ಡಿ.ಕೆ.ಶಿ.ಪರಿಣಾಮ:ಪಕ್ಷತ್ಯಜಿಸಲಿದ್ದಾರಾ ಜೆ.ಡಿ.ಎಸ್.ನಾಯಕರು?

ಹಲವು ಸುತ್ತಿನ ಕಸರತ್ತಿನ ನಂತರ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅಂತೂ ಇಂತೂ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿದ್ದಾರೆ.
ಡಿ.ಕೆ.ಶಿ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಲು ವಿರೋಧಿಸಿದ್ದರು ಎನ್ನಲಾದ ಕೆಲವು ಮುಖಂಡರ ಒಪ್ಪಿಗೆ ಇಲ್ಲದೆ ಶಿವಕುಮಾರ ಮತ್ತು ಸಿದ್ಧರಾಮಯ್ಯ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.
ಡಿ.ಕೆ.ಶಿವಕುಮಾರ ಸಮರ್ಥ ಮತ್ತು ವಿರೋಧಿಗಳಿಂದ ಗಾಯಗೊಂಡಿರುವ ನಾಯಕ.
ಶಿವಕುಮಾರರ ವೈಯಕ್ತಿಕ, ಸಾಮೂದಾಯಿಕ, ಇತರ ಶಕ್ತಿಗಳೆದುರು ಉಳಿದವರು ಉಳಿಯುವುದು ಕಷ್ಟ. ಇಂಥ ಡಿ.ಕೆ.ಶಿ. ಕೆ.ಪಿ.ಸಿ.ಸಿ. ಪಟ್ಟ ಏರುತ್ತಲೇ ರಾಜ್ಯ ರಾಜಕೀಯದಲ್ಲಿ ಅನೇಕ ರಾಜಕೀಯ ಲೆಕ್ಕಾಚಾರಗಳು ಪ್ರಾರಂಭವಾಗಿವೆ. ಡಿ.ಕೆ.ಶಿವಕುಮಾರ ಬಿ.ಜೆ.ಪಿ., ಜೆ.ಡಿ.ಎಸ್. ನ ಕೆಲವು ಶಾಸಕರು, ಮಾಜಿಶಾಸಕರೊಂದಿಗೆ ನಿಕಟ ಸಂಪರ್ಕದಲ್ಲಿರುವುದು ಗುಟ್ಟಿನ ವಿಷಯವೇನಲ್ಲ.
ಈಗಿನ ಮಾಹಿತಿ ಪ್ರಕಾರ ಡಿ.ಕೆ.ಶಿ. ಬಿ.ಜೆ.ಪಿ., ಜೆ.ಡಿ.ಎಸ್. ನ ಒಂದು ಡಜನ್ ಮಾಜಿ ಮತ್ತು ಹಾಲಿ ಶಾಸಕರಿಗೆ ಗಾಳ ಹಾಕಿದ್ದು ಅವರಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ, ಸಿ.ಬಿ.ಸುರೇಶ್,ಬೆಮಲ್ ಕಾಂತರಾಜ್, ರಮೇಶ್‍ಬಾಬು, ಮಧುಬಂಗಾರಪ್ಪ ಸೇರಿದ್ದಾರೆ ಎನ್ನಲಾಗುತ್ತಿದೆ.
ಊಹೆಗಳ ಪ್ರಕಾರ ಸಿ.ಬಿ.ಐ. ನಿಂದ ಡಿ.ಕೆ.ಶಿ. ಕೆಣಕಿರುವ ಬಿ.ಜೆ.ಪಿ. ಮತ್ತು ರಾಜ್ಯದ ಪರ್ಯಾಯ ಪಕ್ಷವಾಗಿರುವ ಜೆ.ಡಿ.ಎಸ್. ನಾಯಕರ ಮೇಲೆ ಡಿಕೆಶಿ ದೃಷ್ಟಿ ನೆಟ್ಟಿದ್ದಾರೆ ಎನ್ನಲಾಗುತ್ತಿದೆ.
ಇದಕ್ಕೆ ಪುಷ್ಠಿಕೊಡುವಂತೆ ಇತ್ತ ಡಿ.ಕೆ.ಶಿ. ಕೆ.ಪಿ.ಸಿ.ಸಿ. ಅಧ್ಯಕ್ಷರಾಗುತ್ತಲೇ ಅತ್ತ ಮಧುಬಂಗಾರಪ್ಪ, ಎಸ್.ಆರ್. ಶ್ರೀನಿವಾಸ ರ ಜೊತೆಗೆ ಕೆಲವರು ಇದೇವಾರ ಬೆಂಗಳೂರಿನಲ್ಲಿ ಆಪ್ತರ ಸಭೆ ಆಯೋಜಿಸಿರುವ ಸುದ್ದಿ ಮಾರ್ದನಿಸಿದೆ. ಡಿ.ಕೆ.ಶಿ. ಮತ್ತು ಸಿದ್ಧರಾಮಯ್ಯ ಸೇರಿ ದಿ.ಎಸ್.ಬಂಗಾರಪ್ಪನವರ ಶಿಷ್ಯಂದಿರು ಮತ್ತು ಮೂಲ ಜನತಾದಳದ ಕೆಲವು ನಾಯಕರನ್ನು ಸಂಪರ್ಕಿಸಲು ಯೋಜಿಸಿದ್ದು ಈ ಯೋಚನೆ ಕಾರ್ಯಾರೂಪಕ್ಕೆ ಬಂದರೆ ಕೆಲವು ಬಿ.ಜೆ.ಪಿ.ನಾಯಕರು ಮತ್ತು ಜೆ.ಡಿ.ಎಸ್. ಪ್ರಮುಖರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿದೆ.
ಡಿ.ಕೆ.ಶಿವಕುಮಾರ ಜೊತೆ ಉತ್ತಮ ಸಂಬಂಧ ಹೊಂದಿರುವ ಕೆಲವು ಕಾಂಗ್ರೆಸ್ ನಾಯಕರು, ಇತರ ಪಕ್ಷಗಳ ಮುಖಂಡರು ಡಿ.ಕೆ.ಶಿ. ಮತ್ತು ಸಿದ್ಧರಾಮಯ್ಯನವರ ಕೈ ಬಲಪಡಿಸಿ ಕಾಂಗ್ರೆಸ್ ಪುನಶ್ಚೇತನಕ್ಕೆ ಪ್ರಯತ್ನಿಸಲಿದ್ದಾರೆ ಎನ್ನಲಾಗುತ್ತಿದೆ.
ಬಿ.ಜೆ.ಪಿ.ಯ ಕೆಲವು ಅಸಂತುಷ್ಟರು ಕೂಡಾ ಕಾಂಗ್ರೆಸ್ ಬಲಪಡಿಸುವ ಹಿನ್ನೆಲೆಯಲ್ಲಿ ಸಹಕರಿಸಲು ಸಿದ್ಧರಿರುವುದಾಗಿ ತಿಳಿಸಿದ್ದು ಡಿ.ಕೆ.ಶಿ. ಕೆ.ಪಿ.ಸಿ.ಸಿ. ಅಧ್ಯಕ್ಷರಾದ ನಂತರ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಉಂಟಾಗಿದೆ ಎನ್ನಲಾಗುತ್ತಿದೆ. ಈ ಬೆಳವಣಿಗೆಗಳ ನಡುವೆ ಮಾಮು ಕುಮಾರಸ್ವಾಮಿ ಜಾದಳದ ಬಲವರ್ಧನೆಗೆ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಮೊರೆಹೋಗಿದ್ದು ಒಕ್ಕಲಿಗರ ಮೇಲಾಟ, ಲಿಂಗಾಯತರ ಒಳಜಗಳದಲ್ಲಿ ಮಾಮು ಕುಮಾರಸ್ವಾಮಿ ಮತ್ತು ಮಾಮು ಸಿದ್ಧರಾಮಯ್ಯ ಸೈಲೆಂಟಾಗಿ ವ್ಯವಹರಿಸುತ್ತಿರುವುದರಿಂದ ಡಿ.ಕೆ.ಶಿ. ಕೂಡಾ ನಿಧಾನವಾಗಿ ಹೆಜ್ಜೆಹಾಕಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಕರಾವಳಿ ಸಂಚಲನ- ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದರೆ ಮಲೆನಾಡು, ಕರಾವಳಿಯಲ್ಲಿ ಜೆ.ಡಿ.ಎಸ್.ಬರಿದಾಗುವ ಸಾಧ್ಯತೆ ಇದೆ. ಉತ್ತರಕನ್ನಡ,ದಕ್ಷಿಣಕನ್ನಡ ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಭಾಗದ ಕೆಲವು ಬಂಗಾರಪ್ಪ ಅಭಿಮಾನಿಗಳು ಮಧುಬಂಗಾರಪ್ಪ ಜೊತೆ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎನ್ನಲಾಗುತ್ತಿದೆ.

ಕಾರವಾರ ಮಾಜಾಳಿಯಲ್ಲಿ ನೀಲಿಸಮುದ್ರ!
ಪಾಚಿಗಳು ಸೃಷ್ಟಿಸುವ ನೀಲಿ
ಬೆಳಕಿನಿಂದ ನೀಲಿಯಾದ ಕಡಲು

ಕಾರವಾರ ಮಾಜಾಳಿ ಕಡಲ ತೀರದಲ್ಲಿ ರಾತ್ರಿ ವೇಳೆ ಸಮುದ್ರ ನೀಲಿಬಣ್ಣಕ್ಕೆ ತಿರುಗುತಿದ್ದು ಸ್ಥಳಿಯರ ಕುತೂಹಲಕ್ಕೆ ಕಾರಣವಾಗಿದೆ. ಸಮುದ್ರದ ನೀರು ಹಗಲು ಮತ್ತು ರಾತ್ರಿವೇಳೆ ತಿಳಿನೀಲಿಯಾಗಿ ಕಾಣುವುದು ಸಾಮಾನ್ಯ. ಆದರೆ ಮಿಂಚುಹುಳು ಸೃಷ್ಟಿಸುವ ನೀಲಿ ಬೆಳಕಿನಂಥ ಬಣ್ಣ ಸಮುದ್ರದಲ್ಲಿ ಕಾಣುವುದರಿಂದ ಸಹಜವಾಗಿ ಕುತೂಹಲ ಹೆಚ್ಚಿದೆ. ಹೀಗೆ ನೀಲಿಬಾನಿನ ರೀತಿ ರಾತ್ರಿಯಲ್ಲಿ ನೀಲಿಕಡಲಾಗಲು ಪಾಚಿಗಳು ಕಾರಣ ಎನ್ನಲಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *