ಸ್ವಚ್ಛಭಾರತಕ್ಕೆ ಕೈ ಜೋಡಿಸಿದ ಭಟ್ಟರ ಖುಷಿಯ ಕೃಷಿ ಬದುಕು

ಕೆರೆ ಹೊಂಡದ ಜಿ.ಎಂ.ಭಟ್ ಕಾಯಿ ವ್ಯಾಪಾರ ಮಾಡುತ್ತಾ ನಗರದ ತರಕಾರಿ ಕಸವನ್ನು ರಸವನ್ನಾಗಿಸುತ್ತಾರೆ!
ಈ ಭಟ್ ಹಸು,ನಾಯಿ ಸಾಕುವುದರಲ್ಲಿ ಎತ್ತಿದ ಕೈ ಎಂದರೆ ಇವರ ಪರಿಚಯ ಸ್ಥಳಿಯರಿಗೆ ಸುಮಾರಾಗಿ ಆದಂತೆ ಆದರೆ, ಈ ಭಟ್ ರ ಆಸಕ್ತಿ, ಅಭಿರುಚಿಗಳಿವೆಯಲ್ಲಾ ಅವೆಲ್ಲಾ ಸಮಾಜಮುಖಿಯಾಗಿವೆ.
ಜಿ.ಎಂ.ಭಟ್ ಅವರ ಹವ್ಯಾಸ, ಉದ್ಯಮವಾಗಿ ಜಾನುವಾರುಗಳನ್ನು ಸಾಕುತ್ತಾರೆ. ಅವುಗಳಿಗೆ ಮೇವಾಗಿ ನಗರದ ತರಕಾರಿ ಕಸವನ್ನು ಬಳಸುತ್ತಾರೆ. ಈ ನಗರದ ಕಾಯಿಪಲ್ಲೆ ಕಸವಿದೆಯಲ್ಲ ಇದು ದನಗಳಿಗೆ ಉತ್ತಮ ಆಹಾರ ಜೊತೆಗೆ ಸಾವಯವ ಗೊಬ್ಬರಕ್ಕೂ ಇದು ಅನುಕೂಲಕರ ಎನ್ನುವ ಭಟ್ ನಗರದ ಎರಡು ಕಡೆ ತಮ್ಮ ವಾಹನಗಳನ್ನು ಇಡುತ್ತಾರೆ.
ಈ ವಾಹನಗಳಿಗೆ ತರಕಾರಿ ವ್ಯಾಪಾರಸ್ಥರು ತಮ್ಮ ಕಸವಾದ ತರಕಾರಿಗಳನ್ನು ಹಾಕಬೇಕು. ಈ ತರಕಾರಿ ಕಸವನ್ನು ದೂರದ ತಮ್ಮ ಜಮೀನಿಗೆ ಕೊಂಡೊಯ್ಯುವ ಅವರು ರಾಸುಗಳಿಗೆ ಮೇವಾಗಿ ಬಳಸಿ ಉಳಿದದ್ದರಿಂದ ಗೊಬ್ಬರ ತಯಾರಿಸುತ್ತಾರೆ.
ಹೀಗೆ ಮಾಡುವುದರಿಂದ ನಗರದ ಕಸ, ಕಸದ ಕೊಳೆತ ದುರ್ವಾಸನೆ ತಪ್ಪಿಸುವ ಮೂಲಕ ಸ್ವಚ್ಛಭಾರತದ ಕೆಲಸಮಾಡುತ್ತೇನೆ ಎನ್ನುತ್ತಾರೆ.
ಹೀಗೆ ನಗರದ ತರಕಾರಿ ಕಸವನ್ನು ದೂರ ಹೊತ್ತೊಯ್ದು ನಗರದ ಸ್ವಚ್ಛತೆಗೆ ಸಹಕರಿಸುವ ಭಟ್ ಉತ್ತಮ ಕೃಷಿಕರು. ಕೃಷಿ,ಕೃಷಿ ಸಂಬಂಧಿ ಸಣ್ಣ ಉದ್ದಿಮೆಗಳಿಂದ ಲಾಭ ಮಾಡಬಹುದೆನ್ನುವ ಜಿ.ಎಂ.ಭಟ್ ತಮ್ಮ ಕೃಷಿ ಕೆಲಸದ ಜೊತೆಗೆ ನೀರಿಂಗಿಸುವ ಪರಿಸರ ಪೂರಕ ಕೆಲಸವನ್ನೂ ಮಾಡುತ್ತಾರೆ. ಉತ್ತಮ ತಳಿಯ ನಾಯಿಗಳನ್ನು ಸಾಕುವ ಹವ್ಯಾಸದ ಭಟ್ ಶ್ವಾನ ಪ್ರದರ್ಶನಕ್ಕಾಗಿ ಜಿಲ್ಲೆ,ರಾಜ್ಯಾದ್ಯಂತ ತಿರುಗಾಡುತ್ತಾರೆ. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಚಪ್ಪರಮನೆಯ ಗಣಪತಿ ಭಟ್ ಮುಂಜಾನೆ ತಮ್ಮ ವಾಹನದೊಂದಿಗೆ ಹೊರಟರೆಂದರೆ ನಗರದ ಕಸ ಹೊರಸಾಗಿಸಿದರೆಂದೇ ಅರ್ಥ. ಇವರ ಈ ಹವ್ಯಾಸದಿಂದಾಗಿ ಸ್ಥಳಿಯರಿಗೆ, ಪೌರಕಾರ್ಮಿಕರಿಗೂ ಅನುಕೂಲವಾಗಿದೆ.ಸಹೋದರ, ಕುಟುಂಬದ ಜೊತೆಗೆ ಕೃಷಿಯೊಂದಿಗೆ ತೆಂಗಿನಕಾಯಿ ವ್ಯಾಪಾರ ಮಾಡುತ್ತಾ ಸ್ವಚ್ಛಭಾರತ ಕಲ್ಫನೆಗೆ ಕೈಜೋಡಿಸಿರುವ ಇವರ ಪತ್ನಿ ತೆಂಗಿನಕಾಯಿ ವ್ಯಾಪಾರಕ್ಕೆ ಸಹಕರಿಸಿದರೆ, ಸಹೋದರ ಮತ್ತು ಅವರ ಪತ್ನಿ ಕೃಷಿ ಮತ್ತು ಪಶುಸಂಗೋಪನೆಗೆ ನೆರವಾಗುತ್ತಾರೆ.
ಇಂಥ ಅವಿಭಕ್ತಕುಟುಂಬದ ಜಿ.ಎಂ. ಭಟ್ ರ ಮಗಳು ಕೃಷಿ ವಿಜ್ಞಾನ ಪದವಿಯಲ್ಲಿ ಬಂಗಾರದ ಪದಕಗಳನ್ನು ಬೇಟೆಯಾಡಿದ ಯುವತಿ. ಕೃಷಿ ಶಿಕ್ಷಣ, ಕೃಷಿ ಬದುಕುಗಳೊಂದಿಗೆ ಸಮಾಜೋಪಯೋಗಿಯಾಗಿ ಬದುಕುತ್ತಿರುವ ಭಟ್ ಕೃಷಿಯೊಂದಿಗೆ ಸ್ಥಳಿಯರಾಗಿ ದೇಶಿ ಬದುಕು ಬಾಳುವ ಖುಷಿಮುಂದೆ ಬೇರೆ ಎಲ್ಲಾ ಲೆಕ್ಕಕ್ಕಿಲ್ಲ ಎಂದು ನಂಬಿ ನಡೆಯುತಿದ್ದಾರೆ. ಫಲಾಪೇಕ್ಷೆ,ಪ್ರಚಾರ ಆಡಂಬರಗಳಿಂದ ದೂರ ಇರುವ ಇವರ ಸಮಾಜಮುಖಿ ಬದುಕು ಇತರರಿಗೂ ಮಾದರಿ.

ದೇವಿಯ ದೀವಿಗೆ ಪ್ರದರ್ಶನ
ಗಾಂಧಿ ಮಹತ್ವ ಪ್ರತಿಪಾದನೆ
ಗಾಂಧಿ ಕರೆಗೆ ಒಗೊಟ್ಟು ಸ್ವಾತಂತ್ರ್ಯ ಹೋರಾಟ,ಕರಾನಿರಾಕರಣೆ ಚಳವಳಿ,ಅಸ್ಪøಶ್ಯತೆ ನಿವಾರಣೆ, ಸಾರಾಯಿ ನಿಷೇಧವನ್ನು ಬೆಂಬಲಿಸಿದ ಸಿದ್ಧಾಪುರದ ಜನತೆ ಗಾಂಧಿ ಮಹತ್ವವನ್ನು ಅರಿತಿದ್ದರಿಂದ ಅಹಿಂಸಾತ್ಮಕ ಹೋರಾಟದ ಮೂಲಕ ಸ್ವಾತಂತ್ರ್ಯ ಗಳಿಕೆಗೆ ತಮ್ಮ ಅಳಿಲುಸೇವೆ ಸಲ್ಲಿಸಿದ್ದಾರೆ ಎಂದು ಸಾಹಿತಿ ಎಸ್.ವಿ.ಹೆಗಡೆ ಹೇಳಿದರು.
ಅವರು ರಂಗಸೌಗಂಧ ಮತ್ತಿತರ ಸಂಘಟನೆಗಳ ಸಹಯೋಗದ ದೇವಿಯದೀವಿಗೆ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *