ಸುವರ್ಣಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ- ಸಹಕಾರಿ ಪಠ್ಯಕ್ರಮದ ಅಗತ್ಯ ಪ್ರತಿಪಾದನೆ

ಸಿದ್ದಾಪುರ ತಾಲೂಕಿನ ಬಿದ್ರಕಾನ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಸುವರ್ಣಮಹೋತ್ಸವದ ಅಂಗವಾಗಿ ವಿಚಾರ ಗೋಷ್ಠಿ ನಡೆಯಿತು.
ಸಹಕಾರಿ ಸಂಘಗಳಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ ಕುರಿತು ಕೆಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಮಾತನಾಡಿದರು.ಸಹಕಾರಿ ಸಂಘಗಳು ಬಂಡವಾಳಗಾರರ ಸಂಸ್ಥೆ ಅಲ್ಲ. ಬಳಕೆದಾರರ ಸಂಸ್ಥೆ. ಸಹಕಾರಿ ಸಂಘದಲ್ಲಿ ಸಹಕಾರಿ ತತ್ವವನ್ನು ಅರಿತವರು ಇದ್ದರೆ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ. ಸಂಘದಲ್ಲಿ ಸದಸ್ಯರು ಭಾಗವಹಿಸುವುದು ಮುಖ್ಯ. ಸದಸ್ಯತ್ವ ಪಡೆದವನು ಜವಾಬ್ದಾರಿಯಿಂದ ವ್ಯವಹಾರ ಮಾಡಬೇಕು. ಯಾವುದೇ ಸಹಕಾರಿ ಸಂಘ ವ್ಯಕ್ತಿ ಆಧಾರಿತವಾಗಿರಬಾರದು. ಕಾನೂನು ಚೌಕಟ್ಟಿನಲ್ಲಿ ಇರಬೇಕು. ಸಹಕಾರಿ ಸಂಘಗಳ ಕುರಿತು ಪಠ್ಯವಿಷಯದಲ್ಲಿ ಪಾಠಗಳು ಇದ್ದರೆ ಯುವಕರಿಗೆ ಹೆಚ್ಚಿನ ಜ್ಞಾನ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದರು.
ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಕೆ.ರಾಮಪ್ಪ ಸದಸ್ಯರ ಅರಿವು ಮತ್ತು ಸಹಕಾರಿ ಕಾನೂನು ಕುರಿತು ಮಾತನಾಡಿ ಸಹಕಾರಿ ಸಂಘಗಳು ಲಾಭಮಾಡುವ ಉದ್ದೇಶವನ್ನು ಮಾತ್ರ ಹೊಂದದೆ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಸಂಘದಲ್ಲಿ ನಾಮಕಾವಸ್ಥೆ ಸದಸ್ಯರಾಗಿದ್ದರೆ ಏನು ಪ್ರಯೋಜನ ಇಲ್ಲ. ಸಂಘದ ಕುರಿತು ಕಳಕಳಿ ಉಳ್ಳವರಾಗಿರಬೇಕು. ಸಂಸ್ಥೆ ಉತ್ತಮವಾಗಿ ಬೆಳೆಯಬೇಕಾದರೆ ದಕ್ಷ ಆಡಳಿತ ಮಂಡಳಿ, ನಿಷ್ಠಾವಂತ ಸಿಬ್ಬಂದಿ ಹಾಗೂ ಪ್ರಜ್ಞಾವಂತ ಸದಸ್ಯರು ಇರಬೇಕು ಎಂದು ಹೇಳಿ ಸಂಘದಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ, ಮತದಾನದ ಕುರಿತು ಮಾತನಾಡಿದರು.
ಕೃಷಿ ತಜ್ಞ ವಿ.ಎಂ.ಹೆಗಡೆ ಕೃಷಿಯಲ್ಲಿ ಆಧುನಿಕತೆಯ ಅಳವಡಿಕೆ ಕುರಿತು ಮಾತನಾಡಿದರು. ಸಂಘದ ಅಧ್ಯಕ್ಷ ಪರಮೇಶ್ವರ ಹೆಗಡೆ ಹುಲಿಮಕ್ಕಿ ಅಧ್ಯಕ್ಷತೆವಹಿಸಿದ್ದರು. ಆರ್.ಎಸ್.ಹೆಗಡೆ ತುಪ್ಪದ, ವೆಂಕಟ್ರಮಣ ಎಂ.ಹೆಗಡೆ ಉಳ್ಳಾನೆ,ಎಲ್.ಕೆ.ಹೆಗಡೆ ಉಳ್ಳಾನೆ,ಶ್ರೀಕಾಂತ ಭಟ್ಟ ಚಟ್ನಳ್ಳಿ, ಪ್ರಕಾಶ ಹೆಗಡೆ ಮುತ್ತಿಗೆ ಉಪಸ್ಥಿತರಿದ್ದರು.ಭಾಸ್ಕರ ಹೆಗಡೆ ಕೊಡ್ಗಿಬೈಲ್ ಸ್ವಾಗತಿಸಿದರು. ಡಿ.ಜಿ.ಭಟ್ಟ ಮುತ್ತಿಗೆ ನಿರ್ವಹಿಸಿದರು. ಮಂಜುನಾಥ ಗೌಡ ವಂದಿಸಿದರು.

ಸುವರ್ಣಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ
ಸಿದ್ದಾಪುರತಾಲೂಕಿನ ಬಿದ್ರಕಾನ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ಮಾ.15ರಂದು ನಡೆಯಬೇಕಾಗಿದ್ದ ಸುವರ್ಣ ಮಹೋತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಕರೊನಾ ಸಾಂಕ್ರಾಮಿಕ ರೋಗದ ಹರಡುವಿಕೆಯ ಹಿನ್ನೆಲೆಯಲ್ಲಿ ಸಭೆ, ಸಮಾರಂಭಗಳನ್ನು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಪರಮೇಶ್ವರ ಸುಬ್ರಾಯ ಹೆಗಡೆ ಹುಲಿಮಕ್ಕಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೋಗರಸ್ತೆಯಲ್ಲಿ ರಿಕ್ಷಾ ಪಲ್ಟಿ ಒಂದು ಸಾವು, 7 ಜನರಿಗೆ ಗಾಯ
ಸಿದ್ದಾಪುರ,ಮಾ.13- ಜನರು ಪ್ರಯಾಣಿಸುತಿದ್ದ ರಿಕ್ಷಾ ಒಂದಕ್ಕೆ ಎದುರಿನಿಂದ ಬಂದ ದನ ತಪ್ಪಿಸಲು ಪ್ರಯತ್ನಿಸಿದ ರಿಕ್ಷಾ ಪಲ್ಟಿಯಾಗಿ ಇದರಲ್ಲಿ ಪ್ರಯಾಣಿಸುತಿದ್ದ 8ಜನರಲ್ಲಿ ಒಬ್ಬರು ಮೃತರಾಗಿ 7 ಜನರಿಗೆ ಗಾಯಗಳಾದ ದುರ್ಘಟನೆ ಇಂದು ಇಲ್ಲಿಯ ಜೋಗರಸ್ತೆಯ ಕುಂಬಾರಕುಳಿ ಬಳಿ ನಡೆದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *