ಅನ್ಯ ಅರಣ್ಯಗುತ್ತಿಗೆದಾರರನ್ನು ಬೆದರಿಸುವ ನಾಗರಾಜ್ ವಿರುದ್ಧ ದೂರು ಸಾಧ್ಯತೆ

ಸಿದ್ಧಾಪುರ ರವೀಂದ್ರನಗರದ ವ್ಯಕ್ತಿಗಳೆಂದು ಗುರುತಿಸಲಾದ ಒಂದು ಗುಂಪು ಅವರಗುಪ್ಪಾದಲ್ಲಿ ಶಿರಸಿಯಅರಣ್ಯಗುತ್ತಿಗೆದಾರರಿಗೆ ಹೊಡೆದ ದುರ್ಘಟನೆ ಶುಕ್ರವಾರ ನಡೆದಿದೆ. ರವೀಂದ್ರನಗರದ ನಾಗರಾಜ್ ಎನ್ನುವ ವ್ಯಕ್ತಿ ಸಿದ್ಧಾಪುರದ ಸುತ್ತ-ಮುತ್ತ ಮಾಲಕಿಅರಣ್ಯ ಮಾರಾಟಮಾಡುವವರಿಗೆ ದುಸ್ವಪ್ನವಾಗಿದ್ದು ಈತ ಸ್ಥಳಿಯ ಅರಣ್ಯಮಾಲಿಕರಿಗೆ ಕಡಿಮೆ ದರದಲ್ಲಿ ಮಾಲಕಿ ಅರಣ್ಯ ಗುತ್ತಿಗೆ ಕೇಳುತಿದ್ದು ಹೊರಊರು,ತಾಲೂಕಿನ ಅರಣ್ಯ ಗುತ್ತಿಗೆದಾರರಿಗೆ ಸ್ಥಳಿಯವಾಗಿ ಗುತ್ತಿಗೆ ಪಡೆಯಲು ವಿರೋಧಿಸುವುದು,ಗುತ್ತಿಗೆ ಪಡೆದವರನ್ನು ಹೆದರಿಸುವುದು ಹಲ್ಲೆಮಾಡುತ್ತಿರುವ ಬಗ್ಗೆ ದೂರುಗಳಿವೆ.
ಇಲ್ಲಿ ಕೂಡಾ ಈ ನಾಗರಾಜ ಹೊರ ಊರಿನ ಮಾಲಕಿ ಅರಣ್ಯ ಗುತ್ತಿಗೆದಾರರಿಗೆ ಧಮಕಿ ಹಾಕಿದ ಬಗ್ಗೆ ಸ್ಥಳಿಯರು ದೂರಿದ್ದಾರೆ. ನಂತರ ಚಿಕ್ಕ ಗಲಾಟೆಯಾಗಿದ್ದು ಇದೇ ನಾಗರಾಜ್ ರವಿಂದ್ರನಗರದ ಕೆಲವು ಪುಂಡರನ್ನು ಕಟ್ಟಿಕೊಂಡು ಶಿರಸಿ ಅರಣ್ಯ ಗುತ್ತಿಗೆದಾರರಿಗೆ ಥಳಿಸಿದ್ದಾನೆ. ಹೀಗೆ ಥಳಿತಕ್ಕೆ ಸಿಕ್ಕ ವ್ಯಕ್ತಿಗಳು ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರಾಜಕೀಯ ಪಕ್ಷವೊಂದರ ಹೆಸರು ಹೇಳಿಕೊಂಡು ಅಧಿಕಾರಿಗಳು, ಅನ್ಯ ಗುತ್ತಿಗೆದಾರರನ್ನು ಬೆದರಿಸುತ್ತಿರುವ ಈ ನಾಗರಾಜ್ ಮೇಲೆ ಪ್ರಕರಣ ದಾಖಲಿಸಲು ಮುಂದಾಗಿರುವ ಬಗ್ಗೆ ಸಮಾಜಮುಖಿಗೆ ಖಚಿತಮಾಹಿತಿ ದೊರೆತಿದೆ.
ಕೆಲವು ವರ್ಷಗಳಿಂದ ಶಾಂತವಾಗಿದ್ದ ಸಿದ್ಧಾಪುರದಲ್ಲಿ ರವೀಂದ್ರನಗರದ ಕೆಲವು ವ್ಯಕ್ತಿಗಳು ಗೂಂಡಾವರ್ತನೆ ಮಾಡುತಿದ್ದು ಪೊಲೀಸರನ್ನು ಹೊಡೆದಿದ್ದು ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಈ ಪ್ರದೇಶದ ಕೆಲವು ಪುಂಡರ ಮೇಲೆ ಆರೋಪಗಳಿವೆ. ಈ ನಾಗರಾಜ್ ಮತ್ತವರ ಸಹಚರರು ಅರಣ್ಯ ಇಲಾಖೆ ಸೇರಿದಂತೆ ಸ್ಥಳಿಯ ಅಧಿಕಾರಿಗಳು, ರಾಜಕಾರಣಿಗಳ ನೆರವಿನಿಂದಲೇ ಈ ಪುಂಡಾಟ ಮಾಡುತ್ತಿರುವ ಬಗ್ಗೆ ಸ್ಥಳಿಯರು ಆಕ್ಷೇಪಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *