ಮಲೆನಾಡಿನ ಬದುಕಿನ ಆಗುಹೋಗುಗಳ ಹಂದರವೇ ಆಗಿದೆ ದಿನೇಶ ಹುಲಿಮನೆಯವರ ‘ಸಿರ್ವಂತೆ ಕ್ರಾಸ್’

ಮಲೆನಾಡಿನ ಬದುಕಿನ ಆಗುಹೋಗುಗಳ ಹಂದರವೇ ಆಗಿದೆ ದಿನೇಶ ಹುಲಿಮನೆಯವರ ‘ಸಿರ್ವಂತೆ ಕ್ರಾಸ್’ ಕಥೆಗಳ ಸಂಕಲನ..!

ದಿನೇಶ ಹುಲಿಮನೆಯವರು ಮಲೆನಾಡು ಆದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಿಮನೆಯವರು. ಹಾಗಾಗಿ ಇಲ್ಲಿ ಬರುವ ಎಲ್ಲಾ ಕಥೆಗಳೂ ದಿನೇಶ ಹಲಿಮನೆಯವರ ಮಲೆನಾಡಿನ ಕಲರವವಿದ್ದಂತೆ ಭಾಸವಾಗುತ್ತವೆ. ಭಾಸವಾಗುವುದೇನು ಬಂತು ಇದು ನಿಜವೂ ಆಗಿದೆ.
ಏಕೆಂದರೆ ಈ ದಿನೇಶ ಹುಲಿಮನೆಯವರ ಈ ‘ಸಿರ್ವಂತೆ ಕ್ರಾಸ್’ ಈ ಕಥೆಗಳ ಸಂಕಲನವು ‘ಸಿರ್ವಂತೆ ಕ್ರಾಸ್‌’ ಕಥೆಯೂ ಸೇರಿದಂತೆ ಒಟ್ಟು ೧೮ ಸಣ್ಣ ಸಣ್ಣ ಕಥೆಗಳನ್ನು ಒಳಗೊಂಡಿದೆ ಮತ್ತು ಮಲೆನಾಡಿನಲ್ಲಿ ನಡೆಯುವ ವಿದ್ಯಮಾನಗಳಾಗಿವೆ ಇಲ್ಲಿಯ ಕಥೆಗಳು.

ದಿನೇಶ ಹಲಿಮನೆಯವರು ಮಲೆನಾಡನ್ನು ಬಿಟ್ಟು ಇರಲಾರರು. ಹಾಗಾಗಿಯೇ ಇವರ ಕಥೆಗಳು ಮಲೆನಾಡಿನ ಬದುಕು-ಬವಣೆಗಳನ್ನು ತೆರೆದಿಡುತ್ತವೆ ಇಲ್ಲಿನ ಕಥೆಗಳು.
ದಿನೇಶ ಹುಲಿಮನೆಯವರೇ ಹೇಳುವಂತೆ ‘ನನ್ನ ಬದುಕು-ಬರಹ ಮಲೆನಾಡನ್ನು ಬಿಟ್ಟು ಇರಲಾರವು. ಹಾಗಾಗಿಯೇ ಇಲ್ಲಿಯ ಕಥೆಗಳೆಲ್ಲಾ ಮಲೆನಾಡಿನ ಆಗು-ಹೋಗಗಳಾವೆ’ ಎಂದು.

ಈ ಕಥೆಗಳ ಸಂಕಲನದಲ್ಲಿಯ ‘ಸಿರ್ವಂತೆ ಕ್ರಾಸ್’ ‘ಮಧ್ಯ ರಾತ್ರಿಯ ಮಾತು’ನಂತಹ ಕಥೆಗಳು ಮಲೆನಾಡಿನ ಬೆಟ್ಟಗುಡ್ಡಗಳನ್ನು ಹತ್ತಿಳಿದು, ಅಂಕು-ಡೊಂಕಾದ ಮಣ್ಣು ರಸ್ತೆಗಳಲ್ಲಿ ಸಂಚರಿಸಿದರೆ ‘ಸ್ಮಾರ್ಟ್ ಜಗತ್ತು’ ‘ಕನ್ನಡದ ಕಂದ’ದಂತಹ ಕೆಲ ಚುಟುಕು ಕಥೆಗಳು ಬೆಂಗಳೂರು ಕಾಂಕ್ರೀಟ್ ಹಾದಿಯಲ್ಲಿ ನುಸುಳುವಂತೆ ಭಾಷವಾಗುತ್ತವೆ.

‘ಅರ್ಧ ಸತ್ಯ!’, ‘ಎಡ-ಬಲಗಳ ನಡುವೆ’, ‘ತಳವಾರ ತಿಮ್ಮ’, ‘ಪ್ರಜಾ ಸಮಾಧಿ’, ‘ಕೃಷ್ಣನ ಪ್ರಣಯ ಪ್ರಸಂಗ’, ‘ಕಿಲಾರ’ದ ಹುಡುಗರು’ ಒಟ್ಟಾರೆ ಎಲ್ಲಾ ಕಥೆಗಳೂ ಓದಿಸಿಕ್ಕೊಂಡು ಹೋಗುವ ಕಥೆಗಳಷ್ಟೇ ಅಲ್ಲ,‌‌ ವಾಸ್ತವ ಬದುಕಿನ ಪಯಣವೇ ಆಗಿವೆ ಎಂದು ನನ್ನ ಅನಿಸಿಕೆ.

‘ಕಡಲ ಮುತ್ತು’ ‘ಕುಮಟಾದ ಹಳೇ ಬಸ್ ನಿಲ್ದಾಣ’ದಂತಹ ಕಥೆಗಳು ಕರಾವಳಿಯ ಬದುಕನ್ನು ಪರಿಚಯಿಸುತ್ತವೆ.

ಇನ್ನುಳಿದ ಕಥೆಗಳು ಮನುಷ್ಯ ಸಹಜವಾದ ಪ್ರಾಕೃತಿಕ ಆಶೆ-ಅತಿಯಾಶೆ, ಪ್ರೀತಿ-ಪ್ರಣಯ, ಜೀವನ-ಜಂಜಾಟ, ಹಲವಾರು ಬಗೆಯ ಎಡರು-ತೊಡರುಗಳ ಮೇಲೆ ಇಲ್ಲಿಯ ಕಥೆಗಳನ್ನು ಹೆಣದಿದ್ದಾರೆ ದಿನೇಶ ಹಲಿಮನೆಯವರು.

ನಂಬಿಕೆಯೇ ಜೀವನಾಧಾರ, ‘ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡುವುದೇ ಜೀವನ’ ಎಂಬ ಕವಿ ಗೋಪಾಲಕೃಷ್ಣ ಅಡಿಗರ ವಾಣಿಯಂತೆ ಜೀವನದಲ್ಲಿ ಬರುವ ಕೆಲವು ಸಣ್ಣಪುಟ್ಟ ವಿಚಾರಗಳೇ ಇಲ್ಲಿಯ ಕಥಾವಸ್ತು ಅಲ್ಲದೇ ಇಲ್ಲಿಯ ಕಥೆಗಳು ನನ್ನ ದೃಷ್ಟಿಯಲ್ಲಿ ಕೇವಲ ಕಾಲ್ಪನಿಕವಲ್ಲ. ವಾಸ್ತವವೂ ಆದ ಬದುಕಿನ ಹಲವಾರು ಮಜಲುಗಳು.
ಕಥೆಗಳಲ್ಲಿ ಹೆಚ್ಚು, ಹೆಚ್ಚು ವಿಷಯಗಳನ್ನು ತರಲಾಗದಿದ್ದರೂ ದಿನನಿತ್ಯ ನಡೆಯುವ ಬದುಕಿನ ಘಟಕಗಳ ಹಂದರವೇ ಆಗಿದೆ ಇಲ್ಲಿಯ ಕಥೆಗಳ ವಸ್ತು.

ಹೀಗೆಯೇ ಬರುವ ಇಲ್ಲಿನ ಕಥೆಗಳು ವಿಶಿಷ್ಟ ಶೈಲಿಯದ್ದಾಗಿವೆ. ಇಲ್ಲಿಯ ಎಲ್ಲಾ ಕಥೆಗಳು ಓದುಗರನ್ನು ಹಿಡಿದಿಡುತ್ತವೆ.
ದಿನೇಶ ಹಲಿಮನೆಯವರು ಹವ್ಯಾಸಿ ಲೇಖಕರಾಗಿ ಕಳೆದ ನಾಲ್ಕೈದು ವರ್ಷಗಳಲ್ಲಿ ಬರೆದ ಕಥೆಗಳು ಇವು. ಒಂದೆರಡು ನೀಳ್ಗತೆಯೂ ಸೇರಿದಂತೆ ಸಣ್ಣ-ಪುಟ್ಟ ಕಥೆಗಳೂ ಸೇರಿದಂತೆ ಒಟ್ಟು ಹದಿನೆಂಟು ಕಥೆಗಳು ಇಲ್ಲಿವೆ. ಇದು ಈ ದಿನೇಶ ಹಲಿಮನೆಯವರ ಮೊದಲ ಕಥೆಗಳ ಸಂಕಲನವಾಗಿದೆ. ಮೊದಲ ಕಥಾ ಸಂಕಲನ ಮೂಲಕವೇ ಇವರು ಒಬ್ಬ ಉತ್ತಮ ಕಥೆಗಾರರಾಗಿ ಹೊರಹೊಮ್ಮಿದ್ದಾರೆ. ಇವರಿಂದ ಇನ್ನೂ ಇಂತಹ ಕಥಾ ಬರಹವನ್ನು ನಿರೀಕ್ಷಿಸಬಹುದು.
ಅಂಕೋಲಾದ ಶಿಕ್ಷಕಿಯಾದ ಶುಭಾ ಪಟಗಾರರವರ ಬೆನ್ನುಡಿ ಇದೆ.
‌ –ಕೆ.ಶಿವು.ಲಕ್ಕಣ್ಣವರ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *