ಶರಾವತಿ ಅಭಯಾರಣ್ಯಕ್ಕೆ ಗ್ರಾಮಗಳ ಸೇರ್ಪಡೆ, ಹೆಗ್ಗರಣಿಯಲ್ಲಿ ಮಾ.3 ರಂದು ಪ್ರತಿಭಟನೆ

ಶಿವಮೊಗ್ಗ ಶರಾವತಿ ಅಭಯಾರಣ್ಯಕ್ಕೆ ಸಿದ್ದಾಪುರ ತಾಲೂಕಿನ ಕೆಲವು ಗ್ರಾಮಗಳನ್ನು ಸೇರಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಲು ಮಾರ್ಚ 3 ಮುಂಜಾನೆ 10 ಘಂಟೆಗೆ ಹೆಗ್ಗರಣೆ ಸೊಸೈಟಿಯ ಹತ್ತಿರ ಬೃಹತ್ ಪ್ರತಿಭಟನಾ ಸಭೆ ಜರುಗಿಸಲು ನಿರ್ಧರಿಸಲಾಗಿದೆ.
ತಂಡಾಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗೆಯ ಈಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂಧ್ರ ನಾಯ್ಕ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಯಿತು.
ಶಿವಮೊಗ್ಗ ಶರಾವತಿ ಅಭಯಾರಣ್ಯಕ್ಕೆ ಸಿದ್ದಾಪುರ ತಾಲೂಕಿನ ನಿಲ್ಕುಂದ, ಮುಳಗುಂದ, ಹಳ್ಳಿಬೈಲ್, ಉಂಚಳ್ಳಿ, ಶಿವಳಮನೆ, ಹುಕ್ಕಳಿ, ಶಜಗುಳಿ, ನೈಗಾರ, ಕಡವಾಡ, ಹೊನ್ನೆಕೊಪ್ಪ, ನೀರಗೋಡ, ಸುರಗಾಲ, ಹೇಮಗಾರ, ಹೆಜನಿ, ಕುಡಗುಂದ, ಮಲೆಮನೆ, ಸೂತ್ಲಮನೆ, ವಾಜಗೋಡ, ದಾನಮಾಂವ, ತೇಳಿಕೇರಿ, ಮುಂತಾದ 20 ಗ್ರಾಮಗಳ 9045.73 ಹೇಕ್ಟೇರ್ ಪ್ರದೇಶ ಸೇರ್ಪಡೆಗೊಂಡಿರುವುದರಿಂದ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಕಳೆದ ವರ್ಷ ಜೂನ್ 7 ರಂದು ಸರಕಾರ ಆದೇಶ ಹೊರಡಿಸಿದರೂ, ಇಲ್ಲಿಯವರೆಗೂ ಜನರಿಗೆ ಕತ್ತಲೆಯಲ್ಲಿ ಇಟ್ಟು ಯೋಜನೆ ಜಾರಿಗೆ ಸರಕಾರ ನಿರ್ಧರಿಸುವುದಕ್ಕೆ ಸಭೆಯಲ್ಲಿ ಸರಕಾರದ ನೀತಿಯನ್ನು ಖಂಡಿಸಲಾಯಿತು. ಅಲ್ಲದೇ ಸರಕಾರದ ಜನವಿರೋಧಿ ನೀತಿಯನ್ನು ಬಹಿರಂಗ ಹಾಗೂ ಕಾನೂನಾತ್ಮಕ ಹೋರಾಟದ ಮೂಲಕ ಪ್ರತಿಭಟಿಸಲು ಸಭೆ ನಿರ್ಧರಿಸಿದೆ.
ಸಭೆಯನ್ನು ಉದ್ದೇಶಿಸಿ ಸೀತಾರಾಮ ಲಿಂಗ ಗೌಡ ಹುತ್ಗಾರ, ಶೇಖರ ನಾಯ್ಕ ಹೆಗ್ಗರಣಿ, ನಾಗಪತಿ ಗೌಡ ಹುತ್ಗಾರ, ಸೀತಾರಾಮ ಹುಲಿಯಾ ಗೌಡ ಹುಕ್ಕಳಿ, ಸುರೇಶ ಹೆಗಡೆ ತಂಡಾಗುಂಡಿ ಮುಂತಾದವರು ಮಾತನಾಡಿದರು.
ವೇದಿಕೆಯ ಮೇಲೆ ಲಿಂಗ ಬೀರಾ ಗೌಡ ನಿಲ್ಕುಂದ, ಗಣಪ ಯಂಕ ಗೌಡ ತಾರಿಮನೆ, ವೆಂಕಟಮ ನಾಯ್ಕ ಕೊಪ್ಪದಜಡಿ, ಉಪಸ್ಥಿತರಿದ್ದರು. ಹರಿಹರ ನಾಯ್ಕ ಸ್ವಾಗತಿಸಿ ವಂದಿಸಿದರು.
ಜನರ ತೀವ್ರ ಆಕ್ಷೇಪ:
ಜನರಿಗೆ ಕತ್ತಲೆಯಲ್ಲಿ ಇಟ್ಟು, ಜನರ ವಿಶ್ವಾಸ ತೆಗೆದುಕೊಳ್ಳದೇ ಏಕಾಎಕಿಯಾಗಿ ಅಭಯಾರಣ್ಯ ಪ್ರದೇಶಕ್ಕೆ ಗ್ರಾಮಗಳ ಸೇರ್ಪಡೆಗೆ ಜನರ ತೀವ್ರ ಆಕ್ಷೇಪವಿದ್ದು, ಈ ಯೋಜನೆಯಿಂದ ಸ್ಥಳೀಕರು ಭಯ ಭೀತರಾಗಿದ್ದಾರೆ. ಸರಕಾರ ಈ ದಿಶೆಯಲ್ಲಿ ಜನರ ವಿಶ್ವಾಸಗಳಿಸಬೇಕೆಂದು ತಂಡಾಗುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಹರ ನಾಯ್ಕ ಸಭೆಯಲ್ಲಿ ಆಕ್ಷೇಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *