ಗೊಂದಲದಿಂದಾದ ಎರಡು ಸುದ್ದಿಗಳು ಹೀಗೂ ಉಂಟೆ?

ಸಿದ್ಧಾಪುರದ ಬುಧವಾರದ ವಾರದ ಸಂತೆಯ ದಿವಸ ನಗರದಲ್ಲಿ ಎರಡು ಸುದ್ದಿಗಳು ಗೊಂದಲಕ್ಕೆ ಕಾರಣವಾದವು. ಮೊದಲನೆ ಸುದ್ದಿಯೆಂದರೆ ಕಾವಂಚೂರು ಗ್ರಾ.ಪಂ. ನ ಕಲ್ಲೂರಿನಲ್ಲಿ ರಸ್ತೆಯ ನಿರ್ಮಾಣಕ್ಕೆ ಅಡ್ಡಿಯುಂಟುಮಾಡಿದ ಕೆಲವರು ಈ ವಿಚಾರದಲ್ಲಿ ವಸಂತನಾಯ್ಕ ಮತ್ತವರ ಆಪ್ತರ ಮೇಲೆ ಪೊಲೀಸ್ ದೂರು ನೀಡಿ ಠಾಣೆಯಲ್ಲಿ ಹೊಂದಾಣಿಕೆಯಿಂದ ಬಗೆಹರಿಸಿಕೊಂಡರು.
ಈ ವಿಚಾರ ಚರ್ಚೆ, ವಿವಾದವಾಗಿ ಪೊಲೀಸ್ ಠಾಣೆ ಎದುರು ಜನ ಜಮಾಯಿಸಿದ್ದರಿಂದ ಕೆಲಕಾಲ ಗೊಂದಲವಾದಂತೆ ಕಂಡುಬಂತು ಆದರೆ ಈ ಪ್ರಕರಣ ಸುಖಾಂತವಾಗಿದೆ ಎಂದು ಮಾಹಿತಿ ದೊರೆತಿದೆ.
ಇನ್ನೊಂದು ಪ್ರಕರಣ ಬಲು ರೋಚಕ ಪ್ರಕರಣ ಸಿದ್ಧಾಪುರದ ಬುಧವಾರದ ಸಂತೆ ದಿವಸ ಮೊಬೈಲ್ ಪರ್ಸ್ ಕದಿಯುವ ಕಳ್ಳರ ವ್ಯವಸ್ಥಿತ ತಂಡವೊಂದು ಕಾರ್ಯನಿರ್ವಹಿಸುತ್ತಿದೆ. ಈ ತಂಡ ವಾರಬಿಟ್ಟು ವಾರ ಅಥವಾ 2-3 ವಾರಗಳಿಗೊಮ್ಮೆ ಸಿದ್ಧಾಪುರಕ್ಕೆ ಬರುತ್ತಿದೆ. ಈ ತಂಡದ ಕೈಚಳಕದಿಂದ ಗ್ರಾಮೀಣ ಪ್ರದೇಶದ ಜನರು ಸೇರಿದಂತೆ ಅನೇಕರು ತಮ್ಮ ಪರ್ಸ್, ಮೊಬೈಲ್
ಕಳೆದುಕೊಂಡಿದ್ದಾರೆ.
ಇಂಥ ಕೆಲವರು ಪೊಲೀಸ್ ಠಾಣೆಗೆ ದೂರು ನೀಡಿದರೆ ಕೆಲವರು ಸುಮ್ಮನಾಗಿದ್ದಾರೆ. ಈ ಪ್ರಕರಣ ಬೇಧಿಸಲು ಪೊಲೀಸರು ಮುಫ್ತಿಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬುಧವಾರದ ವರೆಗೆ ಕಳ್ಳರನ್ನು ಹಿಡಿಯಲು ಸಾಧ್ಯವಾಗಿಲ್ಲ. ಆದರೆ ಈ ವಿಚಾರ ಚರ್ಚೆಯಾಗಿ ಪೊಲೀಸ್ ಠಾಣೆ ಎದುರು ಜನರು ಜಮಾವಣೆಯಾದ್ದರಿಂದ ಮೊಬೈಲ್ ಕಳೆದುಕೊಂಡವರು ಮೊಬೈಲ್ ಕಳ್ಳರೇ ಸಿಕ್ಕಿದ್ದಾರೆಂದು ಬ್ರಮಿಸಿ ಠಾಣೆ ಕಡೆಗೆ ಬೈಕ್ ತಿರುಗಿಸಿ ಬೇಸರದಿಂದ ವಾಪಾಸಾದವರು ಇದ್ದಾರೆ. ಇಂದಿನ ಈ ಎರಡು ಘಟನೆಗಳು ಪರಸ್ಫರ ಜನರ ಗೊಂದಲಕ್ಕೆ ಕಾರಣವಾಗಿರುವ ಬಗ್ಗೆ ಬಲ್ಲ ಮೂಲಗಳು ಸಮಾಜಮುಖಿಗೆ ಮಾಹಿತಿ ನೀಡಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *