ಶರಾವತಿ ಅಭಯಾರಣ್ಯ-ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಶರಾವತಿ ಅಭಯಾರಣ್ಯಕ್ಕೆ ಜನವಸತಿ ಪ್ರದೇಶ ಸೇರಿಸುವ ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೆಚ್ಚುವರಿಯಾಗಿ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರಿಸುವ ಸರ್ಕಾರದ ಅವೈಜ್ಞಾನಿಕ ಮತ್ತು ಸಂವಿಧಾನವಿರೋಧಿ ಕ್ರಮವನ್ನು ಕೈಬಿಡಲು ಉತ್ತರಕನ್ನಡ ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ರಾಜ್ಯಪಾಲರಿಗೆ ಮನವಿ ಮಾಡಿದೆ.
ರಾಜ್ಯ ಸರ್ಕಾರವು ಶರಾವತಿ ವನ್ಯಜೀವಿ ಅಭಯಾರಣ್ಯಕ್ಕೆ ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ 20ಸಾವಿರ ಹೆಕ್ಟೇರ್ ಪ್ರದೇಶವನ್ನು ಸೇರಿಸಿದೆ. ಹೀಗೆ ಜನವಸತಿ ಇರುವ ಪ್ರದೇಶವನ್ನು ನಿಷೇಧಿತ ವನ್ಯಜೀವಿ ಅಭಯಾರಣ್ಯಕ್ಕೆ ಸೇರಿಸಲು ಸಾರ್ವಜನಿಕ ಅಹವಾಲು ಕೇಳಬೇಕು. ಅಭಯಾರಣ್ಯ ವಿಸ್ತರಣೆ ಬಗ್ಗೆ ಜನಜಾಗೃತಿ ಮೂಡಿಸಬೇಕು.ಈ ನಿಯಮಗಳನ್ನು ಪಾಲಿಸದೆ. ಅರಣ್ಯ ಅತಿಕ್ರಮಣದಾರರ ಹಕ್ಕುಗಳನ್ನು ಮನ್ನಿಸದೆ. ಭಾರತೀಯ ನಾಗರಿಕರು ಸ್ವತಂತ್ರವಾಗಿ ಭಯಮುಕ್ತರಾಗಿ ಬದುಕುವ ಸ್ವಾತಂತ್ರ್ಯವನ್ನು ಹರಣ ಮಾಡಿ ಈ ಪ್ರಕ್ರಿಯೆ ನಡೆಸಲಾಗಿದೆ.
ಅಧಿಸೂಚನೆಯಂತೆ ಸಿದ್ಧಾಪುರ ತಾಲೂಕಿನ ನಿಲ್ಕುಂದ, ಮುಳಗುಂದ. ಹಳ್ಳಿಬೈಲ್ ಹುಕ್ಕಳಿ, ಶಿವಳಮನೆ, ಉಂಚಳ್ಳಿ, ನೇರಗೋಡ, ಗಿಜಗುಳಿ, ನೈಗಾರ ಕಡವಾಡ, ಹೊನ್ನೆಕೊಪ್ಪ, ಸೂರಗಾಲ, ಹೇಮಗಾರ್ ಹೆಜ್ಜನಿ, ಕುಡಗುಂದ, ಮಲೆಮನೆ ಸುತ್ತಲಮನೆ, ವಾಜಗೋಡ್, ದಾನಮಾಂವ್, ತೇಳಿಕೇರಿ, ಸೇರಿದ ಅನೇಕ ಗ್ರಾಮಗಳೊಂದಿಗೆ ಉತ್ತರಕನ್ನಡ ಜಿಲ್ಲೆಯ ಇತರ ತಾಲೂಕುಗಳು ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳನ್ನು ಸೇರಿಸಲಾಗಿದೆ.
ಈ ಅವೈಜ್ಞಾನಿಕ, ಕಾನೂನುಬಾಹೀರ ಯೋಜನೆಯಿಂದ ರಾಜ್ಯದ ಜನರು, ಜನಜೀವನಕ್ಕೆ ಅಪಾಯವಿದ್ದು, ಜನವಿರೋಧಿಯಾಗಿರುವ ಈ ಪ್ರಸ್ತಾಪ ಮತ್ತು ಆದೇಶದ ಒಟ್ಟಾರೆ ಪ್ರಕ್ರೀಯೆಯನ್ನು ರದ್ದು ಪಡಿಸಿ ಜನಸಾಮಾನ್ಯರಿಗೆ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ನಿರ್ಧೇಶನ ನೀಡಲು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದೇ ಹಿನ್ನೆಲೆಯಲ್ಲಿ ಮಂಗಳವಾರ ತಂಡಾಗುಂಡಿ ಕುಳ್ಳೆಯಲ್ಲಿ ಪ್ರತಿಭಟನಾರ್ಯಾಲಿ ಮತ್ತು ಸಭೆಗಳು ನಡೆದಿವೆ.ಈ ಸಭೆಯಲ್ಲಿ ಶರಾವತಿ ವನ್ಯಜೀವಿ ಅಭಯಾರಣ್ಯದಿಂದ ಉತ್ತರಕನ್ನಡ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೊರಗಿಡಬೇಕೆಂದು ಒತ್ತಾಯಿಸಲಾಗಿದ್ದು ಇದಕ್ಕಾಗಿ ಜನಾಂದೋಲನ ಮತ್ತು ಕಾನೂನು ಹೋರಾಟಕ್ಕೆ ಅಣಿಯಾಗುವ ಮೊದಲು ಒಂದು ತಿಂಗಳ ಕಾಲಮಿತಿಯಲ್ಲಿ ಈ ಹೆಚ್ಚುವರಿ ಜನವಸತಿ ಪ್ರದೇಶ ಸೇರ್ಪಡೆಯ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *