ವೈಜ್ಞಾನಿಕ ಮತ್ತು ಸಾಂಪ್ರದಾಯಿಕ ಕೃಷಿಯಲ್ಲಿ ಖುಷಿ ಕಾಣುತ್ತಿರುವ ಸಿದ್ಧಾಪುರದ ಯುವಕರು

ಕೃಷಿ-ಖುಷಿ-
ಕೃಷಿಯಲ್ಲಿ ಸಾಧನೆ ಮಾಡಬೇಕೆಂದು ಬಯಸುವ ವಿರಳ ಯುವಕರಲ್ಲಿ ತಾಲೂಕಿನ ಹೆಮಟೆಮನೆಯ ಎಚ್.ಎಲ್. ವೇಣು ಮತ್ತು ಬೇಡ್ಕಣಿಯ ಜಯಪ್ರಕಾಶ ನಾಯ್ಕ ಪ್ರಮುಖ ಯುವಕರಾಗಿದ್ದಾರೆ.

ವೇಣು ಬಿದ್ರಕಾನ ಹೆಮಟೆಮನೆಯ ಯುವಕ. ಜನಾನುರಾಗಿಯಾಗಿದ್ದ ಇವರ ತಂದೆ ಎಲ್.ಕೆ.ಹೆಗಡೆ ಅಕಾಲಿಕವಾಗಿ ಮರಣ ಹೊಂದಿದ ನಂತರ ಬಿ.ಕಾಂ. ಪದವಿ ನಂತರ ಕೃಷಿಯಲ್ಲಿ ತೊಡಗಿಕೊಂಡರು. ಆಧುನಿಕ ಕೃಷಿ, ಹೊಸಪ್ರಯೋಗ ಎನ್ನದೆ ತಮ್ಮ ತೋಟದಲ್ಲಿ ಹಿಂದಿನಿಂದ ಇದ್ದ ಕಾಫಿ,ಅಡಿಕೆ, ಕಾಳು ಮೆಣಸು ಬೆಳೆಯುತ್ತಾ,ಪಶುಸಂಗೋಪನೆಯಲ್ಲಿಯೂ ಮುಂದುವರಿದರು.
ಪದವಿನಂತರ ಮಹಾನಗರ ಸೇರದೆ ಕುಟುಂಬದ ಜವಾಬ್ಧಾರಿ ಹೊತ್ತ ವೇಣು ಸ್ಥಳಿಯ ಸೇವಾ ಸಹಕಾರಿ ಸಂಘದ ಯುವ ಸದಸ್ಯರಾಗಿ ಸಾಂಪ್ರದಾಯಿಕ ಕೃಷಿ ಮಾಡುತ್ತಾ ಕೃಷಿಯಲ್ಲೇ ಖುಷಿ ಕಂಡಿದ್ದಾರೆ.
ಇವರ ತಂದೆ ಹಿಂದೆ ಕೃಷಿಯೊಂದಿಗೆ ಸ್ಥಳಿಯ ಸಾಮಾಜಿಕ ಜವಾಬ್ಧಾರಿ ನಿರ್ವಹಿಸುತ್ತಲೇ ಧಾರವಾಡದ ಕೆ.ಎಂ.ಎಫ್. ನಿರ್ಧೇಶಕರಾಗಿದ್ದರು. ತಂದೆಯಂತೆಯೇ ಮಗ ವೇಣು ಕೂಡಾ ಕೃಷಿ, ಕೌಟುಂಬಿಕ ಜವಾಬ್ಧಾರಿ, ಸೇವಾ ಸಹಕಾರಿ ಸಂಘ ದ ಮೂಲಕ ಯುವಕರು ಹಳ್ಳಿಯಲ್ಲಿದ್ದೂ ಪೇಟೆಯಲ್ಲಿರುವವರಂತೆಯೇ ಖುಷಿಯಾಗಿ ಸಂತೃಪ್ತ ಜೀವನ ಮಾಡಬಹುದೆನ್ನುವುದಕ್ಕೆ ದೃಷ್ಟಾಂತವಾಗಿದ್ದಾರೆ.
ಜಯಪ್ರಕಾಶ ನಾಯ್ಕ-
ಬೇಡ್ಕಣಿಯ ಜಯಪ್ರಕಾಶ ನಾಯ್ಕ ತಾಲೂಕಿನ ಯುವ ರೇಷ್ಮೆ ಬೆಳೆಗಾರರಾಗಿ ತಾಲೂಕಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇರುವ ಒಂದೆರಡು ಎಕರೆ ಭೂಮಿಯಲ್ಲಿ ರೇಷ್ಮೆ,ಅಡಿಕೆ,ಭತ್ತ ಬೆಳೆಯುತ್ತಿರುವ ಜಯಪ್ರಕಾಶ ಸಾಂಪ್ರದಾಯಿಕ ರೇಷ್ಮೆ ಜೊತೆಗೆ ಹೊಸ ತಳಿ ಪರಿಚಯಿಸುತ್ತಾ ತಾಲೂಕಿನ ಯುವ ಕೃಷಿಕ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ರೈತ ಕುಟುಂಬದ ಜಯಪ್ರಕಾಶ ಚಿಕ್ಕ ವಯಸ್ಸಿನಲ್ಲಿಯೇ ಕೃಷಿ-ಕೌಟುಂಬಿಕ ಜವಾಬ್ಧಾರಿ ವಹಿಸಿಕೊಂಡವರು. ರೇಷ್ಮೆಯಲ್ಲಿ ಖಾಸಗಿ ಕಂಪನಿಗಳ ಸಹಭಾಗಿತ್ವದ ಯೋಜನೆಯ ಸಿದ್ಧಾಪುರ ತಾಲೂಕಿನ ಪ್ರವರ್ತಕರು. ಕೃಷಿ- ಕುಟುಂಬಗಳ ವೈಯಕ್ತಿಕ ಜವಾಬ್ಧಾರಿಯ ಜೊತೆಗೆ ಬೇಡ್ಕಣಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮೀತಿ ಅಧ್ಯಕ್ಷರಾಗಿ ಕೆಲಸಮಾಡುತ್ತಾ ಶಾಲೆಯನ್ನು ಉತ್ತಮ ಶಾಲೆಯನ್ನಾಗಿಸಲು ಅಳಿಲು ಸೇವೆ ಸಲ್ಲಿಸುತಿದ್ದಾರೆ. ಕೃಷಿ,ವ್ಯಾಪಾರ, ಗ್ರಾಮದ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮೀತಿಯ ಅಧ್ಯಕ್ಷರಾಗಿ ಆಸಕ್ತಿಯಿಂದ ಕೆಲಸಮಾಡುತ್ತಿರುವ ಇವರ ಅಭಿರುಚಿ ಆಸಕ್ತಿಗಳಿಗೆ ಅವರ ಕೃಷಿ ಸಾಧನೆ ಮತ್ತು ಶಾಲೆಯ ವಿಭಿನ್ನ ಪ್ರಯೋಗಗಳೇ ಸಾಕ್ಷಿ.
ಕೃಷಿಯನ್ನು ಆಸಕ್ತಿಯಿಂದ ಮಾಡಿದರೆ ಅದು ಬದುಕುಕೊಡಬಹುದೆಂಬುದಕ್ಕೆ ಬಿದ್ರಕಾನ ವಿ.ಎಸ್.ಎಸ್. ನಿರ್ದೇಶಕ ವೇಣು ಮತ್ತು ಬೇಡ್ಕಣಿ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮೀತಿ ಅಧ್ಯಕ್ಷ ಜಯಪ್ರಕಾಶ ಮಾದರಿ. ಇಂಥ ಯುವಕರು ಇತರರಿಗೂ ಮಾದರಿ ಎಂದರೆ ಅತಿಶಯೋಕ್ತಿಯಲ್ಲ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *