ಅನಂತ ವಿರೋಧ, ವ್ಯಾಪಕ ಖಂಡನೆ


ಸ್ವಾತಂತ್ರ್ಯ ಹೋರಾಟ ಮತ್ತು ಗಾಂಧಿ ನಿಂದನೆ ಮಾಡಿದ ಸಂಸದ ಅನಂತಕುಮಾರ ಹೆಗಡೆ ಮತಾಂಧ ನಡವಳಿಕೆ ವಿರೋಧಿಸಿ ತಾಲೂಕು, ಜಿಲ್ಲೆ, ರಾಜ್ಯದಿಂದ ರಾಷ್ಟ್ರಮಟ್ಟದವರೆಗೆ ವ್ಯಾಪಕ ವಿರೋಧ ವ್ಯಕ್ತವಾಗ
ಶಿರಸಿಯಲ್ಲಿ ಪ್ರತಿಭಟನೆ ಮಾಡಿದ ಜಿಲ್ಲಾ ಕಾಂಗ್ರೆಸ್ ನಗರದ ಮಾರುಕಟ್ಟೆಯ ಗಾಂಧಿ ಪ್ರತಿಮೆ ಎದುರು ಸಾಂಕೇತಿಕ ಧರಣಿ ನಡೆಸಿದೆ.ಅನಂತಕುಮಾರ ಹೆಗಡೆಯವರನ್ನು ಸಂಸದ ಸ್ಥಾನದಿಂದ ವಜಾಮಾಡಲು ಆಗ್ರಹಿಸಿ ಲೋಕಸಭೆಯ ಸ್ಪೀಕರ್ ರಿಗೆ ಮನವಿ ಮಾಡಿದ್ದರೆ. ಸ್ವಯಂ ಬಿ.ಜೆ.ಪಿ. ಪಕ್ಷದ ಪ್ರಮುಖರೇ ಈ ಅವಿವೇಕಿಯ ಬಾಯಿ ಮುಚ್ಚಿಸುವಂತೆ ತಮ್ಮ ಪಕ್ಷದ ವರಿಷ್ಠರನ್ನು ಆಗ್ರಹಿಸಿದ್ದಾರೆ.

ಅನಂತ ಹೆಗಡೆಗೆ ಕ್ಷಮೆಯಾಚಿಸಲು ಪಕ್ಷದ ಆದೇಶ
ಉತ್ತರಕನ್ನಡದ ಸಂಸದ ಮಾಜಿ ಸಚಿವ ಅನಂತಕುಮಾರ ಹೆಗಡೆ ಉಸುರವಳ್ಳಿಯಂತೆ ವರ್ತಿಸುವುದು, ಮಾತನಾಡುವುದು ಅವರ ಲಾಗಾಯ್ತಿನ ಚಾಳಿ.
ಇದೇ ಮನುಷ್ಯ ಕೆಲವು ತಿಂಗಳುಗಳ ಹಿಂದೆ ಗಾಂಧಿ ಪರವಾಗಿ ಬಿ.ಜೆ.ಪಿ. ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿ ಪರವಾಗಿ ಮಾತನಾಡಿ ನಾಟಕಮಾಡಿದ.್ದ
ಹೀಗೆ ಗಾಂಧಿ ಮಹಾತ್ಮನನ್ನು ರಾಜಕೀಯ ಲಾಭಕ್ಕಾಗಿ ಇವರು ಹೊಗಳಿದ ಹಿಂದೆಮುಂದೆ ಅವರು ಗಾಂಧಿಯನ್ನು ತೆಗಳಿದ ಸಂದರ್ಭಗಳ್ಯಾವುವು ಎಂಬುದನ್ನು ಅರಿಯಬೇಕು.
ಬ್ರಾಹ್ಮಣರ ಸಮ್ಮೇಳನ,ಬ್ರಾಹ್ಮಣರು, ಬ್ರಾಹ್ಮಣ್ಯದ ಪೋಶಕ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳಲ್ಲಿ ಮತಿವಿಕಲನಂತೆ ಅರಚಿ ತನ್ನ ಬ್ರಾಹ್ಮಣಿಕೆಯ ಹುಚ್ಚುತನ ಪ್ರದರ್ಶಿಸುವ ಈ ವೈದಿಕವೈರಸ್ ಹಿಂದುಳಿದವರು, ದಲಿತರಾದ ಭಾರತೀಯ ಬಹುಸಂಖ್ಯಾತರೆದುರು ಮತಾಂಧತೆಯ ಹಿಂದುತ್ವದ ಭಾಷಣ ಮಾಡುತ್ತಾರೆ.
ಉತ್ತರಕನ್ನಡದಲ್ಲಿ ಮತಾಂಧವೈದಿಕತೆಯನ್ನು ಬೆಂಬಲಿಸುವ ಕುತಂತ್ರಿಗಳನ್ನು ಬಿಟ್ಟರೆ ಈ ಉತ್ತರಕುಮಾರನ ಅವಾಂತರಗಳು, ಹುಚ್ಚುತನದ ಹೇಳಿಕೆಗಳನ್ನು ಉಪೇಕ್ಷಿಸುವವರೆ ಹೆಚ್ಚು, ಈ ಉಪೇಕ್ಷೆಯಲ್ಲಿ ಕೆಲವು ಬಾರಿ ಈ ವಿವೇಕಶೂನ್ಯನನ್ನು ನಿರ್ಲಕ್ಷಿಸುವುದಿರಬಹುದು ಆದರೆ ಅನೇಕಬಾರಿ ಈತನ ಹುಚ್ಚುತನಗಳನ್ನು ಉಪೇಕ್ಷಿಸಿದಂತೆ ಮಾಡಿ ಈತನ ಮಂಗಾಟಕ್ಕೆ ಪರೋಕ್ಷವಾಗಿ ಬೆಂಬಲಿಸುವ ಕುತಂತ್ರಗಳೂ ನಡೆಯುವುದುಂಟು.
ಅನಂತಕುಮಾರ ಹೆಗಡೆ ಕಾಂಗ್ರೆಸ್‍ನಿಂದಿಸುವುದು, ಜಾತ್ಯಾತೀತರು, ಪ್ರಗತಿಪರರು, ಧರ್ಮನಿರಪೇಕ್ಷರನ್ನು ದೂಷಿಸುವುದು ಸರ್ವೇಸಾಮಾನ್ಯ. ಆದರೆ ಇವರ ನಡೆ ನುಡಿಗಳನ್ನು ನೋಡಿದರೆ ಇವರ ಆಶಾಢಭೂತಿತನ, ಕಪಟತನ ಅರ್ಥವಾಗುತ್ತದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *