ಸ್ವಚ್ಛ,ಜನಪರ, ಪ್ರಾಮಾಣಿಕ ರಾಜಕಾರಣಕ್ಕಾಗಿ ಕರ್ನಾಟಕ ರಾಷ್ಟ್ರ ಸಮೀತಿ

ರಾಜಕಾರಣ,ಜನಸೇವೆ ಯಲ್ಲಿ ಯಾರೆಲ್ಲಾ ಇರಬಾರದೋ, ಯಾರ್ಯಾರು ಬರಬಾರದೋ ಅಥವರೆಲ್ಲಾ ರಾಜಕಾರಣಿಗಳಾಗಿ ಈಗಿನ ವ್ಯವಸ್ಥೆ ಕಲುಷಿತಗೊಂಡಿದೆ. ಈ ಸ್ಥಿತಿಯಲ್ಲಿ ಸ್ವಚ್ಛ,ಪ್ರಾಮಾಣಿಕ, ಜನಪರ ರಾಜಕಾರಣ ಮಾಡಬಯಸುವವರಿಗಾಗಿ ಕರ್ನಾಟಕ ರಾಷ್ಟ್ರಸಮೀತಿ ಹೊಸ ನಾಯಕತ್ವ, ಹೊಸ ಆಲೋಚನೆ, ಯೋಜನೆಗಳೊಂದಿಗೆ ರಾಜ್ಯದಲ್ಲಿ ಕೆಲಸಮಾಡುವ ಸಂಕಲ್ಫಮಾಡಿದೆ ಎಂದು ಕರ್ನಾಟಕ ರಾಷ್ಟ್ರ ಸಮೀತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಹೇಳಿದರು.
ಅವರು ಇಲ್ಲಿಯ ನೌಕರರ ಸಭಾಭವನದಲ್ಲಿ ನಡೆದ ನಾಯಕತ್ವ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾನವ ಸಂವೇದನೆ ಇಲ್ಲದ ಜೆ.ಸಿ.ಬಿ.
(ಜಾದಳ,ಕಾಂಗ್ರೆಸ್, ಬಿ.ಜೆ.ಪಿ.) ರಾಜಕಾರಣದಿಂದಾಗಿ ಜನರಲ್ಲಿ ಸಿನಿಕತೆ ಪ್ರಾರಂಭವಾಗಿದೆ. ಈ ವ್ಯವಸ್ಥೆ ಬದಲಿಸುವ ಸಂಕಲ್ಫದಿಂದಲೇ ಕರ್ನಾಟಕ ರಾಷ್ಟ್ರಸಮೀತಿ ಪ್ರಾರಂಭವಾಗಿದೆ. ಹೊಸ ರಾಜಕೀಯ ಪರಿಭಾಷೆ ಅರ್ಥಮಾಡಿಕೊಳ್ಳುವವರು, ಹಣ-ಹೆಂಡದ ಹಂಗಿಲ್ಲದೆ ನಾಯಕತ್ವ, ರಾಜಕೀಯ ಮಾಡುವವರು ಮಾತ್ರ ಕೆಆರೆಸ್‍ಗೆ ಬರಬೇಕು ಎಂದರು.
ಎಲ್ಲಾ ಪಕ್ಷಗಳು ಅಮಲಿನ ರಾಜಕೀಯ ಪ್ರಯೋಗಮಾಡುತ್ತಿರುವ ಸಂದರ್ಭದಲ್ಲಿ ಹೊಸ ಆಶಾವಾದದಿಂದ ಬರುತ್ತಿರುವ ರವಿಕೃಷ್ಣ ರೆಡ್ಡಿ ಮತ್ತು ಅವರ ಕರ್ನಾಟಕ ರಾಷ್ಟ್ರ ಸಮೀತಿ ಮೇಲೆ ಜನ ಭರವಸೆ ಕಾಣುವಂತಾಗಿದೆ ಎಂದು ಈ ಕಾರ್ಯಾಗಾರ ಉದ್ಘಾಟಿಸಿದ ಪತ್ರಕರ್ತ ಗಣೇಶ್ ಭಟ್ ಹೇಳಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸಮಾಜಮುಖಿ ಕನ್ನೇಶ್ ಮಾತನಾಡಿ ರಾಜ್ಯದ ಜನರ ಹೊಸ ನಿರೀಕ್ಷೆಯಂತೆ, ಹೊಸ ನಿರೀಕ್ಷೆ ಭರವಸೆಗಳೊಂದಿಗೆ ಬಂದಿರುವ ಕರ್ನಾಟಕ ರಾಷ್ಟ್ರಸಮೀತಿ ಜನರ ಕಷ್ಟಕಾಲದ ಒಳ್ಳೆಯ ಆಯ್ಕೆ, ಜನಪರ ಕೆಲಸಗಳಿಂದ, ಹೋರಾಟಗಳಿಂದ ರಾಜಕಾರಣ ಸಮಾಜಮುಖಿಯಾಗಬೇಕಾದ ಈ ತುರ್ತಿನ ಕಾಲದಲ್ಲಿ ರವಿಕೃಷ್ಣ ರೆಡ್ಡಯಂಥವರ ನಾಯಕತ್ವವನ್ನು ಒಪ್ಪಿ, ಭರವಸೆ ಇಡಬಹುದು ಎಂದು ಶ್ಲಾಘಿಸಿದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಮಲ್ಲಿಕಾರ್ಜುನ ಭಟ್ಟರಹಳ್ಳಿ ಕರ್ನಾಟಕ ರಾಷ್ಟ್ರ ಸಮೀತಿಯಿಂದ ನಾಯಕತ್ವ ಶಿಬಿರ ನಡೆಸಿ ಸ್ವಚ್ಛ, ಪ್ರಾಮಾಣಿಕ ನಾಯಕತ್ವ ರೂಪಿಸುವುದು ಮತ್ತು ಮತದಾರರಿಗೂ ಜನಪ್ರೀಯ ರಾಜಕಾರಣಕ್ಕಿಂತ ಜನಪರ ರಾಜಕಾರಣದ ಮಹತ್ವ ಹೆಚ್ಚು ಎಂದು ಪರಿಚಯಿಸುವುದಾಗಿದೆ ಎಂದರು.
ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಭಟ್ ಮತ್ತು ಸಮಾಜಮುಖಿ ಸಮೂಹದ ಅಧ್ಯಕ್ಷ ಕನ್ನೇಶ್ ಕೋಲಶಿರ್ಸಿಯವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಕರ್ನಾಟಕ ರಾಷ್ಟ್ರ ಸಮೀತಿಯ ಪ್ರಮುಖರು ವೇದಿಕೆಯಲ್ಲಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *