colors of music- 12 ನೇ ನಾದಪ್ರದಕ್ಷಿಣೆ,2 ದಿವಸ ನಿರಂತರ ಸಂಗೀತ ಅಧಿವೇಶನ

ಸಂಸ್ಕೃತಿಗಾಗಿ ಪರಂಪರೆ ಹೆಸರಿನಲ್ಲಿ ಸ್ಥಳಿಯ(ಸಿದ್ಧಾಪುರ) ಮುರುಳೀವನ ಮತ್ತು ಸಂಸ್ಕೃತಿ ಸಂಪದ ಪ್ರಾರಂಭಿಸಿರುವ ನಾದಪ್ರದಕ್ಷಿಣೆಯ 12 ನೇ ಕಾರ್ಯಕ್ರಮದ ಅಂಗವಾಗಿ 48 ಗಂಟೆಗಳ ಸಂಗೀತ ಕಾರ್ಯಕ್ರಮ ಫೆ.29 ಮತ್ತು ಮಾ.1 ರಂದು ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಂಘಟಕರಾದ ವಿಜಯ ಹೆಗಡೆ ಮತ್ತು ಕಿರಣ ಹೆಗಡೆ ಮಘೇಗಾರು 2 ದಿವಸಗಳ 12 ನೇ ನಾದಪ್ರದಕ್ಷಿಣೆಯಲ್ಲಿ 14 ಅಧಿವೇಶನಗಳು ನಡೆಯಲಿವೆ.15ಪ್ರಮುಖ ಕಲಾವಿದರೊಂದಿಗೆ ಒಟ್ಟೂ 26 ಜನ ಕಲಾವಿದರು ಭಾಗವಹಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದ ಅಂಗವಾಗಿ ಭಾನುವಾರ ಗೌರವ ಸಮರ್ಪಣೆ ನಡೆಯಲಿದ್ದು ಈ ಸಂಗೀತಗೋಷ್ಠಿಗಳು ಯುಟ್ಯೂಬ್ ನಲ್ಲಿ ನೇರಪ್ರಸಾರವಾಗಲಿವೆ ಎಂದು ಶೇಷಗಿರಿಭಟ್ ಹೇಳಿದರು.
ನಾದಪ್ರದಕ್ಷಿಣೆಯ 12 ನೇ ಕಾರ್ಯಕ್ರಮದ ಭಾನುವಾರದ ಮಧ್ಯಾಹ್ನ 4.30 ಕ್ಕೆ ಈಚಲಕರಂಜಿಯ ಡಾ.ಚಂದ್ರಶೇಖರ್ ಕಾಣೆ,ವಿಶ್ವೇಶ್ವರ ಗಾಯತ್ರಿಯವರಿಗೆ ಗೌರವ ಸಮರ್ಪಣೆ ನಡೆಯಲಿದ್ದು ಸಾಹಿತಿ ಸುಬ್ರಾಯ ಮತ್ತೀಹಳ್ಳಿ ಗೌರವ ನುಡಿ ನುಡಿಯಲಿದ್ದಾರೆ. ವಿಜಯ ಹೆಗಡೆ ದೊಡ್ಮನೆ ಮತ್ತು ಸಿ.ವಿ.ಹೆಗಡೆ ಮಘೇಗಾರು ಉಪಸ್ಥಿತರಿರಲಿದ್ದಾರೆ. ಈ ಸಂಗೀತ ಕಾರ್ಯಕ್ರಮಗಳ 2 ದಿವಸ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದರು.

ದೆಹಲಿ: ರಾಷ್ಟ್ರೀಯ ಅವಮಾನ,
ಗೃಹಸಚಿವರ ರಾಜೀನಾಮೆಗೆ ಆಗ್ರಹ
ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಘಟಿತ ಅಪರಾಧವಾಗಿದ್ದು ಇದರ ನೈತಿಕ ಹೊಣೆಹೊತ್ತು ಗೃಹಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಇಂದು ರಾಷ್ಟ್ರಪತಿ ಕೋವಿಂದ್‍ರನ್ನು ಭೇಟಿಮಾಡಿದ ಕಾಂಗ್ರೆಸ್ ನಿಯೋಗ ಮನವಿ ನೀಡಿ ದೆಹಲಿಯ ಹಿಂಸಾಚಾರದ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೂಕಪ್ರೇಕ್ಷಕರಂತೆ ವರ್ತಿಸುತ್ತಿವೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಬಗ್ಗೆ ಸೂಕ್ತವ್ಯವಸ್ಥೆಮಾಡಲು ವಿಫಲರಾದ ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ನಿಯೋಗದಲ್ಲಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿ ಘಟನೆ ರಾಷ್ಟ್ರೀಯ ಅವಮಾನ,ಈ ಬಗ್ಗೆ ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಿದ್ದೇವೆ ಎಂದಿದ್ದಾರೆ.

ಸಜ್ಜನರಿಬ್ಬರ ಆಕಸ್ಮಿಕ ಅಂತ್ಯಗಳು
ಹೊನ್ನಾವರ ತಾಲೂಕಿನ ಟಿ.ವಿ. ನಿರೂಪಕ ಗಜಾನನ ಹೆಗಡೆ ಮತ್ತು ಹೊನ್ನಾವರದ ಇತಿಹಾಸದ ಪ್ರಾಧ್ಯಾಪಕ ಸಿದ್ಧಾಪುರ ಮೂಲದ ಪಿ.ಡಿ.ನಾಯ್ಕ ಮಂಗಳವಾರ ನಿಧನರಾದರು.
ಗಜಾನನ ಹೆಗಡೆ ಕೆಲವು ಪತ್ರಿಕೆಗಳ ನಂತರ 2000ದ ದಶಕದಲ್ಲಿ ಈ ಟಿ.ವಿ.ಯಿಂದ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದರು. ಸಂಘದೋಷದ ಕೋಮುವಾದಿಯಾಗದೆ ಎಲ್ಲರೊಳಗೊಂದಾಗಿ ಎಲ್ಲರನ್ನೂ ಪ್ರೀತಿಸುತಿದ್ದ ಗಜಾನನ ಹೆಗಡೆ ಕೆಲವು ವರ್ಷಗಳ ಕಾಲ ವಾಹಿನಿಗಳಲ್ಲಿದ್ದು ನಂತರ ರಂಗಭೂಮಿ,ಸಂಗೀತದ ಆಸಕ್ತಿಗಳಿಂದ ಮಾಧ್ಯಮಕ್ಷೇತ್ರದಿಂದ ಹೊರಗೆ ಉಳಿದಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *