ವೈಜ್ಞಾನಿಕ ಮತ್ತು ಸಾಂಪ್ರದಾಯಿಕ ಕೃಷಿಯಲ್ಲಿ ಖುಷಿ ಕಾಣುತ್ತಿರುವ ಸಿದ್ಧಾಪುರದ ಯುವಕರು

ಕೃಷಿ-ಖುಷಿ-
ಕೃಷಿಯಲ್ಲಿ ಸಾಧನೆ ಮಾಡಬೇಕೆಂದು ಬಯಸುವ ವಿರಳ ಯುವಕರಲ್ಲಿ ತಾಲೂಕಿನ ಹೆಮಟೆಮನೆಯ ಎಚ್.ಎಲ್. ವೇಣು ಮತ್ತು ಬೇಡ್ಕಣಿಯ ಜಯಪ್ರಕಾಶ ನಾಯ್ಕ ಪ್ರಮುಖ ಯುವಕರಾಗಿದ್ದಾರೆ.

ವೇಣು ಬಿದ್ರಕಾನ ಹೆಮಟೆಮನೆಯ ಯುವಕ. ಜನಾನುರಾಗಿಯಾಗಿದ್ದ ಇವರ ತಂದೆ ಎಲ್.ಕೆ.ಹೆಗಡೆ ಅಕಾಲಿಕವಾಗಿ ಮರಣ ಹೊಂದಿದ ನಂತರ ಬಿ.ಕಾಂ. ಪದವಿ ನಂತರ ಕೃಷಿಯಲ್ಲಿ ತೊಡಗಿಕೊಂಡರು. ಆಧುನಿಕ ಕೃಷಿ, ಹೊಸಪ್ರಯೋಗ ಎನ್ನದೆ ತಮ್ಮ ತೋಟದಲ್ಲಿ ಹಿಂದಿನಿಂದ ಇದ್ದ ಕಾಫಿ,ಅಡಿಕೆ, ಕಾಳು ಮೆಣಸು ಬೆಳೆಯುತ್ತಾ,ಪಶುಸಂಗೋಪನೆಯಲ್ಲಿಯೂ ಮುಂದುವರಿದರು.
ಪದವಿನಂತರ ಮಹಾನಗರ ಸೇರದೆ ಕುಟುಂಬದ ಜವಾಬ್ಧಾರಿ ಹೊತ್ತ ವೇಣು ಸ್ಥಳಿಯ ಸೇವಾ ಸಹಕಾರಿ ಸಂಘದ ಯುವ ಸದಸ್ಯರಾಗಿ ಸಾಂಪ್ರದಾಯಿಕ ಕೃಷಿ ಮಾಡುತ್ತಾ ಕೃಷಿಯಲ್ಲೇ ಖುಷಿ ಕಂಡಿದ್ದಾರೆ.
ಇವರ ತಂದೆ ಹಿಂದೆ ಕೃಷಿಯೊಂದಿಗೆ ಸ್ಥಳಿಯ ಸಾಮಾಜಿಕ ಜವಾಬ್ಧಾರಿ ನಿರ್ವಹಿಸುತ್ತಲೇ ಧಾರವಾಡದ ಕೆ.ಎಂ.ಎಫ್. ನಿರ್ಧೇಶಕರಾಗಿದ್ದರು. ತಂದೆಯಂತೆಯೇ ಮಗ ವೇಣು ಕೂಡಾ ಕೃಷಿ, ಕೌಟುಂಬಿಕ ಜವಾಬ್ಧಾರಿ, ಸೇವಾ ಸಹಕಾರಿ ಸಂಘ ದ ಮೂಲಕ ಯುವಕರು ಹಳ್ಳಿಯಲ್ಲಿದ್ದೂ ಪೇಟೆಯಲ್ಲಿರುವವರಂತೆಯೇ ಖುಷಿಯಾಗಿ ಸಂತೃಪ್ತ ಜೀವನ ಮಾಡಬಹುದೆನ್ನುವುದಕ್ಕೆ ದೃಷ್ಟಾಂತವಾಗಿದ್ದಾರೆ.
ಜಯಪ್ರಕಾಶ ನಾಯ್ಕ-
ಬೇಡ್ಕಣಿಯ ಜಯಪ್ರಕಾಶ ನಾಯ್ಕ ತಾಲೂಕಿನ ಯುವ ರೇಷ್ಮೆ ಬೆಳೆಗಾರರಾಗಿ ತಾಲೂಕಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇರುವ ಒಂದೆರಡು ಎಕರೆ ಭೂಮಿಯಲ್ಲಿ ರೇಷ್ಮೆ,ಅಡಿಕೆ,ಭತ್ತ ಬೆಳೆಯುತ್ತಿರುವ ಜಯಪ್ರಕಾಶ ಸಾಂಪ್ರದಾಯಿಕ ರೇಷ್ಮೆ ಜೊತೆಗೆ ಹೊಸ ತಳಿ ಪರಿಚಯಿಸುತ್ತಾ ತಾಲೂಕಿನ ಯುವ ಕೃಷಿಕ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ರೈತ ಕುಟುಂಬದ ಜಯಪ್ರಕಾಶ ಚಿಕ್ಕ ವಯಸ್ಸಿನಲ್ಲಿಯೇ ಕೃಷಿ-ಕೌಟುಂಬಿಕ ಜವಾಬ್ಧಾರಿ ವಹಿಸಿಕೊಂಡವರು. ರೇಷ್ಮೆಯಲ್ಲಿ ಖಾಸಗಿ ಕಂಪನಿಗಳ ಸಹಭಾಗಿತ್ವದ ಯೋಜನೆಯ ಸಿದ್ಧಾಪುರ ತಾಲೂಕಿನ ಪ್ರವರ್ತಕರು. ಕೃಷಿ- ಕುಟುಂಬಗಳ ವೈಯಕ್ತಿಕ ಜವಾಬ್ಧಾರಿಯ ಜೊತೆಗೆ ಬೇಡ್ಕಣಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮೀತಿ ಅಧ್ಯಕ್ಷರಾಗಿ ಕೆಲಸಮಾಡುತ್ತಾ ಶಾಲೆಯನ್ನು ಉತ್ತಮ ಶಾಲೆಯನ್ನಾಗಿಸಲು ಅಳಿಲು ಸೇವೆ ಸಲ್ಲಿಸುತಿದ್ದಾರೆ. ಕೃಷಿ,ವ್ಯಾಪಾರ, ಗ್ರಾಮದ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮೀತಿಯ ಅಧ್ಯಕ್ಷರಾಗಿ ಆಸಕ್ತಿಯಿಂದ ಕೆಲಸಮಾಡುತ್ತಿರುವ ಇವರ ಅಭಿರುಚಿ ಆಸಕ್ತಿಗಳಿಗೆ ಅವರ ಕೃಷಿ ಸಾಧನೆ ಮತ್ತು ಶಾಲೆಯ ವಿಭಿನ್ನ ಪ್ರಯೋಗಗಳೇ ಸಾಕ್ಷಿ.
ಕೃಷಿಯನ್ನು ಆಸಕ್ತಿಯಿಂದ ಮಾಡಿದರೆ ಅದು ಬದುಕುಕೊಡಬಹುದೆಂಬುದಕ್ಕೆ ಬಿದ್ರಕಾನ ವಿ.ಎಸ್.ಎಸ್. ನಿರ್ದೇಶಕ ವೇಣು ಮತ್ತು ಬೇಡ್ಕಣಿ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮೀತಿ ಅಧ್ಯಕ್ಷ ಜಯಪ್ರಕಾಶ ಮಾದರಿ. ಇಂಥ ಯುವಕರು ಇತರರಿಗೂ ಮಾದರಿ ಎಂದರೆ ಅತಿಶಯೋಕ್ತಿಯಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *