಯಾರಿಸಿಕೊಳ್ಳುತಿದ್ದಾರೆ. ಅಡಿಕೆ ತೆಗೆಯುವ, ಸುಲಿಯುವ, ಒಣಗಿಸುವ ಉಪಕರಣಗಳೊಂದಿಗೆ ಅಡಿಕೆಗೊನೆ ಇಳಿಸುವ ಉಪಕರಣವೊಂದು ಈಗ ಮಲೆನಾಡಿನ ತೋಟಗಳಲ್ಲಿ ಸದ್ದಿಲ್ಲದೆ ಕೆಲಸ ಮಾಡುತ್ತಿದೆ.
ಹಿಂದೆ ಅಡಿಕೆ ತೆಗೆಯುವ ಕೊನೆಗೌಡ ಗೊನೆ ಕೊಯ್ದು ತನ್ನ ಬಾಲದಂಥ ಹಗ್ಗದ ಮೂಲಕ ನೇರ ಕೊನೆ ಇಳಿಸುತಿದ್ದ ಈಗ ಈ ಕಷ್ಟ ಕಡಿಮೆ ಮಾಡಲು ಮಲೆನಾಡಿನ ರೈತರು ಕೊನೆಗೌಡನ ಅಂಡಿನ ಕಟಕಮಣೆಗೆ ಗಡಗಡೆ ಅಳವಡಿಸಿ ಸುಲಭವಾಗಿ ಕೊನೆ ಇಳಿಸುವ ಸರಳ ತಂತ್ರಜ್ಞಾನಕ್ಕೆ ಮೊರೆಹೋಗಿದ್ದಾರೆ.
ವಾರದ ಓಡಾಟದಲ್ಲಿದ್ದ
ನಮಗೆ ಕಾನಗೋಡಿನ ಪ್ರಭಾಕರ ಡೋಂಗ್ರೆಯವರ ತೋಟದಲ್ಲಿ ಈ ಗಡಗಡಿಯ ಕೊನೆ ಇಳಿಸುವ ಸಾಧನ ಗಮನ ಸೆಳೆಯಿತು. ಅಡಿಕೆ ಕೊನೆ ಹಿಡಿಯುವ ಕಷ್ಟ ಕಡಿಮೆಮಾಡಲು ಮತ್ತು ತೆರೆ ಅಡಿಕೆ ಕಡಿಮೆ ಮಾಡಲು ಈ ಗಡಗಡೆಯ ಸಾಧನ ಬಳಸುತ್ತೇವೆ ಎಂದ ಅವರು.
ಈ ಯಂತ್ರವನ್ನು ಪರಿಚಯಿಸಿದವರು ಕುಶಾಲ್ ಹೆಗಡೆ ಎಂಬುದನ್ನು ಸೇರಿಸುವುದನ್ನು ಮರೆಯಲಿಲ್ಲ.
ಮಲೆನಾಡಿನಂತೆ ಬಯಲು ಸೀಮೆಯಲ್ಲೂ ಈಗ ಅಡಿಕೆ ಬೆಳೆಯುತ್ತಿದೆ. ಆದರೆ ಮಲೆನಾಡು-ಬಯಲುಸೀಮೆ ಸೇರಿ ಎಲ್ಲಾ ಕಡೆ ಅಡಿಕೆ ಸಂಸ್ಕರಿಸುವ ಕುಶಲಕರ್ಮಿಗಳ ಅಭಾವವಿದೆ. ಈ ಅಭಾವವನ್ನು ಎದುರಿಸುವ ಹಿನ್ನೆಲೆಯಲ್ಲಿ ತಯಾರಿಸಿಕೊಂಡ ಈ ಸುಲಭ ಸಾಧನದಿಂದ ಅಡಿಕೆ ಇಳಿಸಲು, ನೆಲದಲ್ಲಿ ಹಿಡಿಯಲು ಸುಲಭ ಎಂದು ಕೃಷಿ ಕಾರ್ಮಿಕರು ತಮ್ಮ ಅನುಭವ ಹಂಚಿಕೊಂಡರು.
ಅಡಿಕೆಮರ ಏರುವ ಗೊನೆ ತೆಗೆಯುವ, ತೆಗೆದ ಕೊನೆಯನ್ನು ನೆಲಕ್ಕಿಳಿಸುವ ಅನುಕೂಲಕ್ಕೆ ರೈತರು ಇಂಥ ಸರಳ, ಸುಲಭ ಸಾಧನಗಳ ಮೊರೆಹೋಗಿದ್ದಾರೆ. ಇಂಥ ಯಂತ್ರಗಳ ಬಳಕೆ ಕೃಷಿಕಾರ್ಮಿಕರ ಶ್ರಮ-ಕಷ್ಟವನ್ನು ಕಡಿಮೆ ಮಾಡಿರುವುದಂತೂ ಸತ್ಯ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *