ಶರಾವತಿ ಅಭಯಾರಣ್ಯ-ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಶರಾವತಿ ಅಭಯಾರಣ್ಯಕ್ಕೆ ಜನವಸತಿ ಪ್ರದೇಶ ಸೇರಿಸುವ ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೆಚ್ಚುವರಿಯಾಗಿ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರಿಸುವ ಸರ್ಕಾರದ ಅವೈಜ್ಞಾನಿಕ ಮತ್ತು ಸಂವಿಧಾನವಿರೋಧಿ ಕ್ರಮವನ್ನು ಕೈಬಿಡಲು ಉತ್ತರಕನ್ನಡ ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ರಾಜ್ಯಪಾಲರಿಗೆ ಮನವಿ ಮಾಡಿದೆ.
ರಾಜ್ಯ ಸರ್ಕಾರವು ಶರಾವತಿ ವನ್ಯಜೀವಿ ಅಭಯಾರಣ್ಯಕ್ಕೆ ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ 20ಸಾವಿರ ಹೆಕ್ಟೇರ್ ಪ್ರದೇಶವನ್ನು ಸೇರಿಸಿದೆ. ಹೀಗೆ ಜನವಸತಿ ಇರುವ ಪ್ರದೇಶವನ್ನು ನಿಷೇಧಿತ ವನ್ಯಜೀವಿ ಅಭಯಾರಣ್ಯಕ್ಕೆ ಸೇರಿಸಲು ಸಾರ್ವಜನಿಕ ಅಹವಾಲು ಕೇಳಬೇಕು. ಅಭಯಾರಣ್ಯ ವಿಸ್ತರಣೆ ಬಗ್ಗೆ ಜನಜಾಗೃತಿ ಮೂಡಿಸಬೇಕು.ಈ ನಿಯಮಗಳನ್ನು ಪಾಲಿಸದೆ. ಅರಣ್ಯ ಅತಿಕ್ರಮಣದಾರರ ಹಕ್ಕುಗಳನ್ನು ಮನ್ನಿಸದೆ. ಭಾರತೀಯ ನಾಗರಿಕರು ಸ್ವತಂತ್ರವಾಗಿ ಭಯಮುಕ್ತರಾಗಿ ಬದುಕುವ ಸ್ವಾತಂತ್ರ್ಯವನ್ನು ಹರಣ ಮಾಡಿ ಈ ಪ್ರಕ್ರಿಯೆ ನಡೆಸಲಾಗಿದೆ.
ಅಧಿಸೂಚನೆಯಂತೆ ಸಿದ್ಧಾಪುರ ತಾಲೂಕಿನ ನಿಲ್ಕುಂದ, ಮುಳಗುಂದ. ಹಳ್ಳಿಬೈಲ್ ಹುಕ್ಕಳಿ, ಶಿವಳಮನೆ, ಉಂಚಳ್ಳಿ, ನೇರಗೋಡ, ಗಿಜಗುಳಿ, ನೈಗಾರ ಕಡವಾಡ, ಹೊನ್ನೆಕೊಪ್ಪ, ಸೂರಗಾಲ, ಹೇಮಗಾರ್ ಹೆಜ್ಜನಿ, ಕುಡಗುಂದ, ಮಲೆಮನೆ ಸುತ್ತಲಮನೆ, ವಾಜಗೋಡ್, ದಾನಮಾಂವ್, ತೇಳಿಕೇರಿ, ಸೇರಿದ ಅನೇಕ ಗ್ರಾಮಗಳೊಂದಿಗೆ ಉತ್ತರಕನ್ನಡ ಜಿಲ್ಲೆಯ ಇತರ ತಾಲೂಕುಗಳು ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳನ್ನು ಸೇರಿಸಲಾಗಿದೆ.
ಈ ಅವೈಜ್ಞಾನಿಕ, ಕಾನೂನುಬಾಹೀರ ಯೋಜನೆಯಿಂದ ರಾಜ್ಯದ ಜನರು, ಜನಜೀವನಕ್ಕೆ ಅಪಾಯವಿದ್ದು, ಜನವಿರೋಧಿಯಾಗಿರುವ ಈ ಪ್ರಸ್ತಾಪ ಮತ್ತು ಆದೇಶದ ಒಟ್ಟಾರೆ ಪ್ರಕ್ರೀಯೆಯನ್ನು ರದ್ದು ಪಡಿಸಿ ಜನಸಾಮಾನ್ಯರಿಗೆ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ನಿರ್ಧೇಶನ ನೀಡಲು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದೇ ಹಿನ್ನೆಲೆಯಲ್ಲಿ ಮಂಗಳವಾರ ತಂಡಾಗುಂಡಿ ಕುಳ್ಳೆಯಲ್ಲಿ ಪ್ರತಿಭಟನಾರ್ಯಾಲಿ ಮತ್ತು ಸಭೆಗಳು ನಡೆದಿವೆ.ಈ ಸಭೆಯಲ್ಲಿ ಶರಾವತಿ ವನ್ಯಜೀವಿ ಅಭಯಾರಣ್ಯದಿಂದ ಉತ್ತರಕನ್ನಡ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೊರಗಿಡಬೇಕೆಂದು ಒತ್ತಾಯಿಸಲಾಗಿದ್ದು ಇದಕ್ಕಾಗಿ ಜನಾಂದೋಲನ ಮತ್ತು ಕಾನೂನು ಹೋರಾಟಕ್ಕೆ ಅಣಿಯಾಗುವ ಮೊದಲು ಒಂದು ತಿಂಗಳ ಕಾಲಮಿತಿಯಲ್ಲಿ ಈ ಹೆಚ್ಚುವರಿ ಜನವಸತಿ ಪ್ರದೇಶ ಸೇರ್ಪಡೆಯ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *